ನವದೆಹಲಿ: ಹಿಂದೆಲ್ಲ ಏಕದಿನ ವಿಶ್ವಕಪ್ ಟೂರ್ನಿಗಳ ವೇಳಾಪಟ್ಟಿ ವರ್ಷಕ್ಕೆ ಮೊದಲೇ ಪ್ರಕಟಗೊಳ್ಳುತ್ತಿತ್ತು. ಈ ಬಾರಿ ಈಗಾಗಲೆ ಸಾಕಷ್ಟು ತಡವಾಗುತ್ತ ಬಂದಿರುವ ವಿಶ್ವಕಪ್ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಮತ್ತು ಐಸಿಸಿ ಕೊನೆಗೂ ಜಂಟಿಯಾಗಿ ಮುಹೂರ್ತ ನಿಗದಿಪಡಿಸಿದೆ. ಟೂರ್ನಿಗೆ ಭರ್ತಿ 100 ದಿನಗಳು ಬಾಕಿ ಇರುವಾಗ ಅಂದರೆ ಜೂನ್ 27ರಂದು ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಮತ್ತು ಐಸಿಸಿ ಶನಿವಾರ ಪ್ರಕಟಿಸಿದೆ.
ಹಲವಾರು ಕಾರಣಗಳಿಂದಾಗಿ ಮುಂದೂಡಲ್ಪಡುತ್ತ ಬಂದ ಏಕದಿನ ವಿಶ್ವಕಪ್ ವೇಳಾಪಟ್ಟಿಗೆ ಇತ್ತೀಚೆಗೆ ಪಾಕಿಸ್ತಾನದ ತಗಾದೆಯಿಂದಾಗಿ ತೊಂದರೆಯಾಗಿತ್ತು. ಇದೀಗ ಎಲ್ಲ ವಿಘ್ನಗಳು ನಿವಾರಣೆಯಾಗಿದ್ದು, ಜೂನ್ 27ರಂದು ಮುಂಬೈನಲ್ಲಿ ನಡೆಯಲಿರುವ ವಿಶೇಷ ಸಮಾರಂಭವೊಂದರಲ್ಲಿ 13ನೇ ಆವೃತ್ತಿಯ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಬೆಳಗ್ಗೆ 11.30ಕ್ಕೆ ಬಿಡುಗಡೆ ಮಾಡಲು ಬಿಸಿಸಿಐ ಮತ್ತು ಐಸಿಸಿ ಸಿದ್ಧತೆ ನಡೆಸಿದೆ.
ಸಂಭಾವ್ಯ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 5ರಂದು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ಹಾಲಿ ರನ್ನರ್ಅಪ್ ನ್ಯೂಜಿಲೆಂಡ್ ತಂಡಗಳ ನಡುವಿನ ಮುಖಾಮುಖಿಯೊಂದಿಗೆ ಅಹಮದಾಬಾದ್ನಲ್ಲಿ ಟೂರ್ನಿಗೆ ಚಾಲನೆ ಸಿಗಲಿದೆ. ನವೆಂಬರ್ 19ರಂದು ಫೈನಲ್ ಪಂದ್ಯ ಕೂಡ ಇಲ್ಲೇ ನಡೆಯಲಿದೆ. ಭಾರತ ತಂಡ ಅಕ್ಟೋಬರ್ 8ರಂದು ಚೆನ್ನೈನಲ್ಲಿ ಆಸ್ಟ್ರೆಲಿಯಾ ವಿರುದ್ಧ ಅಭಿಯಾನ ಆರಂಭಿಸಲಿದ್ದರೆ, ಅಕ್ಟೋಬರ್ 15ರಂದು ಪಾಕಿಸ್ತಾನ ವಿರುದ್ಧ ಅಹಮದಾಬಾದ್ನಲ್ಲಿ ಹೈ-ವೋಲ್ಟೇಜ್ ಪಂದ್ಯವನ್ನು ಆಡಲಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…