ಕ್ರೀಡೆ

ಏಕದಿನ ವಿಶ್ವಕಪ್‌: ಆರಂಭಿಕ ಬ್ಯಾಟರ್​ ಶುಭ್‌ಮನ್ ಗಿಲ್ ಗೆ ಡೆಂಗ್ಯೂ

ಚೆನ್ನೈ: ಭಾರತ ತಂಡದ ಯುವ ಆರಂಭಿಕ ಬ್ಯಾಟರ್​ ಶುಬ್ಮನ್ ಗಿಲ್ ಡೆಂಗ್ಯೂನಿಂದ ಬಳಲುತ್ತಿದ್ದಾರೆ ಎಂಬುದಾಗಿ ಸುದ್ದಿಯಾಗಿದೆ. ಇದರಿಂದ ವಿಶ್ವ ಕಪ್​ಗೆ ಸಜ್ಜಾಗಿರುವ ಭಾರತಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾನುವಾರ (ಅಕ್ಟೋಬರ್ 8) ಆಸ್ಟ್ರೇಲಿಯಾ ವಿರುದ್ಧದ ಭಾರತದ ಮೊದಲ ವಿಶ್ವಕಪ್ ಪಂದ್ಯದಲ್ಲಿ 24 ವರ್ಷದ ಗಿಲ್​ ಆಡುವ ಸಾಧ್ಯತೆಯಿಲ್ಲ.

ಬಲಗೈ ಬ್ಯಾಟರ್​ 2023 ರರಲ್ಲಿ ಏಕ ದಿನ ಮಾದರಿಯಲ್ಲಿ ಭಾರತಕ್ಕಾಗಿ ಅತಿ ಹೆಚ್ಚು ರನ್ ಗಳಿಸಿದವರಾಗಿರುವುದರಿಂದ ಮೊದಲ ಪಂದ್ಯದ ಅನುಪಸ್ಥಿತಿಯು ತಂಡದ ಪಾಲಿಗೆ ದೊಡ್ಡ ಹಿನ್ನಡೆಯಾಗಿದೆ.

ಗಿಲ್ ಗುರುವಾರದ ತರಬೇತಿ ಅವಧಿಯಲ್ಲಿ ಡೆಂಗ್ಯೂನಿಂದ ಬಳಲುತ್ತಿದ್ದರು. ಭಾರತವು ಶುಕ್ರವಾರ ತ್ತೊಂದು ತರಬೇತಿ ಅವಧಿಯನ್ನು ಹೊಂದಿರುತ್ತದೆ. 24 ವರ್ಷದ ಆಟಗಾರ ಅದರ ಭಾಗವಾಗಿರುವುದಿಲ್ಲ ಎನ್ನಲಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಗಿಲ್ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಅವರ ಬದಲಿಗೆ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂಬುದಾಗಿ ವರದಿ ಮಾಡಲಾಗಿದೆ.

ಒಂದು ವೇಳೆ ಗಿಲ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಚೇತರಿಸಿಕೊಳ್ಳಲು ವಿಫಲವಾದರೆ, ಇನ್ನಿಂಗ್ಸ್ ಆರಂಭದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಇಶಾನ್ ಕಿಶನ್ ಅಥವಾ ಕೆಎಲ್ ರಾಹುಲ್ ಆಡಲು ಇಳಿಯಬೇಕೇ ಎಂಬ ಬಗ್ಗೆ ಭಾರತ ತನ್ನ ಆಯ್ಕೆಗಳನ್ನು ಪರಿಶೀಲಿಸಲಿದೆ. ಪ್ಲೇಯಿಂಗ್ ಇಲೆವೆನ್​ನಲ್ಲಿ ಗಿಲ್​ ಅನುಪಸ್ಥಿತಿಯು ತಂಡಕ್ಕೆ ಹಿನ್ನಡೆಯಾಗಿದೆ.

ಗಿಲ್ ಈ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್ ವಿರುದ್ಧ ಅದ್ಭುತ ದ್ವಿಶತಕ ಗಳಿಸಿದ್ದರು. ವೆಸ್ಟ್ ಇಂಡೀಸ್ ಪ್ರವಾಸದ ಸಮಯದಲ್ಲಿ ಸ್ವಲ್ಪ ಕುಸಿತವನ್ನು ಹೊರತುಪಡಿಸಿ, ಅವರು ನಂಬಲಾಗದ ಸ್ಥಿರತೆಯನ್ನು ತೋರಿಸಿದ್ದರು.

andolanait

Recent Posts

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

1 min ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

16 mins ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

33 mins ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

42 mins ago

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌ ಸ್ಪಷ್ಟನೆ

ವಾಷಿಂಗ್ಟನ್:‌ ಇರಾನ್‌ ಜೊತೆ ಕದನ ವಿರಾಮ್‌ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು…

1 hour ago

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

2 hours ago