ಕ್ರೀಡೆ

ಏಕದಿನ ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧದ 209ಕ್ಕೆ ಆಲೌಟ್ ಆದ ಶ್ರೀಲಂಕಾ

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ 14ನೇ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಶ್ರೀಲಂಕಾ 209 ರನ್ ಗೆ ಆಲೌಟ್ ಆಗಿದೆ.

ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿತು. ಲಂಕಾದ ಆರಂಭಿಕ ಬ್ಯಾಟರ್ಸ್ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಮೊದಲ ವಿಕೆಟ್ ಪತನ ಕ್ಕೆ 125 ರನ್ ಜೊತೆಯಾಟ ಆಡಿದ ಪತುಮ್ ನಿಸಂಕಾ ಹಾಗೂ ಕುಶಾಲ್ ಪರೇರಾ ಆಸೀಸ್ ಬೌಲರ್ಸ್ ಗಳನ್ನು ಕಾಡಿದರು. ಪತುಮ್ ನಿಸಂಕಾ 8 ಬೌಂಡರಿ ಸಹಿತ 61 ರನ್ ಗಳಿಸಿದರೆ ಕುಶಾಲ್ ಪರೇರಾ 12 ಬೌಂಡರಿ ಸಹಿತ 78 ರನ್ ಬಾರಿಸಿ ಪ್ಯಾಟ್ ಕಮ್ಮಿನ್ಸ್ ಗೆ ವಿಕೆಟ್ ಒಪ್ಪಿಸಿದರು. ಉತ್ತಮ ಆರಂಭದ ಹೊರತಾಗಿಯೂ ತಂಡ ಸ್ಥಿರ ಪ್ರದರ್ಶನ ನೀಡಲು ವಿಫಲವಾಯಿತು.

ಇವರಿಬ್ಬರ ಜೋಡಿಯ ನಂತರ ಶ್ರೀಲಂಕಾ ತಂಡ ಸಂಪೂರ್ಣ ಕುಸಿತ ಕಂಡಿತು. 157 ರನ್‌ಗೆ 2 ವಿಕೆಟ್‌  ಕಳೆದುಕೊಂಡಿದ್ದ ಲಂಕಾ ಪಡೆ 52ರನ್‌ಗಳಿಗೆ ಉಳಿದ 8 ವಿಕೆಟ್‌ ಕಳೆದುಕೊಳ್ಳುವ ಮೂಲಕ ದಿಢೀರ್‌ ಕುಸಿತ ಕಂಡಿತು.

ಚರಿತ್ ಹಸಲಂಕ (25), ಕುಶಾಲ್ ಮೆಂಡಿಸ್ (9), ಸದೀರ ವಿಕ್ರಮ (8), ಧನಂಜಯ್ ಡಿಸಿಲ್ವ ( 7 ) ಚಮಿಕಾ ಕರುಣರತ್ನೆ (2), ದುಣಿತ್ ವೆಲ್ಲಾಲಗೆ (2) ಮತ್ತು  ಲಹಿರು ಕುಮಾರ (4) ರನ್ ಗಳಿಸಿ ಪ್ರತಿಯೊಬ್ಬ ಲಂಕಾ ಬ್ಯಾಟರ್‌ ಪೆವಿಲಿಯನ್‌ ಪೆರೇಡ್‌ ನಡೆಸಿದರು.

ಆಸ್ಟ್ರೇಲಿಯ ಪರ ಉತ್ತಮ ಬೌಲಿಂಗ್‌ ಪ್ರದರ್ಶನ ನೀಡಿದ ಆಡಂ ಝಾಂಪ 4 ವಿಕೆಟ್ ಕಬಳಿಸಿದರೆ, ಮಿಷೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ ತಲಾ 2, ಗ್ಲೆನ್ ಮ್ಯಾಕ್ಸ್ ವೆಲ್ 1 ವಿಕೆಟ್ ಪಡೆದರು.

andolanait

Recent Posts

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ; ಪರಿಶೀಲಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

12 mins ago

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಮಗ್ರ ಓದಿಗೆ ಒತ್ತು ನೀಡಿ : ಎಸ್‌.ಪಿ ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು : ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ…

32 mins ago

ಸಾಮರ್ಥ್ಯ ವೃದ್ಧಿಗೆ ಎಐ ಬಳಸಿಕೊಳ್ಳಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…

46 mins ago

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

3 hours ago

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್‌ ಭೇಟಿ

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್‌ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…

3 hours ago

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…

3 hours ago