ಕ್ರೀಡೆ

ಏಕದಿನ ವಿಶ್ವಕಪ್‌: ಆರಂಭಿಕ ಬ್ಯಾಟರ್​ ಶುಭ್‌ಮನ್ ಗಿಲ್ ಗೆ ಡೆಂಗ್ಯೂ

ಚೆನ್ನೈ: ಭಾರತ ತಂಡದ ಯುವ ಆರಂಭಿಕ ಬ್ಯಾಟರ್​ ಶುಬ್ಮನ್ ಗಿಲ್ ಡೆಂಗ್ಯೂನಿಂದ ಬಳಲುತ್ತಿದ್ದಾರೆ ಎಂಬುದಾಗಿ ಸುದ್ದಿಯಾಗಿದೆ. ಇದರಿಂದ ವಿಶ್ವ ಕಪ್​ಗೆ ಸಜ್ಜಾಗಿರುವ ಭಾರತಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾನುವಾರ (ಅಕ್ಟೋಬರ್ 8) ಆಸ್ಟ್ರೇಲಿಯಾ ವಿರುದ್ಧದ ಭಾರತದ ಮೊದಲ ವಿಶ್ವಕಪ್ ಪಂದ್ಯದಲ್ಲಿ 24 ವರ್ಷದ ಗಿಲ್​ ಆಡುವ ಸಾಧ್ಯತೆಯಿಲ್ಲ.

ಬಲಗೈ ಬ್ಯಾಟರ್​ 2023 ರರಲ್ಲಿ ಏಕ ದಿನ ಮಾದರಿಯಲ್ಲಿ ಭಾರತಕ್ಕಾಗಿ ಅತಿ ಹೆಚ್ಚು ರನ್ ಗಳಿಸಿದವರಾಗಿರುವುದರಿಂದ ಮೊದಲ ಪಂದ್ಯದ ಅನುಪಸ್ಥಿತಿಯು ತಂಡದ ಪಾಲಿಗೆ ದೊಡ್ಡ ಹಿನ್ನಡೆಯಾಗಿದೆ.

ಗಿಲ್ ಗುರುವಾರದ ತರಬೇತಿ ಅವಧಿಯಲ್ಲಿ ಡೆಂಗ್ಯೂನಿಂದ ಬಳಲುತ್ತಿದ್ದರು. ಭಾರತವು ಶುಕ್ರವಾರ ತ್ತೊಂದು ತರಬೇತಿ ಅವಧಿಯನ್ನು ಹೊಂದಿರುತ್ತದೆ. 24 ವರ್ಷದ ಆಟಗಾರ ಅದರ ಭಾಗವಾಗಿರುವುದಿಲ್ಲ ಎನ್ನಲಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಗಿಲ್ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಅವರ ಬದಲಿಗೆ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂಬುದಾಗಿ ವರದಿ ಮಾಡಲಾಗಿದೆ.

ಒಂದು ವೇಳೆ ಗಿಲ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಚೇತರಿಸಿಕೊಳ್ಳಲು ವಿಫಲವಾದರೆ, ಇನ್ನಿಂಗ್ಸ್ ಆರಂಭದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಇಶಾನ್ ಕಿಶನ್ ಅಥವಾ ಕೆಎಲ್ ರಾಹುಲ್ ಆಡಲು ಇಳಿಯಬೇಕೇ ಎಂಬ ಬಗ್ಗೆ ಭಾರತ ತನ್ನ ಆಯ್ಕೆಗಳನ್ನು ಪರಿಶೀಲಿಸಲಿದೆ. ಪ್ಲೇಯಿಂಗ್ ಇಲೆವೆನ್​ನಲ್ಲಿ ಗಿಲ್​ ಅನುಪಸ್ಥಿತಿಯು ತಂಡಕ್ಕೆ ಹಿನ್ನಡೆಯಾಗಿದೆ.

ಗಿಲ್ ಈ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್ ವಿರುದ್ಧ ಅದ್ಭುತ ದ್ವಿಶತಕ ಗಳಿಸಿದ್ದರು. ವೆಸ್ಟ್ ಇಂಡೀಸ್ ಪ್ರವಾಸದ ಸಮಯದಲ್ಲಿ ಸ್ವಲ್ಪ ಕುಸಿತವನ್ನು ಹೊರತುಪಡಿಸಿ, ಅವರು ನಂಬಲಾಗದ ಸ್ಥಿರತೆಯನ್ನು ತೋರಿಸಿದ್ದರು.

andolanait

Recent Posts

ಸ್ವತಃ ಎದೆಗೆ ಗುಂಡಿಟ್ಟುಕೊಂಡ ಸಿ.ಜೆ.ರಾಯ್ :‌ ಮರಣೋತ್ತರ ಪರೀಕ್ಷೆಯಲ್ಲಿ ಧೃಢ

ಬೆಂಗಳೂರು: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…

58 mins ago

ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…

59 mins ago

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…

1 hour ago

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್: ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…

2 hours ago

ತಗಡೂರು ಖಾದಿ ಕೇಂದ್ರ ಪುನಶ್ಚೇತನಕ್ಕೆ ಪಣ

ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ…

2 hours ago

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್‌…

3 hours ago