ಕ್ರೀಡೆ

ಏಕದಿನ ವಿಶ್ವಕಪ್​: ವೇಳಾಪಟ್ಟಿ ಪ್ರಕಟಿಸಲು ಮುಹೂರ್ತ ಫಿಕ್ಸ್​ ಮಾಡಿದ ಬಿಸಿಸಿಐ ಮತ್ತು ಐಸಿಸಿ

ನವದೆಹಲಿ: ಹಿಂದೆಲ್ಲ ಏಕದಿನ ವಿಶ್ವಕಪ್​ ಟೂರ್ನಿಗಳ ವೇಳಾಪಟ್ಟಿ ವರ್ಷಕ್ಕೆ ಮೊದಲೇ ಪ್ರಕಟಗೊಳ್ಳುತ್ತಿತ್ತು. ಈ ಬಾರಿ ಈಗಾಗಲೆ ಸಾಕಷ್ಟು ತಡವಾಗುತ್ತ ಬಂದಿರುವ ವಿಶ್ವಕಪ್​ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಮತ್ತು ಐಸಿಸಿ ಕೊನೆಗೂ ಜಂಟಿಯಾಗಿ ಮುಹೂರ್ತ ನಿಗದಿಪಡಿಸಿದೆ. ಟೂರ್ನಿಗೆ ಭರ್ತಿ 100 ದಿನಗಳು ಬಾಕಿ ಇರುವಾಗ ಅಂದರೆ ಜೂನ್​ 27ರಂದು ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಮತ್ತು ಐಸಿಸಿ ಶನಿವಾರ ಪ್ರಕಟಿಸಿದೆ.

ಹಲವಾರು ಕಾರಣಗಳಿಂದಾಗಿ ಮುಂದೂಡಲ್ಪಡುತ್ತ ಬಂದ ಏಕದಿನ ವಿಶ್ವಕಪ್​ ವೇಳಾಪಟ್ಟಿಗೆ ಇತ್ತೀಚೆಗೆ ಪಾಕಿಸ್ತಾನದ ತಗಾದೆಯಿಂದಾಗಿ ತೊಂದರೆಯಾಗಿತ್ತು. ಇದೀಗ ಎಲ್ಲ ವಿಘ್ನಗಳು ನಿವಾರಣೆಯಾಗಿದ್ದು, ಜೂನ್​ 27ರಂದು ಮುಂಬೈನಲ್ಲಿ ನಡೆಯಲಿರುವ ವಿಶೇಷ ಸಮಾರಂಭವೊಂದರಲ್ಲಿ 13ನೇ ಆವೃತ್ತಿಯ ಏಕದಿನ ವಿಶ್ವಕಪ್​ ವೇಳಾಪಟ್ಟಿಯನ್ನು ಬೆಳಗ್ಗೆ 11.30ಕ್ಕೆ ಬಿಡುಗಡೆ ಮಾಡಲು ಬಿಸಿಸಿಐ ಮತ್ತು ಐಸಿಸಿ ಸಿದ್ಧತೆ ನಡೆಸಿದೆ.

ಸಂಭಾವ್ಯ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್​ 5ರಂದು ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಮತ್ತು ಹಾಲಿ ರನ್ನರ್​ಅಪ್​ ನ್ಯೂಜಿಲೆಂಡ್​ ತಂಡಗಳ ನಡುವಿನ ಮುಖಾಮುಖಿಯೊಂದಿಗೆ ಅಹಮದಾಬಾದ್​ನಲ್ಲಿ ಟೂರ್ನಿಗೆ ಚಾಲನೆ ಸಿಗಲಿದೆ. ನವೆಂಬರ್​ 19ರಂದು ಫೈನಲ್​ ಪಂದ್ಯ ಕೂಡ ಇಲ್ಲೇ ನಡೆಯಲಿದೆ. ಭಾರತ ತಂಡ ಅಕ್ಟೋಬರ್​ 8ರಂದು ಚೆನ್ನೈನಲ್ಲಿ ಆಸ್ಟ್ರೆಲಿಯಾ ವಿರುದ್ಧ ಅಭಿಯಾನ ಆರಂಭಿಸಲಿದ್ದರೆ, ಅಕ್ಟೋಬರ್​ 15ರಂದು ಪಾಕಿಸ್ತಾನ ವಿರುದ್ಧ ಅಹಮದಾಬಾದ್​ನಲ್ಲಿ ಹೈ-ವೋಲ್ಟೇಜ್​ ಪಂದ್ಯವನ್ನು ಆಡಲಿದೆ.

andolanait

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

51 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

4 hours ago