ಕ್ರೀಡೆ

ಎಕದಿನ ವಿಶ್ವಕಪ್‌: ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ದಕ್ಷಿಣ ಆಫ್ರಿಕಾ

ಮುಂಬೈ : ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್‌ ಟೂರ್ನಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದೆ.

ಟೂರ್ನಿಯಲ್ಲಿ ಆಡಿರುವ 4 ಪಂದ್ಯಗಳಲ್ಲಿ 3 ಗೆದ್ದಿರುವ ದಕ್ಷಿಣ ಆಫ್ರಿಕಾ ಈ ಪಂದ್ಯ ಗೆಲ್ಲುವ ಫೆವರೀಟ್‌ ಎನಿಸಿದೆ. ತಂಡ ಆಲ್‌ ರೌಂಡರ್‌ ಗಳನ್ನು ಹೊಂದಿದ್ದು, ಉತ್ತಮ ರನ್‌ ರೇಟ್‌ ಕಾಯ್ದುಕೊಂಡಿದೆ. ಅತಿಯಾದ ಆತ್ಮವಿಶ್ವಾಸವೂ ತಂಡಕ್ಕೆ ಮುಳುವಾಗಿದೆ. ಈ ಹಿಂದೆ ನೆದರ್‌ ಲ್ಯಾಂಡ್ಸ್‌ ವಿರುದ್ಧ ಸೋತಿದ್ದೇ ಇದಕ್ಕೆ ಸಾಕ್ಷಿ.

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ವಿಶ್ವಕಪ್‌ನಲ್ಲಿ ಅತೀ ವೇಗದ ಶತಕ ದಾಖಲಿಸಿದ ನಾಯಕ ಐಡೆನ್‌ ಮ್ಯಾರ್ಕ್ರಮ್‌ ದಕ್ಷಿಣ ಆಫ್ರಿಕಾ ತಂಡಕ್ಕೆ ಆನೆ ಬಲ ನೀಡಿದ್ದಾರೆ. ವಾಂಖೆಡೆ ಪಿಚ್‌ ವರದಿಗಳು ಬ್ಯಾಟಿಂಗ್‌ ಗೆ ಹೆಚ್ಚಿನ ಅವಕಾಶ ನೀಡುವಂತೆ ಕಾಣುತ್ತಿದೆ. ಇದು ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಗೆ ಹೆಚ್ಚಿನ ಅವಕಾಶ ನೀಡುವ ಸಾಧ್ಯತೆಯಿದೆ.

ಅಂಕಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿರುವ ಬಾಂಗ್ಲಾದೇಶ 4 ಪಂದ್ಯಗಳಲ್ಲಿ 1ನ್ನು ಮಾತ್ರ ಗೆದ್ದು ಮೂರನ್ನು ಸೋತಿದೆ. ಈ ತಂಡವನ್ನು ದುರ್ಬಲ ಎಂದು ಹೇಳುವ ಹಾಗಿಲ್ಲ. ಅಚ್ಚರಿಯ ಫಲಿತಾಂಶ ನೀಡುವುದರಲ್ಲಿ ಬಾಂಗ್ಲಾದೇಶ ತಂಡ ಎತ್ತಿದ ಕೈ. ಹಾಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯ ಏಕಮುಖವಾಗಿ ಇರಲು ಸಾಧ್ಯವಿಲ್ಲ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

19 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

19 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

19 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

19 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago