ಕ್ರೀಡೆ

ಏಕದಿನ ವಿಶ್ವಕಪ್​: ವೇಳಾಪಟ್ಟಿ ಪ್ರಕಟಿಸಲು ಮುಹೂರ್ತ ಫಿಕ್ಸ್​ ಮಾಡಿದ ಬಿಸಿಸಿಐ ಮತ್ತು ಐಸಿಸಿ

ನವದೆಹಲಿ: ಹಿಂದೆಲ್ಲ ಏಕದಿನ ವಿಶ್ವಕಪ್​ ಟೂರ್ನಿಗಳ ವೇಳಾಪಟ್ಟಿ ವರ್ಷಕ್ಕೆ ಮೊದಲೇ ಪ್ರಕಟಗೊಳ್ಳುತ್ತಿತ್ತು. ಈ ಬಾರಿ ಈಗಾಗಲೆ ಸಾಕಷ್ಟು ತಡವಾಗುತ್ತ ಬಂದಿರುವ ವಿಶ್ವಕಪ್​ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಮತ್ತು ಐಸಿಸಿ ಕೊನೆಗೂ ಜಂಟಿಯಾಗಿ ಮುಹೂರ್ತ ನಿಗದಿಪಡಿಸಿದೆ. ಟೂರ್ನಿಗೆ ಭರ್ತಿ 100 ದಿನಗಳು ಬಾಕಿ ಇರುವಾಗ ಅಂದರೆ ಜೂನ್​ 27ರಂದು ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಮತ್ತು ಐಸಿಸಿ ಶನಿವಾರ ಪ್ರಕಟಿಸಿದೆ.

ಹಲವಾರು ಕಾರಣಗಳಿಂದಾಗಿ ಮುಂದೂಡಲ್ಪಡುತ್ತ ಬಂದ ಏಕದಿನ ವಿಶ್ವಕಪ್​ ವೇಳಾಪಟ್ಟಿಗೆ ಇತ್ತೀಚೆಗೆ ಪಾಕಿಸ್ತಾನದ ತಗಾದೆಯಿಂದಾಗಿ ತೊಂದರೆಯಾಗಿತ್ತು. ಇದೀಗ ಎಲ್ಲ ವಿಘ್ನಗಳು ನಿವಾರಣೆಯಾಗಿದ್ದು, ಜೂನ್​ 27ರಂದು ಮುಂಬೈನಲ್ಲಿ ನಡೆಯಲಿರುವ ವಿಶೇಷ ಸಮಾರಂಭವೊಂದರಲ್ಲಿ 13ನೇ ಆವೃತ್ತಿಯ ಏಕದಿನ ವಿಶ್ವಕಪ್​ ವೇಳಾಪಟ್ಟಿಯನ್ನು ಬೆಳಗ್ಗೆ 11.30ಕ್ಕೆ ಬಿಡುಗಡೆ ಮಾಡಲು ಬಿಸಿಸಿಐ ಮತ್ತು ಐಸಿಸಿ ಸಿದ್ಧತೆ ನಡೆಸಿದೆ.

ಸಂಭಾವ್ಯ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್​ 5ರಂದು ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಮತ್ತು ಹಾಲಿ ರನ್ನರ್​ಅಪ್​ ನ್ಯೂಜಿಲೆಂಡ್​ ತಂಡಗಳ ನಡುವಿನ ಮುಖಾಮುಖಿಯೊಂದಿಗೆ ಅಹಮದಾಬಾದ್​ನಲ್ಲಿ ಟೂರ್ನಿಗೆ ಚಾಲನೆ ಸಿಗಲಿದೆ. ನವೆಂಬರ್​ 19ರಂದು ಫೈನಲ್​ ಪಂದ್ಯ ಕೂಡ ಇಲ್ಲೇ ನಡೆಯಲಿದೆ. ಭಾರತ ತಂಡ ಅಕ್ಟೋಬರ್​ 8ರಂದು ಚೆನ್ನೈನಲ್ಲಿ ಆಸ್ಟ್ರೆಲಿಯಾ ವಿರುದ್ಧ ಅಭಿಯಾನ ಆರಂಭಿಸಲಿದ್ದರೆ, ಅಕ್ಟೋಬರ್​ 15ರಂದು ಪಾಕಿಸ್ತಾನ ವಿರುದ್ಧ ಅಹಮದಾಬಾದ್​ನಲ್ಲಿ ಹೈ-ವೋಲ್ಟೇಜ್​ ಪಂದ್ಯವನ್ನು ಆಡಲಿದೆ.

andolanait

Recent Posts

ಟ್ರಂಪ್‌ ಮೇಲಿನ ದಾಳಿ ಇದೇ ಮೊದಲೇನಲ್ಲ ; ಈ ಹಿಂದೆಯೂ ನಡೆದಿತ್ತು ಹತ್ಯೆಗೆ ಯತ್ನ !

ವಾಷಿಂಗ್ಟನ್‌ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ  ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್‌ನ ಘಟನೆ…

3 mins ago

ಛಡ್ಡಾ ಬಿಜೆಪಿ ಸೇರ್ಪಡೆ ; ಜೆನ್-ಝೀಗಳಿಂದ ಅನ್‌ಫಾಲೋ ಅಭಿಯಾನ

ನವದೆಹಲಿ : ರಾಜ್ಯಸಭಾ ಸಂಸದ ರಾಘವ್‌ ಛಡ್ಡಾ ಅವರು ಎಎಪಿ(ಆಮ್‌ ಆದ್ಮಿ ಪಾರ್ಟಿ) ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಸಾಮಾಜಿಕ…

17 mins ago

ಮೇ.2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಹೈ ಆದೇಶದ ಬೆನ್ನಲ್ಲೇ ಸಕಲ ಸಿದ್ಧತೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್‌ಜಿ ಫಸ್ಟ್…

32 mins ago

ಓದುಗರ ಪತ್ರ | ಸಿಇಟಿ ; ನಿಯಮಗಳಿಗೆ ತಿದ್ದುಪಡಿ ಅವಶ್ಯ

ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಸೋಲಾದದ್ದು ಮುಚ್ಚುಮರೆಯ ಕ್ಷೇತ್ರ ಪುನರ್‌ ವಿಂಗಡಣೆಗೆ

ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…

2 hours ago

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ : ದಾಳಿಗೆ ಮೋದಿ ಪ್ರತಿಕ್ರಿಯೆ

ನವದೆಹಲಿ : ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…

2 hours ago