ಕ್ರೀಡೆ

ಏಕದಿನ ವಿಶ್ವಕಪ್: ಆಸ್ಟ್ರೇಲಿಯಾವನ್ನು 199 ರನ್‌ಗಳಿಗೆ ಆಲೌಟ್ ಮಾಡಿದ ಭಾರತ!

ಚೆನ್ನೈ: ಭಾರತ ಬೌಲಿಂಗ್‌ನನ್ನು ಎದುರಿಸುವಲ್ಲಿ ವಿಫಲರಾದ ಆಸ್ಟ್ರಲಿಯಾ ತಂಡ ವಿಶ್ವಕಪ್ ಅಭಿಯಾನದಲ್ಲಿ ಕಳಪೆ ಬ್ಯಾಟಿಂಗ್ ಮೂಲಕ ಎಡವಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 199 ರನ್ ಗಳಿಸಿ ಆಲೌಟ್ ಆಯಿತು. ಭಾರತದ ಪರ ರವೀಂದ್ರ ಜಡೇಜಾ ಗರಿಷ್ಠ 3 ವಿಕೆಟ್ ಪಡೆದಿದ್ದಾರೆ. ಆಸ್ಟ್ರೇಲಿಯಾದ ಒಬ್ಬ ಬ್ಯಾಟ್ಸ್‌ಮನ್ ಕೂಡ ಅರ್ಧಶತಕ ಗಳಿಸಲು ಸಾಧ್ಯವಾಗಲಿಲ್ಲ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ಭಾರತದ ಸಂಘಟಿದ ಬೌಲಿಂಗ್‌ ದಾಳಿಗೆ ನಲುಗಿ ಹೋಯಿತು. ಬುಮ್ರಾ ಭಾರತಕ್ಕೆ ಮೊದಲ ಯಶಸ್ಸನ್ನು ನೀಡಿದರು. ಬುಮ್ರಾ ಮಿಚೆಲ್ ಮಾರ್ಷ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ಇಲ್ಲಿಂದ ಡೇವಿಡ್ ವಾರ್ನರ್ ಮತ್ತು ಸ್ಟೀವ್ ಸ್ಮಿತ್ ಅರ್ಧಶತಕದ ಜೊತೆಯಾಟವಾಡಿದರು.

ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ವಾರ್ನರ್ 41 ರನ್‌ ಗಳಿಸಿದ್ದಾಗ ಕುಲದೀಪ್ ಯಾದವ್‌ಗೆ ಬಲಿಯಾದರು. ಅವರ ನಂತರ, ಸ್ಟೀವ್ ಸ್ಮಿತ್ ಅವರನ್ನು ಜಡೇಜಾ 46 ರನ್‌ಗಳಿಗೆ ಔಟ್ ಮಾಡಿದರು. ಲಬುಸ್ಚಾಗ್ನೆ 27 ರನ್‌ ಗಳಿಸಿದ್ದಾಗ ರವೀಂದ್ರ ಜಡೇಜಾ ಅವರ ಎಸೆತದಲ್ಲಿ ಹೊರನಡೆದರು. ಅಲೆಕ್ಸ್ ಕ್ಯಾರಿಯನ್ನೂ ಜಡೇಜಾ ಖಾತೆ ತೆರೆಯದೆ ವಾಪಸ್ ಕಳುಹಿಸಿದರು.

ಕುಲದೀಪ್ ಯಾದವ್ ಮತ್ತೊಮ್ಮೆ 15 ರನ್ ಗಳಿಸಿದ್ದ ಮ್ಯಾಕ್ಸ್ ವೆಲ್ ರನ್ನು ಔಟ್ ಮಾಡಿದರು. ಇದಾದ ನಂತರ ಅಶ್ವಿನ್ 8 ರನ್ ಬಾರಿಸಿದ್ದ ಕ್ಯಾಮರಾನ್ ಗ್ರೀನ್ ಅವರನ್ನು ಔಟ್ ಮಾಡಿದರು.  ಒಟ್ಟಾರೆ ಆಸ್ಟ್ರೇಲಿಯಾ 49.3 ಓವರ್ ನಲ್ಲಿ 199ಕ್ಕೆ ಆಲೌಟ್ ಆಯಿತು. ಭಾರತದ ಪರ ಜಡೇಜಾ ಗರಿಷ್ಠ 3 ವಿಕೆಟ್ ಪಡೆದರು. ಕುಲದೀಪ್ 2 ವಿಕೆಟ್ ಪಡೆದರು.

andolanait

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

12 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

14 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

18 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

22 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

1 day ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

1 day ago