ಮುಂಬೈ : ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ಟೂರ್ನಿಯಲ್ಲಿ ಆಡಿರುವ 4 ಪಂದ್ಯಗಳಲ್ಲಿ 3 ಗೆದ್ದಿರುವ ದಕ್ಷಿಣ ಆಫ್ರಿಕಾ ಈ ಪಂದ್ಯ ಗೆಲ್ಲುವ ಫೆವರೀಟ್ ಎನಿಸಿದೆ. ತಂಡ ಆಲ್ ರೌಂಡರ್ ಗಳನ್ನು ಹೊಂದಿದ್ದು, ಉತ್ತಮ ರನ್ ರೇಟ್ ಕಾಯ್ದುಕೊಂಡಿದೆ. ಅತಿಯಾದ ಆತ್ಮವಿಶ್ವಾಸವೂ ತಂಡಕ್ಕೆ ಮುಳುವಾಗಿದೆ. ಈ ಹಿಂದೆ ನೆದರ್ ಲ್ಯಾಂಡ್ಸ್ ವಿರುದ್ಧ ಸೋತಿದ್ದೇ ಇದಕ್ಕೆ ಸಾಕ್ಷಿ.
ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ವಿಶ್ವಕಪ್ನಲ್ಲಿ ಅತೀ ವೇಗದ ಶತಕ ದಾಖಲಿಸಿದ ನಾಯಕ ಐಡೆನ್ ಮ್ಯಾರ್ಕ್ರಮ್ ದಕ್ಷಿಣ ಆಫ್ರಿಕಾ ತಂಡಕ್ಕೆ ಆನೆ ಬಲ ನೀಡಿದ್ದಾರೆ. ವಾಂಖೆಡೆ ಪಿಚ್ ವರದಿಗಳು ಬ್ಯಾಟಿಂಗ್ ಗೆ ಹೆಚ್ಚಿನ ಅವಕಾಶ ನೀಡುವಂತೆ ಕಾಣುತ್ತಿದೆ. ಇದು ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಗೆ ಹೆಚ್ಚಿನ ಅವಕಾಶ ನೀಡುವ ಸಾಧ್ಯತೆಯಿದೆ.
ಅಂಕಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿರುವ ಬಾಂಗ್ಲಾದೇಶ 4 ಪಂದ್ಯಗಳಲ್ಲಿ 1ನ್ನು ಮಾತ್ರ ಗೆದ್ದು ಮೂರನ್ನು ಸೋತಿದೆ. ಈ ತಂಡವನ್ನು ದುರ್ಬಲ ಎಂದು ಹೇಳುವ ಹಾಗಿಲ್ಲ. ಅಚ್ಚರಿಯ ಫಲಿತಾಂಶ ನೀಡುವುದರಲ್ಲಿ ಬಾಂಗ್ಲಾದೇಶ ತಂಡ ಎತ್ತಿದ ಕೈ. ಹಾಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯ ಏಕಮುಖವಾಗಿ ಇರಲು ಸಾಧ್ಯವಿಲ್ಲ.
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…
ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…
ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…
ಮಹದೇವ ಶಂಕನಪುರ ಎಚ್.ಎಸ್.ಶಿವಪ್ರಕಾಶ್ ಅವರ ನಾಟಕ ‘ಮಾದಾರಿ ಮಾದಯ್ಯ’ ಕಳೆದ ೩೫ ವರ್ಷಗಳಿಂದಲೂ ಕನ್ನಡ ನೆಲದಲ್ಲಿ ಅಭಿನಯಿಸಲ್ಪಡುತ್ತಿದೆ. ಮೊದಲಿಗೆ ೧೯೯೦ರಲ್ಲಿ…
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…