ಕ್ರೀಡೆ

ಏಕದಿನ ವಿಶ್ವಕಪ್‌ನ ಅಧಿಕೃತ ಗೀತೆ ಬಿಡುಗಡೆಗೊಳಿಸಿದ ಐಸಿಸಿ

ನವದೆಹಲಿ : ಭಾರತದಲ್ಲಿ ಅಕ್ಟೋಬರ್ 5ರಿಂದ ಆರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಅಧಿಕೃತ ಗೀತೆಯನ್ನು ಐಸಿಸಿ ಬುಧವಾರ ಬಿಡುಗಡೆ ಮಾಡಿದೆ.

ಈ ಗೀತೆಯನ್ನು ದಿಲ್ ಜಶ್ನ್ ಬೋಲೆ ಎಂದು ಕರೆಯಲಾಗುತ್ತಿದ್ದು ಇದರಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಬಾಲಿವುಡ್‌ನ ಖ್ಯಾತ ಸಂಗೀತ ಸಂಯೋಜಕ ಪ್ರೀತಮ್ ಈ ಗೀತೆಗೆ ಸಂಗೀತ ನೀಡಿದ್ದಾರೆ. ಗೀತೆಯಲ್ಲಿ ಭಾರತದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ಅವರ ಪತ್ನಿ, ನೃತ್ಯ ಸಂಯೋಜಕಿ ಧನಶ್ರೀ ವರ್ಮಾ ಕೂಡ ಇದ್ದಾರೆ.

3 ನಿಮಿಷಗಳ 22 ಸೆಕೆಂಡ್‌ಗಳ ಹಾಡಿಗೆ ಶ್ಲೋಕ್ ಲಾಲ್ ಹಾಗೂ ಸಾವೇರಿ ವರ್ಮಾ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಪ್ರೀತಮ್, ನಕಾಶ್ ಅಝೀಝ್, ಶ್ರೀರಾಮ ಚಂದ್ರ, ಅಮಿತ್ ಮಿಶ್ರಾ, ಜೋನಿತಾ ಗಾಂಧಿ, ಆಕಾಶ ಸಿಂಗ್ ಹಾಗೂ ಚರಣ್ ಹಾಡಿದ್ದಾರೆ.

https://x.com/ICC/status/1704384709646864506?s=20

ಕ್ರಿಕೆಟ್ ಸಂಭ್ರಮವನ್ನು ಆಚರಿಸಲು ಜಗತ್ತನ್ನು ಆಹ್ವಾನಿಸುವ ಗುರಿಯನ್ನು ಈ ಹಾಡು ಹೊಂದಿದೆ. ಕ್ರಿಕೆಟ್ ಬಗ್ಗೆ ಭಾರತದಲ್ಲಿ ಅತೀ ಹೆಚ್ಚು ಮಮಕಾರವಿದ್ದು , ಇದುವರೆಗಿನ ಅತಿದೊಡ್ಡ ವಿಶ್ವಕಪ್‌ಗಾಗಿ ದಿಲ್ ಜಶ್ನ್ ಬೋಲೆ ಅನ್ನು ರಚಿಸುವುದು ನನಗೆ ಅಪಾರ ಗೌರವವಾಗಿದೆ. ಈ ಹಾಡು 1.4 ಶತಕೋಟಿ ಭಾರತೀಯ ಅಭಿಮಾನಿಗಳಿಗೆ ಮಾತ್ರವಲ್ಲ ಇಡೀ ಜಗತ್ತು ಭಾರತಕ್ಕೆ ಬಂದು ಇದುವರೆಗಿನ ಅತಿದೊಡ್ಡ ವಿಶ್ವಕಪ್ ನ ಭಾಗವಾಗಲು ನೆರವಾಗಲಿದೆ ಎಂದು ಸಂಗೀತ ಸಂಯೋಜಕ ಪ್ರೀತಮ್ ಹೇಳಿದ್ದಾರೆ.

ಐಸಿಸಿ ಪ್ರಯತ್ನದ ಹೊರತಾಗಿಯೂ ಹಾಡಿಗೆ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳಿಂದ ಆತ್ಮೀಯ ಸ್ವಾಗತ ಸಿಗಲಿಲ್ಲ. 2011 ಹಾಗೂ 2015ರ ಹಿಂದಿನ ಆವೃತ್ತಿಗಳ ಗೀತೆಗಳಂತೆ ಕ್ರಿಕೆಟ್ ಅಭಿಮಾನಿಗಳ ನಾಡಿಮಿಡಿತವನ್ನು ಸೆಳೆಯಲು ಈ ಗೀತೆಗೆ ಸಾಧ್ಯವಾಗದ ಕಾರಣ ಐಸಿಸಿಯನ್ನು ಎಲ್ಲರೂ ಟೀಕಿಸಿದ್ದಾರೆ.

2011ರ ವಿಶ್ವಕಪ್ ಗೀತೆಯನ್ನು ಶಂಕರ್ ಮಹಾದೇವನ್ ಸಂಯೋಜಿಸಿದ್ದರು ಹಾಗೂ ಇದನ್ನು ದೇ ಘುಮಾಕೆ ಎಂದು ಕರೆಯಲಾಗಿತ್ತು.

andolanait

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

48 mins ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

2 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

3 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

5 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

5 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

6 hours ago