ಕ್ರೀಡೆ

ಏಕದಿನ ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧದ 209ಕ್ಕೆ ಆಲೌಟ್ ಆದ ಶ್ರೀಲಂಕಾ

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ 14ನೇ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಶ್ರೀಲಂಕಾ 209 ರನ್ ಗೆ ಆಲೌಟ್ ಆಗಿದೆ.

ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿತು. ಲಂಕಾದ ಆರಂಭಿಕ ಬ್ಯಾಟರ್ಸ್ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಮೊದಲ ವಿಕೆಟ್ ಪತನ ಕ್ಕೆ 125 ರನ್ ಜೊತೆಯಾಟ ಆಡಿದ ಪತುಮ್ ನಿಸಂಕಾ ಹಾಗೂ ಕುಶಾಲ್ ಪರೇರಾ ಆಸೀಸ್ ಬೌಲರ್ಸ್ ಗಳನ್ನು ಕಾಡಿದರು. ಪತುಮ್ ನಿಸಂಕಾ 8 ಬೌಂಡರಿ ಸಹಿತ 61 ರನ್ ಗಳಿಸಿದರೆ ಕುಶಾಲ್ ಪರೇರಾ 12 ಬೌಂಡರಿ ಸಹಿತ 78 ರನ್ ಬಾರಿಸಿ ಪ್ಯಾಟ್ ಕಮ್ಮಿನ್ಸ್ ಗೆ ವಿಕೆಟ್ ಒಪ್ಪಿಸಿದರು. ಉತ್ತಮ ಆರಂಭದ ಹೊರತಾಗಿಯೂ ತಂಡ ಸ್ಥಿರ ಪ್ರದರ್ಶನ ನೀಡಲು ವಿಫಲವಾಯಿತು.

ಇವರಿಬ್ಬರ ಜೋಡಿಯ ನಂತರ ಶ್ರೀಲಂಕಾ ತಂಡ ಸಂಪೂರ್ಣ ಕುಸಿತ ಕಂಡಿತು. 157 ರನ್‌ಗೆ 2 ವಿಕೆಟ್‌  ಕಳೆದುಕೊಂಡಿದ್ದ ಲಂಕಾ ಪಡೆ 52ರನ್‌ಗಳಿಗೆ ಉಳಿದ 8 ವಿಕೆಟ್‌ ಕಳೆದುಕೊಳ್ಳುವ ಮೂಲಕ ದಿಢೀರ್‌ ಕುಸಿತ ಕಂಡಿತು.

ಚರಿತ್ ಹಸಲಂಕ (25), ಕುಶಾಲ್ ಮೆಂಡಿಸ್ (9), ಸದೀರ ವಿಕ್ರಮ (8), ಧನಂಜಯ್ ಡಿಸಿಲ್ವ ( 7 ) ಚಮಿಕಾ ಕರುಣರತ್ನೆ (2), ದುಣಿತ್ ವೆಲ್ಲಾಲಗೆ (2) ಮತ್ತು  ಲಹಿರು ಕುಮಾರ (4) ರನ್ ಗಳಿಸಿ ಪ್ರತಿಯೊಬ್ಬ ಲಂಕಾ ಬ್ಯಾಟರ್‌ ಪೆವಿಲಿಯನ್‌ ಪೆರೇಡ್‌ ನಡೆಸಿದರು.

ಆಸ್ಟ್ರೇಲಿಯ ಪರ ಉತ್ತಮ ಬೌಲಿಂಗ್‌ ಪ್ರದರ್ಶನ ನೀಡಿದ ಆಡಂ ಝಾಂಪ 4 ವಿಕೆಟ್ ಕಬಳಿಸಿದರೆ, ಮಿಷೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ ತಲಾ 2, ಗ್ಲೆನ್ ಮ್ಯಾಕ್ಸ್ ವೆಲ್ 1 ವಿಕೆಟ್ ಪಡೆದರು.

andolanait

Recent Posts

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

23 mins ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

34 mins ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

42 mins ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

57 mins ago

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

1 hour ago

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

2 hours ago