ಕ್ರೀಡೆ

ಏಕದಿನ ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧದ 209ಕ್ಕೆ ಆಲೌಟ್ ಆದ ಶ್ರೀಲಂಕಾ

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ 14ನೇ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಶ್ರೀಲಂಕಾ 209 ರನ್ ಗೆ ಆಲೌಟ್ ಆಗಿದೆ.

ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿತು. ಲಂಕಾದ ಆರಂಭಿಕ ಬ್ಯಾಟರ್ಸ್ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಮೊದಲ ವಿಕೆಟ್ ಪತನ ಕ್ಕೆ 125 ರನ್ ಜೊತೆಯಾಟ ಆಡಿದ ಪತುಮ್ ನಿಸಂಕಾ ಹಾಗೂ ಕುಶಾಲ್ ಪರೇರಾ ಆಸೀಸ್ ಬೌಲರ್ಸ್ ಗಳನ್ನು ಕಾಡಿದರು. ಪತುಮ್ ನಿಸಂಕಾ 8 ಬೌಂಡರಿ ಸಹಿತ 61 ರನ್ ಗಳಿಸಿದರೆ ಕುಶಾಲ್ ಪರೇರಾ 12 ಬೌಂಡರಿ ಸಹಿತ 78 ರನ್ ಬಾರಿಸಿ ಪ್ಯಾಟ್ ಕಮ್ಮಿನ್ಸ್ ಗೆ ವಿಕೆಟ್ ಒಪ್ಪಿಸಿದರು. ಉತ್ತಮ ಆರಂಭದ ಹೊರತಾಗಿಯೂ ತಂಡ ಸ್ಥಿರ ಪ್ರದರ್ಶನ ನೀಡಲು ವಿಫಲವಾಯಿತು.

ಇವರಿಬ್ಬರ ಜೋಡಿಯ ನಂತರ ಶ್ರೀಲಂಕಾ ತಂಡ ಸಂಪೂರ್ಣ ಕುಸಿತ ಕಂಡಿತು. 157 ರನ್‌ಗೆ 2 ವಿಕೆಟ್‌  ಕಳೆದುಕೊಂಡಿದ್ದ ಲಂಕಾ ಪಡೆ 52ರನ್‌ಗಳಿಗೆ ಉಳಿದ 8 ವಿಕೆಟ್‌ ಕಳೆದುಕೊಳ್ಳುವ ಮೂಲಕ ದಿಢೀರ್‌ ಕುಸಿತ ಕಂಡಿತು.

ಚರಿತ್ ಹಸಲಂಕ (25), ಕುಶಾಲ್ ಮೆಂಡಿಸ್ (9), ಸದೀರ ವಿಕ್ರಮ (8), ಧನಂಜಯ್ ಡಿಸಿಲ್ವ ( 7 ) ಚಮಿಕಾ ಕರುಣರತ್ನೆ (2), ದುಣಿತ್ ವೆಲ್ಲಾಲಗೆ (2) ಮತ್ತು  ಲಹಿರು ಕುಮಾರ (4) ರನ್ ಗಳಿಸಿ ಪ್ರತಿಯೊಬ್ಬ ಲಂಕಾ ಬ್ಯಾಟರ್‌ ಪೆವಿಲಿಯನ್‌ ಪೆರೇಡ್‌ ನಡೆಸಿದರು.

ಆಸ್ಟ್ರೇಲಿಯ ಪರ ಉತ್ತಮ ಬೌಲಿಂಗ್‌ ಪ್ರದರ್ಶನ ನೀಡಿದ ಆಡಂ ಝಾಂಪ 4 ವಿಕೆಟ್ ಕಬಳಿಸಿದರೆ, ಮಿಷೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ ತಲಾ 2, ಗ್ಲೆನ್ ಮ್ಯಾಕ್ಸ್ ವೆಲ್ 1 ವಿಕೆಟ್ ಪಡೆದರು.

andolanait

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

12 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

21 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

21 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

21 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

21 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

21 hours ago