ಕ್ರೀಡೆ

ಏಕದಿನ ವಿಶ್ವಕಪ್‌: ಆರಂಭಿಕ ಬ್ಯಾಟರ್​ ಶುಭ್‌ಮನ್ ಗಿಲ್ ಗೆ ಡೆಂಗ್ಯೂ

ಚೆನ್ನೈ: ಭಾರತ ತಂಡದ ಯುವ ಆರಂಭಿಕ ಬ್ಯಾಟರ್​ ಶುಬ್ಮನ್ ಗಿಲ್ ಡೆಂಗ್ಯೂನಿಂದ ಬಳಲುತ್ತಿದ್ದಾರೆ ಎಂಬುದಾಗಿ ಸುದ್ದಿಯಾಗಿದೆ. ಇದರಿಂದ ವಿಶ್ವ ಕಪ್​ಗೆ ಸಜ್ಜಾಗಿರುವ ಭಾರತಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾನುವಾರ (ಅಕ್ಟೋಬರ್ 8) ಆಸ್ಟ್ರೇಲಿಯಾ ವಿರುದ್ಧದ ಭಾರತದ ಮೊದಲ ವಿಶ್ವಕಪ್ ಪಂದ್ಯದಲ್ಲಿ 24 ವರ್ಷದ ಗಿಲ್​ ಆಡುವ ಸಾಧ್ಯತೆಯಿಲ್ಲ.

ಬಲಗೈ ಬ್ಯಾಟರ್​ 2023 ರರಲ್ಲಿ ಏಕ ದಿನ ಮಾದರಿಯಲ್ಲಿ ಭಾರತಕ್ಕಾಗಿ ಅತಿ ಹೆಚ್ಚು ರನ್ ಗಳಿಸಿದವರಾಗಿರುವುದರಿಂದ ಮೊದಲ ಪಂದ್ಯದ ಅನುಪಸ್ಥಿತಿಯು ತಂಡದ ಪಾಲಿಗೆ ದೊಡ್ಡ ಹಿನ್ನಡೆಯಾಗಿದೆ.

ಗಿಲ್ ಗುರುವಾರದ ತರಬೇತಿ ಅವಧಿಯಲ್ಲಿ ಡೆಂಗ್ಯೂನಿಂದ ಬಳಲುತ್ತಿದ್ದರು. ಭಾರತವು ಶುಕ್ರವಾರ ತ್ತೊಂದು ತರಬೇತಿ ಅವಧಿಯನ್ನು ಹೊಂದಿರುತ್ತದೆ. 24 ವರ್ಷದ ಆಟಗಾರ ಅದರ ಭಾಗವಾಗಿರುವುದಿಲ್ಲ ಎನ್ನಲಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಗಿಲ್ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಅವರ ಬದಲಿಗೆ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂಬುದಾಗಿ ವರದಿ ಮಾಡಲಾಗಿದೆ.

ಒಂದು ವೇಳೆ ಗಿಲ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಚೇತರಿಸಿಕೊಳ್ಳಲು ವಿಫಲವಾದರೆ, ಇನ್ನಿಂಗ್ಸ್ ಆರಂಭದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಇಶಾನ್ ಕಿಶನ್ ಅಥವಾ ಕೆಎಲ್ ರಾಹುಲ್ ಆಡಲು ಇಳಿಯಬೇಕೇ ಎಂಬ ಬಗ್ಗೆ ಭಾರತ ತನ್ನ ಆಯ್ಕೆಗಳನ್ನು ಪರಿಶೀಲಿಸಲಿದೆ. ಪ್ಲೇಯಿಂಗ್ ಇಲೆವೆನ್​ನಲ್ಲಿ ಗಿಲ್​ ಅನುಪಸ್ಥಿತಿಯು ತಂಡಕ್ಕೆ ಹಿನ್ನಡೆಯಾಗಿದೆ.

ಗಿಲ್ ಈ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್ ವಿರುದ್ಧ ಅದ್ಭುತ ದ್ವಿಶತಕ ಗಳಿಸಿದ್ದರು. ವೆಸ್ಟ್ ಇಂಡೀಸ್ ಪ್ರವಾಸದ ಸಮಯದಲ್ಲಿ ಸ್ವಲ್ಪ ಕುಸಿತವನ್ನು ಹೊರತುಪಡಿಸಿ, ಅವರು ನಂಬಲಾಗದ ಸ್ಥಿರತೆಯನ್ನು ತೋರಿಸಿದ್ದರು.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago