ಚೆನ್ನೈ: ಭಾರತ ಬೌಲಿಂಗ್ನನ್ನು ಎದುರಿಸುವಲ್ಲಿ ವಿಫಲರಾದ ಆಸ್ಟ್ರಲಿಯಾ ತಂಡ ವಿಶ್ವಕಪ್ ಅಭಿಯಾನದಲ್ಲಿ ಕಳಪೆ ಬ್ಯಾಟಿಂಗ್ ಮೂಲಕ ಎಡವಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 199 ರನ್ ಗಳಿಸಿ ಆಲೌಟ್ ಆಯಿತು. ಭಾರತದ ಪರ ರವೀಂದ್ರ ಜಡೇಜಾ ಗರಿಷ್ಠ 3 ವಿಕೆಟ್ ಪಡೆದಿದ್ದಾರೆ. ಆಸ್ಟ್ರೇಲಿಯಾದ ಒಬ್ಬ ಬ್ಯಾಟ್ಸ್ಮನ್ ಕೂಡ ಅರ್ಧಶತಕ ಗಳಿಸಲು ಸಾಧ್ಯವಾಗಲಿಲ್ಲ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಭಾರತದ ಸಂಘಟಿದ ಬೌಲಿಂಗ್ ದಾಳಿಗೆ ನಲುಗಿ ಹೋಯಿತು. ಬುಮ್ರಾ ಭಾರತಕ್ಕೆ ಮೊದಲ ಯಶಸ್ಸನ್ನು ನೀಡಿದರು. ಬುಮ್ರಾ ಮಿಚೆಲ್ ಮಾರ್ಷ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ಇಲ್ಲಿಂದ ಡೇವಿಡ್ ವಾರ್ನರ್ ಮತ್ತು ಸ್ಟೀವ್ ಸ್ಮಿತ್ ಅರ್ಧಶತಕದ ಜೊತೆಯಾಟವಾಡಿದರು.
ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ವಾರ್ನರ್ 41 ರನ್ ಗಳಿಸಿದ್ದಾಗ ಕುಲದೀಪ್ ಯಾದವ್ಗೆ ಬಲಿಯಾದರು. ಅವರ ನಂತರ, ಸ್ಟೀವ್ ಸ್ಮಿತ್ ಅವರನ್ನು ಜಡೇಜಾ 46 ರನ್ಗಳಿಗೆ ಔಟ್ ಮಾಡಿದರು. ಲಬುಸ್ಚಾಗ್ನೆ 27 ರನ್ ಗಳಿಸಿದ್ದಾಗ ರವೀಂದ್ರ ಜಡೇಜಾ ಅವರ ಎಸೆತದಲ್ಲಿ ಹೊರನಡೆದರು. ಅಲೆಕ್ಸ್ ಕ್ಯಾರಿಯನ್ನೂ ಜಡೇಜಾ ಖಾತೆ ತೆರೆಯದೆ ವಾಪಸ್ ಕಳುಹಿಸಿದರು.
ಕುಲದೀಪ್ ಯಾದವ್ ಮತ್ತೊಮ್ಮೆ 15 ರನ್ ಗಳಿಸಿದ್ದ ಮ್ಯಾಕ್ಸ್ ವೆಲ್ ರನ್ನು ಔಟ್ ಮಾಡಿದರು. ಇದಾದ ನಂತರ ಅಶ್ವಿನ್ 8 ರನ್ ಬಾರಿಸಿದ್ದ ಕ್ಯಾಮರಾನ್ ಗ್ರೀನ್ ಅವರನ್ನು ಔಟ್ ಮಾಡಿದರು. ಒಟ್ಟಾರೆ ಆಸ್ಟ್ರೇಲಿಯಾ 49.3 ಓವರ್ ನಲ್ಲಿ 199ಕ್ಕೆ ಆಲೌಟ್ ಆಯಿತು. ಭಾರತದ ಪರ ಜಡೇಜಾ ಗರಿಷ್ಠ 3 ವಿಕೆಟ್ ಪಡೆದರು. ಕುಲದೀಪ್ 2 ವಿಕೆಟ್ ಪಡೆದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…