ಕ್ರೀಡೆ

ಏಕದಿನ ವರ್ಲ್ಡ್‌ ಕಪ್‌ ಫೈನಲ್‌: 20 ವರ್ಷಗಳ ನಂತರ ಎದುರಾದ ಇಂಡೋ-ಆಸೀಸ್‌

ಅಹಮದಾಬಾದ್‌  : ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್‌ ಫೈನಲ್‌ ನಲ್ಲಿ ಕಾದಾಟ ನಡೆಸಲಿದ್ದು, ಸತತ ಎರಡು ದಶಕಗಳ ನಂತರ ಇತ್ತಂಡಗಳು ತಂಡಗಳು ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಐಸಿಸಿ ಏಕದಿನ ವಿಶ್ವಕಪ್‌-2023 ಅಂತಿಮ ಘಟ್ಟ ತಲುಪಿದೆ. ಮೊದಲ ಸೆಮಿಸ್‌ ನಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಭಾರತ ಗೆದ್ದು ಫೈನಲ್‌ ಪ್ರವೇಶಿಸಿದರೆ, ಎರಡನೆ ಸೆಮಿಸ್‌ ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಫೈನಲ್‌ಗೆ ಆಸ್ಟ್ರೆಲಿಯಾ ಪ್ರವೇಶ ಪಡೆದಿದೆ.

ಅತಿಥೇಯ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ನ.19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಮದ್ಯಾಹ್ನ 2.00 ಗಂಟಗೆ ಪ್ರಶಸ್ತಿಗಾಗಿ ಸೆಣೆಸಾಡಲಿವೆ.

ಮೂರು ಬಾರಿ ಫೈನಲ್‌ ತಲುಪಿರುವ ಭಾರತ 2 ಬಾರಿ ವಿಶ್ವಕಪ್‌ ಎತ್ತಿ ಹಿಡಿದಿರೆ, 7ಬಾರಿ ಫೈನಲ್‌ ಪ್ರವೇಶಿಸಿರುವ ಆಸ್ಟ್ರೇಲಿಯಾ ತಂಡ 5 ಬಾರಿ ಟ್ರೋಫಿ ಗೆದ್ದಿದೆ.

ದ. ಆಫ್ರಿಕಾದ ಜೋಹಾನ್ಸ್‌ ಬರ್ಗ್‌ನಲ್ಲಿ ನಡೆದ 2003ರ ವಿಶ್ವಕಪ್‌ ಫೈನಲ್‌ ಹಣಾಹಣೆಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಭಾರತ ಎದುರಿಸಿತ್ತು. ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಸೌರವ್‌ ಗಂಗೂಲಿ ಪಡೆ, ರಿಕ್ಕಿ ಪಾಂಟಿಂಗ್‌ ಅವರ ಆಕರ್ಷಕ ಶತಕ (140) ನೆರವಿನಿಂದ ಆಸ್ಟ್ರೇಲಿಯಾ ತಂಡ 360 ರನ್‌ಗಳ ಬೃಹತ್‌ ಗುರಿಯನ್ನು ನೀಡಿತು.

ಇತ್ತ ಆಸ್ಟ್ರೇಲಿಯಾ ನೀಡಿದ್ದ ಗುರಿ ಬೆನ್ನಟ್ಟಿದ ಭಾರತ 39.2 ಓವರಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 234 ರನ್‌ ಗಳಿಸಲಷ್ಟೇ ಸಕ್ತವಾಯಿತು. ಆಮೂಲಕ ಫೈನಲ್‌ ಪಂದ್ಯದಲ್ಲಿ 125ರನ್‌ಗಳಿಂದ ಪರಾಭವಗೊಂಡು ಟ್ರೋಫಿ ಕನಸು ಭಗ್ನಗೊಂಡಿತು.

ಟೀಂ ಇಂಡಿಯಾ ಪರ ಬಿರುಸಿ ಹೊಡೆತಗಾರ ವಿರೇಂದ್ರ ಸೆಹ್ವಾಗ್‌ 84 ರನ್‌ ಗಳಿಸಿದ್ದೇ ಅತಿಹೆಚ್ಚು, ಮಾಸ್ಟರ್‌ ಬ್ಲಾಸ್ಟರ್‌ ಕೇವಲ 4 ರನ್‌ಗೆ ನಿರ್ಮಿಸಿದರೆ, ನಾಯಕ ಸೌರವ್‌ ಗಂಗೂಲಿ 24 ರನ್‌ ಗಳಿಸಿ ಮರಳಿದರು. ತಂಡಕ್ಕೆ ಚೇತರಿಕೆ ಆಟವಾಡಿದ ದಿ ವಾಲ್‌ ಖ್ಯಾತಿಯ ರಾಹುಲ್‌ ದ್ರಾವೀಡ್‌ 47 ರನ್‌ಗಳಿಸಿದರು, ಯುವರಾಜ್‌ ಸಿಂಗ್‌ 24ರನ್‌ ಗಳಿಸಿ ಪೆವಿಲಿಯನತ್ತ ಹೆಜ್ಜೆ ಹಾಕಿದರು.

ಭಾರತ ಪರ ಹರಭಜನ್‌ ಸಿಂಗ್‌ 2 ವಿಕೆಟ್‌ ಪಡೆದರು. ಆಸ್ಟ್ರೇಲಿಯಾ ಪರ ಮೆಗ್ರಾಥ್‌ 3, ಬ್ರೆಟ್‌ ಲೀ 2 ಹಾಗೂ ಆಲ್‌ರೌಂಡರ್‌ ಸೈಮಂಡ್ಸ್‌ 2 ವಿಕೆಟ್‌ ಪಡೆದರು.

ಇಂಡಿಯಾ-ಆಸ್ಟ್ರೇಲಿಯಾ ವರ್ಲ್ಡ್‌ ಕಪ್‌ ಮುಖಾಮುಖಿ:

ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಐಸಿಸಿ ಏಕದಿನ ವಿಶ್ವಕಪ್‌ ನಲ್ಲಿ ಇದುವರೆಗೆ 13 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಕೇವಲ 5 ಬಾರಿ ಜಯ ಗಳಿಸಿದೆ. ಭಾರತ ಮೇಲೆ ಪಾರುಪತ್ಯ ಸಾಧಿಸಿರುವ ಆಸೀಸ್‌ 8 ಪಂದ್ಯಗಳಲ್ಲಿ ಜಯ ದಾಖಲಿಸಿದೆ.

ನ.19 ರಂದು ನಡೆಯುವ ಪಂದ್ಯದ ನಿರ್ಣಾಯಕ ಹಂತದಲ್ಲಿದ್ದು, ಗೆದ್ದ ತಂಡ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆ. 2015ರ ವರ್ಲ್ಡ್‌ ಕಪ್‌ ಸೆಮಿಸ್‌ನಲ್ಲಿ ಮುಖಾಮುಖಿಯಾಗಿದ್ದು, ಆಸೀಸ್‌ ಗೆಲುವು ದಾಖಲಿಸಿತ್ತು.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

9 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago