ಕ್ರೀಡೆ

ಏಕದಿನ ವಿಶ್ವಕಪ್‌ನ ಅಧಿಕೃತ ಗೀತೆ ಬಿಡುಗಡೆಗೊಳಿಸಿದ ಐಸಿಸಿ

ನವದೆಹಲಿ : ಭಾರತದಲ್ಲಿ ಅಕ್ಟೋಬರ್ 5ರಿಂದ ಆರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಅಧಿಕೃತ ಗೀತೆಯನ್ನು ಐಸಿಸಿ ಬುಧವಾರ ಬಿಡುಗಡೆ ಮಾಡಿದೆ.

ಈ ಗೀತೆಯನ್ನು ದಿಲ್ ಜಶ್ನ್ ಬೋಲೆ ಎಂದು ಕರೆಯಲಾಗುತ್ತಿದ್ದು ಇದರಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಬಾಲಿವುಡ್‌ನ ಖ್ಯಾತ ಸಂಗೀತ ಸಂಯೋಜಕ ಪ್ರೀತಮ್ ಈ ಗೀತೆಗೆ ಸಂಗೀತ ನೀಡಿದ್ದಾರೆ. ಗೀತೆಯಲ್ಲಿ ಭಾರತದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ಅವರ ಪತ್ನಿ, ನೃತ್ಯ ಸಂಯೋಜಕಿ ಧನಶ್ರೀ ವರ್ಮಾ ಕೂಡ ಇದ್ದಾರೆ.

3 ನಿಮಿಷಗಳ 22 ಸೆಕೆಂಡ್‌ಗಳ ಹಾಡಿಗೆ ಶ್ಲೋಕ್ ಲಾಲ್ ಹಾಗೂ ಸಾವೇರಿ ವರ್ಮಾ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಪ್ರೀತಮ್, ನಕಾಶ್ ಅಝೀಝ್, ಶ್ರೀರಾಮ ಚಂದ್ರ, ಅಮಿತ್ ಮಿಶ್ರಾ, ಜೋನಿತಾ ಗಾಂಧಿ, ಆಕಾಶ ಸಿಂಗ್ ಹಾಗೂ ಚರಣ್ ಹಾಡಿದ್ದಾರೆ.

https://x.com/ICC/status/1704384709646864506?s=20

ಕ್ರಿಕೆಟ್ ಸಂಭ್ರಮವನ್ನು ಆಚರಿಸಲು ಜಗತ್ತನ್ನು ಆಹ್ವಾನಿಸುವ ಗುರಿಯನ್ನು ಈ ಹಾಡು ಹೊಂದಿದೆ. ಕ್ರಿಕೆಟ್ ಬಗ್ಗೆ ಭಾರತದಲ್ಲಿ ಅತೀ ಹೆಚ್ಚು ಮಮಕಾರವಿದ್ದು , ಇದುವರೆಗಿನ ಅತಿದೊಡ್ಡ ವಿಶ್ವಕಪ್‌ಗಾಗಿ ದಿಲ್ ಜಶ್ನ್ ಬೋಲೆ ಅನ್ನು ರಚಿಸುವುದು ನನಗೆ ಅಪಾರ ಗೌರವವಾಗಿದೆ. ಈ ಹಾಡು 1.4 ಶತಕೋಟಿ ಭಾರತೀಯ ಅಭಿಮಾನಿಗಳಿಗೆ ಮಾತ್ರವಲ್ಲ ಇಡೀ ಜಗತ್ತು ಭಾರತಕ್ಕೆ ಬಂದು ಇದುವರೆಗಿನ ಅತಿದೊಡ್ಡ ವಿಶ್ವಕಪ್ ನ ಭಾಗವಾಗಲು ನೆರವಾಗಲಿದೆ ಎಂದು ಸಂಗೀತ ಸಂಯೋಜಕ ಪ್ರೀತಮ್ ಹೇಳಿದ್ದಾರೆ.

ಐಸಿಸಿ ಪ್ರಯತ್ನದ ಹೊರತಾಗಿಯೂ ಹಾಡಿಗೆ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳಿಂದ ಆತ್ಮೀಯ ಸ್ವಾಗತ ಸಿಗಲಿಲ್ಲ. 2011 ಹಾಗೂ 2015ರ ಹಿಂದಿನ ಆವೃತ್ತಿಗಳ ಗೀತೆಗಳಂತೆ ಕ್ರಿಕೆಟ್ ಅಭಿಮಾನಿಗಳ ನಾಡಿಮಿಡಿತವನ್ನು ಸೆಳೆಯಲು ಈ ಗೀತೆಗೆ ಸಾಧ್ಯವಾಗದ ಕಾರಣ ಐಸಿಸಿಯನ್ನು ಎಲ್ಲರೂ ಟೀಕಿಸಿದ್ದಾರೆ.

2011ರ ವಿಶ್ವಕಪ್ ಗೀತೆಯನ್ನು ಶಂಕರ್ ಮಹಾದೇವನ್ ಸಂಯೋಜಿಸಿದ್ದರು ಹಾಗೂ ಇದನ್ನು ದೇ ಘುಮಾಕೆ ಎಂದು ಕರೆಯಲಾಗಿತ್ತು.

andolanait

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

7 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

7 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

8 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

8 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

8 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

9 hours ago