ಕ್ರೀಡೆ

ಏಕದಿನ ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧದ 209ಕ್ಕೆ ಆಲೌಟ್ ಆದ ಶ್ರೀಲಂಕಾ

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ 14ನೇ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಶ್ರೀಲಂಕಾ 209 ರನ್ ಗೆ ಆಲೌಟ್ ಆಗಿದೆ.

ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿತು. ಲಂಕಾದ ಆರಂಭಿಕ ಬ್ಯಾಟರ್ಸ್ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಮೊದಲ ವಿಕೆಟ್ ಪತನ ಕ್ಕೆ 125 ರನ್ ಜೊತೆಯಾಟ ಆಡಿದ ಪತುಮ್ ನಿಸಂಕಾ ಹಾಗೂ ಕುಶಾಲ್ ಪರೇರಾ ಆಸೀಸ್ ಬೌಲರ್ಸ್ ಗಳನ್ನು ಕಾಡಿದರು. ಪತುಮ್ ನಿಸಂಕಾ 8 ಬೌಂಡರಿ ಸಹಿತ 61 ರನ್ ಗಳಿಸಿದರೆ ಕುಶಾಲ್ ಪರೇರಾ 12 ಬೌಂಡರಿ ಸಹಿತ 78 ರನ್ ಬಾರಿಸಿ ಪ್ಯಾಟ್ ಕಮ್ಮಿನ್ಸ್ ಗೆ ವಿಕೆಟ್ ಒಪ್ಪಿಸಿದರು. ಉತ್ತಮ ಆರಂಭದ ಹೊರತಾಗಿಯೂ ತಂಡ ಸ್ಥಿರ ಪ್ರದರ್ಶನ ನೀಡಲು ವಿಫಲವಾಯಿತು.

ಇವರಿಬ್ಬರ ಜೋಡಿಯ ನಂತರ ಶ್ರೀಲಂಕಾ ತಂಡ ಸಂಪೂರ್ಣ ಕುಸಿತ ಕಂಡಿತು. 157 ರನ್‌ಗೆ 2 ವಿಕೆಟ್‌  ಕಳೆದುಕೊಂಡಿದ್ದ ಲಂಕಾ ಪಡೆ 52ರನ್‌ಗಳಿಗೆ ಉಳಿದ 8 ವಿಕೆಟ್‌ ಕಳೆದುಕೊಳ್ಳುವ ಮೂಲಕ ದಿಢೀರ್‌ ಕುಸಿತ ಕಂಡಿತು.

ಚರಿತ್ ಹಸಲಂಕ (25), ಕುಶಾಲ್ ಮೆಂಡಿಸ್ (9), ಸದೀರ ವಿಕ್ರಮ (8), ಧನಂಜಯ್ ಡಿಸಿಲ್ವ ( 7 ) ಚಮಿಕಾ ಕರುಣರತ್ನೆ (2), ದುಣಿತ್ ವೆಲ್ಲಾಲಗೆ (2) ಮತ್ತು  ಲಹಿರು ಕುಮಾರ (4) ರನ್ ಗಳಿಸಿ ಪ್ರತಿಯೊಬ್ಬ ಲಂಕಾ ಬ್ಯಾಟರ್‌ ಪೆವಿಲಿಯನ್‌ ಪೆರೇಡ್‌ ನಡೆಸಿದರು.

ಆಸ್ಟ್ರೇಲಿಯ ಪರ ಉತ್ತಮ ಬೌಲಿಂಗ್‌ ಪ್ರದರ್ಶನ ನೀಡಿದ ಆಡಂ ಝಾಂಪ 4 ವಿಕೆಟ್ ಕಬಳಿಸಿದರೆ, ಮಿಷೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ ತಲಾ 2, ಗ್ಲೆನ್ ಮ್ಯಾಕ್ಸ್ ವೆಲ್ 1 ವಿಕೆಟ್ ಪಡೆದರು.

andolanait

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

2 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

3 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

3 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

4 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

4 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

5 hours ago