ಕ್ರೀಡೆ

ಏಕದಿನ ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧದ 209ಕ್ಕೆ ಆಲೌಟ್ ಆದ ಶ್ರೀಲಂಕಾ

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ 14ನೇ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಶ್ರೀಲಂಕಾ 209 ರನ್ ಗೆ ಆಲೌಟ್ ಆಗಿದೆ.

ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿತು. ಲಂಕಾದ ಆರಂಭಿಕ ಬ್ಯಾಟರ್ಸ್ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಮೊದಲ ವಿಕೆಟ್ ಪತನ ಕ್ಕೆ 125 ರನ್ ಜೊತೆಯಾಟ ಆಡಿದ ಪತುಮ್ ನಿಸಂಕಾ ಹಾಗೂ ಕುಶಾಲ್ ಪರೇರಾ ಆಸೀಸ್ ಬೌಲರ್ಸ್ ಗಳನ್ನು ಕಾಡಿದರು. ಪತುಮ್ ನಿಸಂಕಾ 8 ಬೌಂಡರಿ ಸಹಿತ 61 ರನ್ ಗಳಿಸಿದರೆ ಕುಶಾಲ್ ಪರೇರಾ 12 ಬೌಂಡರಿ ಸಹಿತ 78 ರನ್ ಬಾರಿಸಿ ಪ್ಯಾಟ್ ಕಮ್ಮಿನ್ಸ್ ಗೆ ವಿಕೆಟ್ ಒಪ್ಪಿಸಿದರು. ಉತ್ತಮ ಆರಂಭದ ಹೊರತಾಗಿಯೂ ತಂಡ ಸ್ಥಿರ ಪ್ರದರ್ಶನ ನೀಡಲು ವಿಫಲವಾಯಿತು.

ಇವರಿಬ್ಬರ ಜೋಡಿಯ ನಂತರ ಶ್ರೀಲಂಕಾ ತಂಡ ಸಂಪೂರ್ಣ ಕುಸಿತ ಕಂಡಿತು. 157 ರನ್‌ಗೆ 2 ವಿಕೆಟ್‌  ಕಳೆದುಕೊಂಡಿದ್ದ ಲಂಕಾ ಪಡೆ 52ರನ್‌ಗಳಿಗೆ ಉಳಿದ 8 ವಿಕೆಟ್‌ ಕಳೆದುಕೊಳ್ಳುವ ಮೂಲಕ ದಿಢೀರ್‌ ಕುಸಿತ ಕಂಡಿತು.

ಚರಿತ್ ಹಸಲಂಕ (25), ಕುಶಾಲ್ ಮೆಂಡಿಸ್ (9), ಸದೀರ ವಿಕ್ರಮ (8), ಧನಂಜಯ್ ಡಿಸಿಲ್ವ ( 7 ) ಚಮಿಕಾ ಕರುಣರತ್ನೆ (2), ದುಣಿತ್ ವೆಲ್ಲಾಲಗೆ (2) ಮತ್ತು  ಲಹಿರು ಕುಮಾರ (4) ರನ್ ಗಳಿಸಿ ಪ್ರತಿಯೊಬ್ಬ ಲಂಕಾ ಬ್ಯಾಟರ್‌ ಪೆವಿಲಿಯನ್‌ ಪೆರೇಡ್‌ ನಡೆಸಿದರು.

ಆಸ್ಟ್ರೇಲಿಯ ಪರ ಉತ್ತಮ ಬೌಲಿಂಗ್‌ ಪ್ರದರ್ಶನ ನೀಡಿದ ಆಡಂ ಝಾಂಪ 4 ವಿಕೆಟ್ ಕಬಳಿಸಿದರೆ, ಮಿಷೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ ತಲಾ 2, ಗ್ಲೆನ್ ಮ್ಯಾಕ್ಸ್ ವೆಲ್ 1 ವಿಕೆಟ್ ಪಡೆದರು.

andolanait

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

2 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

2 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

2 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

2 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

2 hours ago