ಕ್ರೀಡೆ

ಏಕದಿನ ವಿಶ್ವಕಪ್: 246ರನ್‌ ಗಳಿಗೆ ಬಾಂಗ್ಲಾವನ್ನು ಕಟ್ಟಿ ಹಾಕಿದ ಕೇನ್‌ ಪಡೆ

ಚೆನ್ನೈ : ಇಲ್ಲಿನ ಎಂಎ ಚಿದಂಬರಂ ಅಂತರಾಷ್ಟ್ರೀಯ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ 11 ನೇ ಪಂದ್ಯದಲ್ಲಿ ಬಾಂಗ್ಲಾದೇಶ ನ್ಯೂಝಿಲ್ಯಾಂಡ್ ಗೆ 246 ರನ್ ಗಳ ಗುರಿ ನೀಡಿದೆ.

ನ್ಯೂಝಿಲ್ಯಾಂಡ್ ವಿರುದ್ಧ ಟಾಸ್ ಸೋತ ಬಾಂಗ್ಲಾದೇಶ ಬ್ಯಾಟಿಂಗ್ ಗೆ ಇಳಿಯಿತು. ಬಾಂಗ್ಲಾ ಬ್ಯಾಟರ್ಸ್ ತಂಡಕ್ಕೆ ಉತ್ತಮ ಆರಂಭ ಹಾಕಿಕೊಡುವಲ್ಲಿ ವಿಫಲರಾದರು.ಆರಂಭಿಕ ಬ್ಯಾಟರ್ ಲಿಟನ್ ದಾಸ್ ಇನ್ನಿಂಗ್ಸ್ ನ ಮೊದಲ ಎಸೆತದಲ್ಲಿಯೇ ಗೋಲ್ಡನ್ ಡಕ್ ಅಗಿ ಟ್ರೆಂಟ್ ಬೋಲ್ಟ್ ಗೆ ವಿಕೆಟ್ ಒಪ್ಪಿಸಿದರು. ಎರಡನೇ ಕ್ರಮಾಂಕದ ತಂಝೀದ್ ಹಸನ್ ಕೇವಲ 16 ರನ್ ಗೆ ಲೋಕಿ ಫರ್ಗ್ಯುಸನ್ ಗೆ ವಿಕೆಟ್ ನೀಡಿದರು. ಮೆಹಿದಿ ಹಸನ್ 30 ರನ್ ಗಳಿಸಿದರೆ ಶಾಂಟೋ 7 ರನ್ ಗಳಿಸಿ ನಿರಾಶೆ ಮೂಡಿಸಿದರು.

ಜವಾಬ್ದಾರಿಯುತ ಆಟ ಆಡುತ್ತಿದ್ದ ನಾಯಕ ಶಾಕಿಬ್ ಉಲ್ ಹಸನ್ 3 ಬೌಂಡರಿ 2 ಸಿಕ್ಸರ್ ಸಹಿತ 40 ಬಾರಿಸಿ ತಂಡಕ್ಕೆ ಉತ್ತಮ ಮೊತ್ತ ಹಾಕುವ ಯೋಜನೆಯಲ್ಲಿದ್ದರು. ಆದರೆ ಲೋಕಿ ಫರ್ಗ್ಯುಸನ್ ಬೌಲಿಂಗ್ ನಲ್ಲಿ ವಿಕೆಟ್ ಕೀಪರ್ ಟಾಮ್ ಲಾಥಮ್ ಗೆ ವಿಕೆಟ್ ನೀಡಿ ಔಟ್ ಆದರು. ಬಾಂಗ್ಲಾ ಅನುಭವಿ ಬ್ಯಾಟರ್ ಮುಷ್ಫಿಕುರ್ ರಹೀಮ್ 6 ಬೌಂಡರಿ 2 ಸಹಿತ 66 ರನ್ ಗಳಿಸಿ ಇನ್ನಿಂಗ್ಸ್ ನ ಮೊದಲ ಅರ್ಧಶತಕ ದಾಖಲಿಸುವಲ್ಲಿ ಯಶಸ್ವಿಯಾದರು. ಬಳಿಕ ಬಂದ ಯಾವೊಬ್ಬ ಬ್ಯಾಟರ್ ಕೂಡ ಬಲಿಷ್ಠ ನ್ಯೂಝಿಲ್ಯಾಂಡ್ ಬೌಲಿಂಗ್ ನಲ್ಲಿ ಹೆಚ್ಚು ಹೊತ್ತು ನಿಲ್ಲಲಾಗಲಿಲ್ಲ.

ತೌಹೀದ್ ಹೃದೊಯ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ಕ್ರಮವಾಗಿ 13, 17,4 ಗಳಿಸಿ ವಿಕೆಟ್ ಒಪ್ಪಿಸಿದರು. ಕೊನೆಗೆ ಬಾಂಗ್ಲಾ ಪರ 2 ಬೌಂಡರಿ 2 ಸಿಕ್ಸರ್ ಸಹಿತ 41 ಸಿಡಿಸಿದ ಮುಹಮದುಲ್ಲಾ ತಂಡದ ಮೊತ್ತ ಹೆಚ್ಚಿಸಿದರು.

ನ್ಯೂಝಿಲ್ಯಾಂಡ್ ಪರ ಉತ್ತಮ ಪ್ರದರ್ಶನ ನೀಡಿದ ಲೋಕಿ ಫರ್ಗ್ಯುಸನ್ ಪ್ರಮುಖ 3 ವಿಕೆಟ್ ಕಬಳಿಸಿದರೆ ಮಾಟ್ ಹೆನ್ರಿ ಹಾಗೂ ಟ್ರೆಂಟ್ ಬೋಲ್ಟ್ 2 ವಿಕೆಟ್ ಕಿತ್ತರು. ಗ್ಲೇನ್ ಪಿಲಿಪ್ಸ್ , ಸಾಂಟ್ನರ್ ತಲಾ ಒಂದೊಂದು ವಿಕೆಟ್ ಹಂಚಿಕೊಂಡರು.

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

3 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

3 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

4 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

4 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

4 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

5 hours ago