ನವದೆಹಲಿ: ಹಿಂದೆಲ್ಲ ಏಕದಿನ ವಿಶ್ವಕಪ್ ಟೂರ್ನಿಗಳ ವೇಳಾಪಟ್ಟಿ ವರ್ಷಕ್ಕೆ ಮೊದಲೇ ಪ್ರಕಟಗೊಳ್ಳುತ್ತಿತ್ತು. ಈ ಬಾರಿ ಈಗಾಗಲೆ ಸಾಕಷ್ಟು ತಡವಾಗುತ್ತ ಬಂದಿರುವ ವಿಶ್ವಕಪ್ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಮತ್ತು ಐಸಿಸಿ ಕೊನೆಗೂ ಜಂಟಿಯಾಗಿ ಮುಹೂರ್ತ ನಿಗದಿಪಡಿಸಿದೆ. ಟೂರ್ನಿಗೆ ಭರ್ತಿ 100 ದಿನಗಳು ಬಾಕಿ ಇರುವಾಗ ಅಂದರೆ ಜೂನ್ 27ರಂದು ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಮತ್ತು ಐಸಿಸಿ ಶನಿವಾರ ಪ್ರಕಟಿಸಿದೆ.
ಹಲವಾರು ಕಾರಣಗಳಿಂದಾಗಿ ಮುಂದೂಡಲ್ಪಡುತ್ತ ಬಂದ ಏಕದಿನ ವಿಶ್ವಕಪ್ ವೇಳಾಪಟ್ಟಿಗೆ ಇತ್ತೀಚೆಗೆ ಪಾಕಿಸ್ತಾನದ ತಗಾದೆಯಿಂದಾಗಿ ತೊಂದರೆಯಾಗಿತ್ತು. ಇದೀಗ ಎಲ್ಲ ವಿಘ್ನಗಳು ನಿವಾರಣೆಯಾಗಿದ್ದು, ಜೂನ್ 27ರಂದು ಮುಂಬೈನಲ್ಲಿ ನಡೆಯಲಿರುವ ವಿಶೇಷ ಸಮಾರಂಭವೊಂದರಲ್ಲಿ 13ನೇ ಆವೃತ್ತಿಯ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಬೆಳಗ್ಗೆ 11.30ಕ್ಕೆ ಬಿಡುಗಡೆ ಮಾಡಲು ಬಿಸಿಸಿಐ ಮತ್ತು ಐಸಿಸಿ ಸಿದ್ಧತೆ ನಡೆಸಿದೆ.
ಸಂಭಾವ್ಯ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 5ರಂದು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ಹಾಲಿ ರನ್ನರ್ಅಪ್ ನ್ಯೂಜಿಲೆಂಡ್ ತಂಡಗಳ ನಡುವಿನ ಮುಖಾಮುಖಿಯೊಂದಿಗೆ ಅಹಮದಾಬಾದ್ನಲ್ಲಿ ಟೂರ್ನಿಗೆ ಚಾಲನೆ ಸಿಗಲಿದೆ. ನವೆಂಬರ್ 19ರಂದು ಫೈನಲ್ ಪಂದ್ಯ ಕೂಡ ಇಲ್ಲೇ ನಡೆಯಲಿದೆ. ಭಾರತ ತಂಡ ಅಕ್ಟೋಬರ್ 8ರಂದು ಚೆನ್ನೈನಲ್ಲಿ ಆಸ್ಟ್ರೆಲಿಯಾ ವಿರುದ್ಧ ಅಭಿಯಾನ ಆರಂಭಿಸಲಿದ್ದರೆ, ಅಕ್ಟೋಬರ್ 15ರಂದು ಪಾಕಿಸ್ತಾನ ವಿರುದ್ಧ ಅಹಮದಾಬಾದ್ನಲ್ಲಿ ಹೈ-ವೋಲ್ಟೇಜ್ ಪಂದ್ಯವನ್ನು ಆಡಲಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…