ಕ್ರೀಡೆ

ಏಕದಿನ ವಿಶ್ವಕಪ್: ಆಸ್ಟ್ರೇಲಿಯಾವನ್ನು 199 ರನ್‌ಗಳಿಗೆ ಆಲೌಟ್ ಮಾಡಿದ ಭಾರತ!

ಚೆನ್ನೈ: ಭಾರತ ಬೌಲಿಂಗ್‌ನನ್ನು ಎದುರಿಸುವಲ್ಲಿ ವಿಫಲರಾದ ಆಸ್ಟ್ರಲಿಯಾ ತಂಡ ವಿಶ್ವಕಪ್ ಅಭಿಯಾನದಲ್ಲಿ ಕಳಪೆ ಬ್ಯಾಟಿಂಗ್ ಮೂಲಕ ಎಡವಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 199 ರನ್ ಗಳಿಸಿ ಆಲೌಟ್ ಆಯಿತು. ಭಾರತದ ಪರ ರವೀಂದ್ರ ಜಡೇಜಾ ಗರಿಷ್ಠ 3 ವಿಕೆಟ್ ಪಡೆದಿದ್ದಾರೆ. ಆಸ್ಟ್ರೇಲಿಯಾದ ಒಬ್ಬ ಬ್ಯಾಟ್ಸ್‌ಮನ್ ಕೂಡ ಅರ್ಧಶತಕ ಗಳಿಸಲು ಸಾಧ್ಯವಾಗಲಿಲ್ಲ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ಭಾರತದ ಸಂಘಟಿದ ಬೌಲಿಂಗ್‌ ದಾಳಿಗೆ ನಲುಗಿ ಹೋಯಿತು. ಬುಮ್ರಾ ಭಾರತಕ್ಕೆ ಮೊದಲ ಯಶಸ್ಸನ್ನು ನೀಡಿದರು. ಬುಮ್ರಾ ಮಿಚೆಲ್ ಮಾರ್ಷ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ಇಲ್ಲಿಂದ ಡೇವಿಡ್ ವಾರ್ನರ್ ಮತ್ತು ಸ್ಟೀವ್ ಸ್ಮಿತ್ ಅರ್ಧಶತಕದ ಜೊತೆಯಾಟವಾಡಿದರು.

ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ವಾರ್ನರ್ 41 ರನ್‌ ಗಳಿಸಿದ್ದಾಗ ಕುಲದೀಪ್ ಯಾದವ್‌ಗೆ ಬಲಿಯಾದರು. ಅವರ ನಂತರ, ಸ್ಟೀವ್ ಸ್ಮಿತ್ ಅವರನ್ನು ಜಡೇಜಾ 46 ರನ್‌ಗಳಿಗೆ ಔಟ್ ಮಾಡಿದರು. ಲಬುಸ್ಚಾಗ್ನೆ 27 ರನ್‌ ಗಳಿಸಿದ್ದಾಗ ರವೀಂದ್ರ ಜಡೇಜಾ ಅವರ ಎಸೆತದಲ್ಲಿ ಹೊರನಡೆದರು. ಅಲೆಕ್ಸ್ ಕ್ಯಾರಿಯನ್ನೂ ಜಡೇಜಾ ಖಾತೆ ತೆರೆಯದೆ ವಾಪಸ್ ಕಳುಹಿಸಿದರು.

ಕುಲದೀಪ್ ಯಾದವ್ ಮತ್ತೊಮ್ಮೆ 15 ರನ್ ಗಳಿಸಿದ್ದ ಮ್ಯಾಕ್ಸ್ ವೆಲ್ ರನ್ನು ಔಟ್ ಮಾಡಿದರು. ಇದಾದ ನಂತರ ಅಶ್ವಿನ್ 8 ರನ್ ಬಾರಿಸಿದ್ದ ಕ್ಯಾಮರಾನ್ ಗ್ರೀನ್ ಅವರನ್ನು ಔಟ್ ಮಾಡಿದರು.  ಒಟ್ಟಾರೆ ಆಸ್ಟ್ರೇಲಿಯಾ 49.3 ಓವರ್ ನಲ್ಲಿ 199ಕ್ಕೆ ಆಲೌಟ್ ಆಯಿತು. ಭಾರತದ ಪರ ಜಡೇಜಾ ಗರಿಷ್ಠ 3 ವಿಕೆಟ್ ಪಡೆದರು. ಕುಲದೀಪ್ 2 ವಿಕೆಟ್ ಪಡೆದರು.

andolanait

Recent Posts

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…

7 mins ago

ಸಚಿವ ಸಂಪುಟ ಪುನರಾಚನೆಗೆ ಒತ್ತಡ ; ಕಾಂಗ್ರೆಸ್ ಶಾಸಕರು ಇಂದು ದೆಹಲಿಗೆ.

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ)…

14 mins ago

ಓದುಗರ ಪತ್ರ | ಕಿಕ್ಕೇರಿ ಕೆರೆಗೆ ಕೆಎಸ್‌ನ ಹೆಸರು ನಾಮಕರಣ ಶ್ಲಾಘನೀಯ

ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…

59 mins ago

ಓದುಗರ ಪತ್ರ | ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಿ

ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ ; ಬಿಜೆಪಿಗೆ ತಮಿಳುನಾಡು, ಪಶ್ಚಿಮ ಬಂಗಾಳವೇ ತಲೆನೋವು

ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…

1 hour ago

ನನ್ನ ಮೊದಲ ಕವಿತೆಯ ಕಥೆ….

ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…

2 hours ago