ಕ್ರೀಡೆ

ಏಕದಿನ ವಿಶ್ವಕಪ್‌ನ ಅಧಿಕೃತ ಗೀತೆ ಬಿಡುಗಡೆಗೊಳಿಸಿದ ಐಸಿಸಿ

ನವದೆಹಲಿ : ಭಾರತದಲ್ಲಿ ಅಕ್ಟೋಬರ್ 5ರಿಂದ ಆರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಅಧಿಕೃತ ಗೀತೆಯನ್ನು ಐಸಿಸಿ ಬುಧವಾರ ಬಿಡುಗಡೆ ಮಾಡಿದೆ.

ಈ ಗೀತೆಯನ್ನು ದಿಲ್ ಜಶ್ನ್ ಬೋಲೆ ಎಂದು ಕರೆಯಲಾಗುತ್ತಿದ್ದು ಇದರಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಬಾಲಿವುಡ್‌ನ ಖ್ಯಾತ ಸಂಗೀತ ಸಂಯೋಜಕ ಪ್ರೀತಮ್ ಈ ಗೀತೆಗೆ ಸಂಗೀತ ನೀಡಿದ್ದಾರೆ. ಗೀತೆಯಲ್ಲಿ ಭಾರತದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ಅವರ ಪತ್ನಿ, ನೃತ್ಯ ಸಂಯೋಜಕಿ ಧನಶ್ರೀ ವರ್ಮಾ ಕೂಡ ಇದ್ದಾರೆ.

3 ನಿಮಿಷಗಳ 22 ಸೆಕೆಂಡ್‌ಗಳ ಹಾಡಿಗೆ ಶ್ಲೋಕ್ ಲಾಲ್ ಹಾಗೂ ಸಾವೇರಿ ವರ್ಮಾ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಪ್ರೀತಮ್, ನಕಾಶ್ ಅಝೀಝ್, ಶ್ರೀರಾಮ ಚಂದ್ರ, ಅಮಿತ್ ಮಿಶ್ರಾ, ಜೋನಿತಾ ಗಾಂಧಿ, ಆಕಾಶ ಸಿಂಗ್ ಹಾಗೂ ಚರಣ್ ಹಾಡಿದ್ದಾರೆ.

https://x.com/ICC/status/1704384709646864506?s=20

ಕ್ರಿಕೆಟ್ ಸಂಭ್ರಮವನ್ನು ಆಚರಿಸಲು ಜಗತ್ತನ್ನು ಆಹ್ವಾನಿಸುವ ಗುರಿಯನ್ನು ಈ ಹಾಡು ಹೊಂದಿದೆ. ಕ್ರಿಕೆಟ್ ಬಗ್ಗೆ ಭಾರತದಲ್ಲಿ ಅತೀ ಹೆಚ್ಚು ಮಮಕಾರವಿದ್ದು , ಇದುವರೆಗಿನ ಅತಿದೊಡ್ಡ ವಿಶ್ವಕಪ್‌ಗಾಗಿ ದಿಲ್ ಜಶ್ನ್ ಬೋಲೆ ಅನ್ನು ರಚಿಸುವುದು ನನಗೆ ಅಪಾರ ಗೌರವವಾಗಿದೆ. ಈ ಹಾಡು 1.4 ಶತಕೋಟಿ ಭಾರತೀಯ ಅಭಿಮಾನಿಗಳಿಗೆ ಮಾತ್ರವಲ್ಲ ಇಡೀ ಜಗತ್ತು ಭಾರತಕ್ಕೆ ಬಂದು ಇದುವರೆಗಿನ ಅತಿದೊಡ್ಡ ವಿಶ್ವಕಪ್ ನ ಭಾಗವಾಗಲು ನೆರವಾಗಲಿದೆ ಎಂದು ಸಂಗೀತ ಸಂಯೋಜಕ ಪ್ರೀತಮ್ ಹೇಳಿದ್ದಾರೆ.

ಐಸಿಸಿ ಪ್ರಯತ್ನದ ಹೊರತಾಗಿಯೂ ಹಾಡಿಗೆ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳಿಂದ ಆತ್ಮೀಯ ಸ್ವಾಗತ ಸಿಗಲಿಲ್ಲ. 2011 ಹಾಗೂ 2015ರ ಹಿಂದಿನ ಆವೃತ್ತಿಗಳ ಗೀತೆಗಳಂತೆ ಕ್ರಿಕೆಟ್ ಅಭಿಮಾನಿಗಳ ನಾಡಿಮಿಡಿತವನ್ನು ಸೆಳೆಯಲು ಈ ಗೀತೆಗೆ ಸಾಧ್ಯವಾಗದ ಕಾರಣ ಐಸಿಸಿಯನ್ನು ಎಲ್ಲರೂ ಟೀಕಿಸಿದ್ದಾರೆ.

2011ರ ವಿಶ್ವಕಪ್ ಗೀತೆಯನ್ನು ಶಂಕರ್ ಮಹಾದೇವನ್ ಸಂಯೋಜಿಸಿದ್ದರು ಹಾಗೂ ಇದನ್ನು ದೇ ಘುಮಾಕೆ ಎಂದು ಕರೆಯಲಾಗಿತ್ತು.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago