ಕ್ರೀಡೆ

ಏಕದಿನ ವರ್ಲ್ಡ್‌ ಕಪ್‌ ಫೈನಲ್‌: 20 ವರ್ಷಗಳ ನಂತರ ಎದುರಾದ ಇಂಡೋ-ಆಸೀಸ್‌

ಅಹಮದಾಬಾದ್‌  : ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್‌ ಫೈನಲ್‌ ನಲ್ಲಿ ಕಾದಾಟ ನಡೆಸಲಿದ್ದು, ಸತತ ಎರಡು ದಶಕಗಳ ನಂತರ ಇತ್ತಂಡಗಳು ತಂಡಗಳು ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಐಸಿಸಿ ಏಕದಿನ ವಿಶ್ವಕಪ್‌-2023 ಅಂತಿಮ ಘಟ್ಟ ತಲುಪಿದೆ. ಮೊದಲ ಸೆಮಿಸ್‌ ನಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಭಾರತ ಗೆದ್ದು ಫೈನಲ್‌ ಪ್ರವೇಶಿಸಿದರೆ, ಎರಡನೆ ಸೆಮಿಸ್‌ ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಫೈನಲ್‌ಗೆ ಆಸ್ಟ್ರೆಲಿಯಾ ಪ್ರವೇಶ ಪಡೆದಿದೆ.

ಅತಿಥೇಯ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ನ.19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಮದ್ಯಾಹ್ನ 2.00 ಗಂಟಗೆ ಪ್ರಶಸ್ತಿಗಾಗಿ ಸೆಣೆಸಾಡಲಿವೆ.

ಮೂರು ಬಾರಿ ಫೈನಲ್‌ ತಲುಪಿರುವ ಭಾರತ 2 ಬಾರಿ ವಿಶ್ವಕಪ್‌ ಎತ್ತಿ ಹಿಡಿದಿರೆ, 7ಬಾರಿ ಫೈನಲ್‌ ಪ್ರವೇಶಿಸಿರುವ ಆಸ್ಟ್ರೇಲಿಯಾ ತಂಡ 5 ಬಾರಿ ಟ್ರೋಫಿ ಗೆದ್ದಿದೆ.

ದ. ಆಫ್ರಿಕಾದ ಜೋಹಾನ್ಸ್‌ ಬರ್ಗ್‌ನಲ್ಲಿ ನಡೆದ 2003ರ ವಿಶ್ವಕಪ್‌ ಫೈನಲ್‌ ಹಣಾಹಣೆಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಭಾರತ ಎದುರಿಸಿತ್ತು. ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಸೌರವ್‌ ಗಂಗೂಲಿ ಪಡೆ, ರಿಕ್ಕಿ ಪಾಂಟಿಂಗ್‌ ಅವರ ಆಕರ್ಷಕ ಶತಕ (140) ನೆರವಿನಿಂದ ಆಸ್ಟ್ರೇಲಿಯಾ ತಂಡ 360 ರನ್‌ಗಳ ಬೃಹತ್‌ ಗುರಿಯನ್ನು ನೀಡಿತು.

ಇತ್ತ ಆಸ್ಟ್ರೇಲಿಯಾ ನೀಡಿದ್ದ ಗುರಿ ಬೆನ್ನಟ್ಟಿದ ಭಾರತ 39.2 ಓವರಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 234 ರನ್‌ ಗಳಿಸಲಷ್ಟೇ ಸಕ್ತವಾಯಿತು. ಆಮೂಲಕ ಫೈನಲ್‌ ಪಂದ್ಯದಲ್ಲಿ 125ರನ್‌ಗಳಿಂದ ಪರಾಭವಗೊಂಡು ಟ್ರೋಫಿ ಕನಸು ಭಗ್ನಗೊಂಡಿತು.

ಟೀಂ ಇಂಡಿಯಾ ಪರ ಬಿರುಸಿ ಹೊಡೆತಗಾರ ವಿರೇಂದ್ರ ಸೆಹ್ವಾಗ್‌ 84 ರನ್‌ ಗಳಿಸಿದ್ದೇ ಅತಿಹೆಚ್ಚು, ಮಾಸ್ಟರ್‌ ಬ್ಲಾಸ್ಟರ್‌ ಕೇವಲ 4 ರನ್‌ಗೆ ನಿರ್ಮಿಸಿದರೆ, ನಾಯಕ ಸೌರವ್‌ ಗಂಗೂಲಿ 24 ರನ್‌ ಗಳಿಸಿ ಮರಳಿದರು. ತಂಡಕ್ಕೆ ಚೇತರಿಕೆ ಆಟವಾಡಿದ ದಿ ವಾಲ್‌ ಖ್ಯಾತಿಯ ರಾಹುಲ್‌ ದ್ರಾವೀಡ್‌ 47 ರನ್‌ಗಳಿಸಿದರು, ಯುವರಾಜ್‌ ಸಿಂಗ್‌ 24ರನ್‌ ಗಳಿಸಿ ಪೆವಿಲಿಯನತ್ತ ಹೆಜ್ಜೆ ಹಾಕಿದರು.

ಭಾರತ ಪರ ಹರಭಜನ್‌ ಸಿಂಗ್‌ 2 ವಿಕೆಟ್‌ ಪಡೆದರು. ಆಸ್ಟ್ರೇಲಿಯಾ ಪರ ಮೆಗ್ರಾಥ್‌ 3, ಬ್ರೆಟ್‌ ಲೀ 2 ಹಾಗೂ ಆಲ್‌ರೌಂಡರ್‌ ಸೈಮಂಡ್ಸ್‌ 2 ವಿಕೆಟ್‌ ಪಡೆದರು.

ಇಂಡಿಯಾ-ಆಸ್ಟ್ರೇಲಿಯಾ ವರ್ಲ್ಡ್‌ ಕಪ್‌ ಮುಖಾಮುಖಿ:

ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಐಸಿಸಿ ಏಕದಿನ ವಿಶ್ವಕಪ್‌ ನಲ್ಲಿ ಇದುವರೆಗೆ 13 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಕೇವಲ 5 ಬಾರಿ ಜಯ ಗಳಿಸಿದೆ. ಭಾರತ ಮೇಲೆ ಪಾರುಪತ್ಯ ಸಾಧಿಸಿರುವ ಆಸೀಸ್‌ 8 ಪಂದ್ಯಗಳಲ್ಲಿ ಜಯ ದಾಖಲಿಸಿದೆ.

ನ.19 ರಂದು ನಡೆಯುವ ಪಂದ್ಯದ ನಿರ್ಣಾಯಕ ಹಂತದಲ್ಲಿದ್ದು, ಗೆದ್ದ ತಂಡ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆ. 2015ರ ವರ್ಲ್ಡ್‌ ಕಪ್‌ ಸೆಮಿಸ್‌ನಲ್ಲಿ ಮುಖಾಮುಖಿಯಾಗಿದ್ದು, ಆಸೀಸ್‌ ಗೆಲುವು ದಾಖಲಿಸಿತ್ತು.

andolanait

Recent Posts

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

8 mins ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

50 mins ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

1 hour ago

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…

2 hours ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

2 hours ago

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

2 hours ago