ಕ್ರೀಡೆ

ಏಕದಿನ ವಿಶ್ವಕಪ್: 246ರನ್‌ ಗಳಿಗೆ ಬಾಂಗ್ಲಾವನ್ನು ಕಟ್ಟಿ ಹಾಕಿದ ಕೇನ್‌ ಪಡೆ

ಚೆನ್ನೈ : ಇಲ್ಲಿನ ಎಂಎ ಚಿದಂಬರಂ ಅಂತರಾಷ್ಟ್ರೀಯ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ 11 ನೇ ಪಂದ್ಯದಲ್ಲಿ ಬಾಂಗ್ಲಾದೇಶ ನ್ಯೂಝಿಲ್ಯಾಂಡ್ ಗೆ 246 ರನ್ ಗಳ ಗುರಿ ನೀಡಿದೆ.

ನ್ಯೂಝಿಲ್ಯಾಂಡ್ ವಿರುದ್ಧ ಟಾಸ್ ಸೋತ ಬಾಂಗ್ಲಾದೇಶ ಬ್ಯಾಟಿಂಗ್ ಗೆ ಇಳಿಯಿತು. ಬಾಂಗ್ಲಾ ಬ್ಯಾಟರ್ಸ್ ತಂಡಕ್ಕೆ ಉತ್ತಮ ಆರಂಭ ಹಾಕಿಕೊಡುವಲ್ಲಿ ವಿಫಲರಾದರು.ಆರಂಭಿಕ ಬ್ಯಾಟರ್ ಲಿಟನ್ ದಾಸ್ ಇನ್ನಿಂಗ್ಸ್ ನ ಮೊದಲ ಎಸೆತದಲ್ಲಿಯೇ ಗೋಲ್ಡನ್ ಡಕ್ ಅಗಿ ಟ್ರೆಂಟ್ ಬೋಲ್ಟ್ ಗೆ ವಿಕೆಟ್ ಒಪ್ಪಿಸಿದರು. ಎರಡನೇ ಕ್ರಮಾಂಕದ ತಂಝೀದ್ ಹಸನ್ ಕೇವಲ 16 ರನ್ ಗೆ ಲೋಕಿ ಫರ್ಗ್ಯುಸನ್ ಗೆ ವಿಕೆಟ್ ನೀಡಿದರು. ಮೆಹಿದಿ ಹಸನ್ 30 ರನ್ ಗಳಿಸಿದರೆ ಶಾಂಟೋ 7 ರನ್ ಗಳಿಸಿ ನಿರಾಶೆ ಮೂಡಿಸಿದರು.

ಜವಾಬ್ದಾರಿಯುತ ಆಟ ಆಡುತ್ತಿದ್ದ ನಾಯಕ ಶಾಕಿಬ್ ಉಲ್ ಹಸನ್ 3 ಬೌಂಡರಿ 2 ಸಿಕ್ಸರ್ ಸಹಿತ 40 ಬಾರಿಸಿ ತಂಡಕ್ಕೆ ಉತ್ತಮ ಮೊತ್ತ ಹಾಕುವ ಯೋಜನೆಯಲ್ಲಿದ್ದರು. ಆದರೆ ಲೋಕಿ ಫರ್ಗ್ಯುಸನ್ ಬೌಲಿಂಗ್ ನಲ್ಲಿ ವಿಕೆಟ್ ಕೀಪರ್ ಟಾಮ್ ಲಾಥಮ್ ಗೆ ವಿಕೆಟ್ ನೀಡಿ ಔಟ್ ಆದರು. ಬಾಂಗ್ಲಾ ಅನುಭವಿ ಬ್ಯಾಟರ್ ಮುಷ್ಫಿಕುರ್ ರಹೀಮ್ 6 ಬೌಂಡರಿ 2 ಸಹಿತ 66 ರನ್ ಗಳಿಸಿ ಇನ್ನಿಂಗ್ಸ್ ನ ಮೊದಲ ಅರ್ಧಶತಕ ದಾಖಲಿಸುವಲ್ಲಿ ಯಶಸ್ವಿಯಾದರು. ಬಳಿಕ ಬಂದ ಯಾವೊಬ್ಬ ಬ್ಯಾಟರ್ ಕೂಡ ಬಲಿಷ್ಠ ನ್ಯೂಝಿಲ್ಯಾಂಡ್ ಬೌಲಿಂಗ್ ನಲ್ಲಿ ಹೆಚ್ಚು ಹೊತ್ತು ನಿಲ್ಲಲಾಗಲಿಲ್ಲ.

ತೌಹೀದ್ ಹೃದೊಯ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ಕ್ರಮವಾಗಿ 13, 17,4 ಗಳಿಸಿ ವಿಕೆಟ್ ಒಪ್ಪಿಸಿದರು. ಕೊನೆಗೆ ಬಾಂಗ್ಲಾ ಪರ 2 ಬೌಂಡರಿ 2 ಸಿಕ್ಸರ್ ಸಹಿತ 41 ಸಿಡಿಸಿದ ಮುಹಮದುಲ್ಲಾ ತಂಡದ ಮೊತ್ತ ಹೆಚ್ಚಿಸಿದರು.

ನ್ಯೂಝಿಲ್ಯಾಂಡ್ ಪರ ಉತ್ತಮ ಪ್ರದರ್ಶನ ನೀಡಿದ ಲೋಕಿ ಫರ್ಗ್ಯುಸನ್ ಪ್ರಮುಖ 3 ವಿಕೆಟ್ ಕಬಳಿಸಿದರೆ ಮಾಟ್ ಹೆನ್ರಿ ಹಾಗೂ ಟ್ರೆಂಟ್ ಬೋಲ್ಟ್ 2 ವಿಕೆಟ್ ಕಿತ್ತರು. ಗ್ಲೇನ್ ಪಿಲಿಪ್ಸ್ , ಸಾಂಟ್ನರ್ ತಲಾ ಒಂದೊಂದು ವಿಕೆಟ್ ಹಂಚಿಕೊಂಡರು.

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

4 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

5 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

5 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

5 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

5 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

5 hours ago