ಕ್ರೀಡೆ

ಏಕದಿನ ವಿಶ್ವಕಪ್‌ನ ಅಧಿಕೃತ ಗೀತೆ ಬಿಡುಗಡೆಗೊಳಿಸಿದ ಐಸಿಸಿ

ನವದೆಹಲಿ : ಭಾರತದಲ್ಲಿ ಅಕ್ಟೋಬರ್ 5ರಿಂದ ಆರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಅಧಿಕೃತ ಗೀತೆಯನ್ನು ಐಸಿಸಿ ಬುಧವಾರ ಬಿಡುಗಡೆ ಮಾಡಿದೆ.

ಈ ಗೀತೆಯನ್ನು ದಿಲ್ ಜಶ್ನ್ ಬೋಲೆ ಎಂದು ಕರೆಯಲಾಗುತ್ತಿದ್ದು ಇದರಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಬಾಲಿವುಡ್‌ನ ಖ್ಯಾತ ಸಂಗೀತ ಸಂಯೋಜಕ ಪ್ರೀತಮ್ ಈ ಗೀತೆಗೆ ಸಂಗೀತ ನೀಡಿದ್ದಾರೆ. ಗೀತೆಯಲ್ಲಿ ಭಾರತದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ಅವರ ಪತ್ನಿ, ನೃತ್ಯ ಸಂಯೋಜಕಿ ಧನಶ್ರೀ ವರ್ಮಾ ಕೂಡ ಇದ್ದಾರೆ.

3 ನಿಮಿಷಗಳ 22 ಸೆಕೆಂಡ್‌ಗಳ ಹಾಡಿಗೆ ಶ್ಲೋಕ್ ಲಾಲ್ ಹಾಗೂ ಸಾವೇರಿ ವರ್ಮಾ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಪ್ರೀತಮ್, ನಕಾಶ್ ಅಝೀಝ್, ಶ್ರೀರಾಮ ಚಂದ್ರ, ಅಮಿತ್ ಮಿಶ್ರಾ, ಜೋನಿತಾ ಗಾಂಧಿ, ಆಕಾಶ ಸಿಂಗ್ ಹಾಗೂ ಚರಣ್ ಹಾಡಿದ್ದಾರೆ.

https://x.com/ICC/status/1704384709646864506?s=20

ಕ್ರಿಕೆಟ್ ಸಂಭ್ರಮವನ್ನು ಆಚರಿಸಲು ಜಗತ್ತನ್ನು ಆಹ್ವಾನಿಸುವ ಗುರಿಯನ್ನು ಈ ಹಾಡು ಹೊಂದಿದೆ. ಕ್ರಿಕೆಟ್ ಬಗ್ಗೆ ಭಾರತದಲ್ಲಿ ಅತೀ ಹೆಚ್ಚು ಮಮಕಾರವಿದ್ದು , ಇದುವರೆಗಿನ ಅತಿದೊಡ್ಡ ವಿಶ್ವಕಪ್‌ಗಾಗಿ ದಿಲ್ ಜಶ್ನ್ ಬೋಲೆ ಅನ್ನು ರಚಿಸುವುದು ನನಗೆ ಅಪಾರ ಗೌರವವಾಗಿದೆ. ಈ ಹಾಡು 1.4 ಶತಕೋಟಿ ಭಾರತೀಯ ಅಭಿಮಾನಿಗಳಿಗೆ ಮಾತ್ರವಲ್ಲ ಇಡೀ ಜಗತ್ತು ಭಾರತಕ್ಕೆ ಬಂದು ಇದುವರೆಗಿನ ಅತಿದೊಡ್ಡ ವಿಶ್ವಕಪ್ ನ ಭಾಗವಾಗಲು ನೆರವಾಗಲಿದೆ ಎಂದು ಸಂಗೀತ ಸಂಯೋಜಕ ಪ್ರೀತಮ್ ಹೇಳಿದ್ದಾರೆ.

ಐಸಿಸಿ ಪ್ರಯತ್ನದ ಹೊರತಾಗಿಯೂ ಹಾಡಿಗೆ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳಿಂದ ಆತ್ಮೀಯ ಸ್ವಾಗತ ಸಿಗಲಿಲ್ಲ. 2011 ಹಾಗೂ 2015ರ ಹಿಂದಿನ ಆವೃತ್ತಿಗಳ ಗೀತೆಗಳಂತೆ ಕ್ರಿಕೆಟ್ ಅಭಿಮಾನಿಗಳ ನಾಡಿಮಿಡಿತವನ್ನು ಸೆಳೆಯಲು ಈ ಗೀತೆಗೆ ಸಾಧ್ಯವಾಗದ ಕಾರಣ ಐಸಿಸಿಯನ್ನು ಎಲ್ಲರೂ ಟೀಕಿಸಿದ್ದಾರೆ.

2011ರ ವಿಶ್ವಕಪ್ ಗೀತೆಯನ್ನು ಶಂಕರ್ ಮಹಾದೇವನ್ ಸಂಯೋಜಿಸಿದ್ದರು ಹಾಗೂ ಇದನ್ನು ದೇ ಘುಮಾಕೆ ಎಂದು ಕರೆಯಲಾಗಿತ್ತು.

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

5 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

5 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

6 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

6 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

6 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

6 hours ago