ಕ್ರೀಡೆ

ಏಕದಿನ ವಿಶ್ವಕಪ್‌: ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ನೆದರ್ಲೆಂಡ್ಸ್‌!

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ನ್ಯೂಜಿಲೆಂಡ್‌ ಹಾಗೂ ನೆದರ್ಲೆಂಡ್ಸ್‌ ತಂಡಗಳು ಮುಖಾಮುಖಿ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ನೆದರ್ಲೆಂಡ್ಸ್ ತಂಡ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ ಟಾಮ್‌ ಲೇಥಮ್‌ ನಾಯಕತ್ವದ ನ್ಯೂಜಿಲೆಂಡ್‌ ತಂಡದ ಬ್ಯಾಟಿಂಗ್‌ ಮಾಡಲಿದೆ.

ನ್ಯೂಜಿಲೆಂಡ್‌ ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ತರಲಾಗಿದೆ. ಜಿಮ್ಮಿ ನೀಶಮ್ ಅವರ ಸ್ಥಾನಕ್ಕೆ ಲಾಕಿ ಫರ್ಗ್ಯೂಸನ್‌ ಅವರು ಆಡುವ ಬಳಗಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನು ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ನಾಯಕ ಕೇನ್‌ ವಿಲಿಯಮ್ಸನ್‌ ಅವರು ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಅವರು ಬದಲು ಹಂಗಾಮಿ ನಾಯಕ ಟಾಮ್‌ ಲೇಥಮ್‌ ಅವರು ತಂಡವನ್ನು ಮುನ್ನಡೆಸಿದ್ದಾರೆ.

ಇನ್ನು ನೆದರ್ಲೆಂಡ್ಸ್‌ ಪ್ಲೇಯಿಂಗ್‌ XIನಲ್ಲಿ ಎರಡು ಬದಲಾವಣೆ ತರಲಾಗಿದೆ. ಸೈಬ್ರಾಂಡ್ ಎಂಗೆಲ್‌ಬ್ರೆಕ್ಟ್ ಮತ್ತು ರಯಾನ್ ಕ್ಲೈನ್ ಡಚ್‌ ತಂಡದ ಪ್ಲೇಯಿಂಗ್‌ XIಗೆ ಮರಳಿದ್ದಾರೆ.

ಇತ್ತಂಡಗಳ ಪ್ಲೇಯಿಂಗ್‌ XI : ನ್ಯೂಜಿಲೆಂಡ್‌: ಡೆವೋನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಟಾಮ್ ಲೇಥಮ್ (ವಿ/ಕಿ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗ್ಯೂಸನ್, ಟ್ರೆಂಟ್ ಬೌಲ್ಟ್

ನೆದರ್ಲೆಂಡ್ಸ್‌: ವಿಕ್ರಮ್‌ಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್‌ಮನ್, ಬಾಸ್ ಡಿ ಲೀಡೆ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್(ನಾಯಕ, ವಿ.ಕೀ), ಸೈಬ್ರಾಂಡ್ ಎಂಗಲ್‌ಬ್ರೆಕ್ಟ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ರಯಾನ್ ಕ್ಲೈನ್, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್

andolanait

Recent Posts

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

31 mins ago

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

3 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

3 hours ago

ಓದುಗರ ಪತ್ರ: ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್ ಅಳವಡಿಸಿ

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…

3 hours ago

ಓದುಗರ ಪತ್ರ: ನಂದಿ ಭವನ ಮುಂಭಾಗದ ಮೋರಿ ಶುಚಿಗೊಳಿಸಿ

ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ವಾಟ್ಸಾಪ್ ಹೇಳಿಕೆ, ಡೀಪ್ ಫೇಕ್ ಹಾವಳಿ, ಪಾಪರಾಜಿಗಳ ನಿಯಂತ್ರಣದತ್ತ

ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…

3 hours ago