ನವದೆಹಲಿ : ಭಾರತದಲ್ಲಿ ಅಕ್ಟೋಬರ್ 5ರಿಂದ ಆರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ನ ಅಧಿಕೃತ ಗೀತೆಯನ್ನು ಐಸಿಸಿ ಬುಧವಾರ ಬಿಡುಗಡೆ ಮಾಡಿದೆ.
ಈ ಗೀತೆಯನ್ನು ದಿಲ್ ಜಶ್ನ್ ಬೋಲೆ ಎಂದು ಕರೆಯಲಾಗುತ್ತಿದ್ದು ಇದರಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಬಾಲಿವುಡ್ನ ಖ್ಯಾತ ಸಂಗೀತ ಸಂಯೋಜಕ ಪ್ರೀತಮ್ ಈ ಗೀತೆಗೆ ಸಂಗೀತ ನೀಡಿದ್ದಾರೆ. ಗೀತೆಯಲ್ಲಿ ಭಾರತದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ಅವರ ಪತ್ನಿ, ನೃತ್ಯ ಸಂಯೋಜಕಿ ಧನಶ್ರೀ ವರ್ಮಾ ಕೂಡ ಇದ್ದಾರೆ.
3 ನಿಮಿಷಗಳ 22 ಸೆಕೆಂಡ್ಗಳ ಹಾಡಿಗೆ ಶ್ಲೋಕ್ ಲಾಲ್ ಹಾಗೂ ಸಾವೇರಿ ವರ್ಮಾ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಪ್ರೀತಮ್, ನಕಾಶ್ ಅಝೀಝ್, ಶ್ರೀರಾಮ ಚಂದ್ರ, ಅಮಿತ್ ಮಿಶ್ರಾ, ಜೋನಿತಾ ಗಾಂಧಿ, ಆಕಾಶ ಸಿಂಗ್ ಹಾಗೂ ಚರಣ್ ಹಾಡಿದ್ದಾರೆ.
https://x.com/ICC/status/1704384709646864506?s=20
ಕ್ರಿಕೆಟ್ ಸಂಭ್ರಮವನ್ನು ಆಚರಿಸಲು ಜಗತ್ತನ್ನು ಆಹ್ವಾನಿಸುವ ಗುರಿಯನ್ನು ಈ ಹಾಡು ಹೊಂದಿದೆ. ಕ್ರಿಕೆಟ್ ಬಗ್ಗೆ ಭಾರತದಲ್ಲಿ ಅತೀ ಹೆಚ್ಚು ಮಮಕಾರವಿದ್ದು , ಇದುವರೆಗಿನ ಅತಿದೊಡ್ಡ ವಿಶ್ವಕಪ್ಗಾಗಿ ದಿಲ್ ಜಶ್ನ್ ಬೋಲೆ ಅನ್ನು ರಚಿಸುವುದು ನನಗೆ ಅಪಾರ ಗೌರವವಾಗಿದೆ. ಈ ಹಾಡು 1.4 ಶತಕೋಟಿ ಭಾರತೀಯ ಅಭಿಮಾನಿಗಳಿಗೆ ಮಾತ್ರವಲ್ಲ ಇಡೀ ಜಗತ್ತು ಭಾರತಕ್ಕೆ ಬಂದು ಇದುವರೆಗಿನ ಅತಿದೊಡ್ಡ ವಿಶ್ವಕಪ್ ನ ಭಾಗವಾಗಲು ನೆರವಾಗಲಿದೆ ಎಂದು ಸಂಗೀತ ಸಂಯೋಜಕ ಪ್ರೀತಮ್ ಹೇಳಿದ್ದಾರೆ.
ಐಸಿಸಿ ಪ್ರಯತ್ನದ ಹೊರತಾಗಿಯೂ ಹಾಡಿಗೆ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳಿಂದ ಆತ್ಮೀಯ ಸ್ವಾಗತ ಸಿಗಲಿಲ್ಲ. 2011 ಹಾಗೂ 2015ರ ಹಿಂದಿನ ಆವೃತ್ತಿಗಳ ಗೀತೆಗಳಂತೆ ಕ್ರಿಕೆಟ್ ಅಭಿಮಾನಿಗಳ ನಾಡಿಮಿಡಿತವನ್ನು ಸೆಳೆಯಲು ಈ ಗೀತೆಗೆ ಸಾಧ್ಯವಾಗದ ಕಾರಣ ಐಸಿಸಿಯನ್ನು ಎಲ್ಲರೂ ಟೀಕಿಸಿದ್ದಾರೆ.
2011ರ ವಿಶ್ವಕಪ್ ಗೀತೆಯನ್ನು ಶಂಕರ್ ಮಹಾದೇವನ್ ಸಂಯೋಜಿಸಿದ್ದರು ಹಾಗೂ ಇದನ್ನು ದೇ ಘುಮಾಕೆ ಎಂದು ಕರೆಯಲಾಗಿತ್ತು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…