ಕ್ರೀಡೆ

On This Day: ಅನಿಲ್‌ ಕುಂಬ್ಳೆ 10 ವಿಕೆಟ್‌ ಸಾಧನೆಗೆ 25 ವರ್ಷ

ಕ್ರಿಕೆಟ್‌ ಜಗತ್ತು ಕಂಡ ಲೆಜೆಂಡರಿ ಸ್ಪಿನ್‌ ಬೌಲರ್ ಅನಿಲ್‌ ಕುಂಬ್ಳೆ ಟೆಸ್ಟ್‌ ಕ್ರಿಕೆಟ್‌ನ ಇನ್ನಿಂಗ್ಸ್‌ವೊಂದರಲ್ಲಿ ಹತ್ತು ವಿಕೆಟ್‌ಗಳ ಗೊಂಚಲನ್ನು ಪಡೆದ ಸಾಧನೆಗೆ ಇಂದು ( ಫೆಬ್ರವರಿ 7 ) 25 ವರ್ಷಗಳು ಕಳೆದಿವೆ.

ದೆಹಲಿಯ ಫಿರೋಜ್‌ ಷಾ ಕೋಟ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅನಿಲ್‌ ಕುಂಬ್ಳೆ ಎರಡನೇ ಇನ್ನಿಂಗ್ಸ್‌ನಲ್ಲಿ ಹತ್ತು ವಿಕೆಟ್‌ ಕಬಳಿಸಿದ್ದರು. ಈ ಮೂಲಕ 1956ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ ಬೌಲರ್‌ ಜೇಮ್‌ ಲೇಕರ್‌ ಹತ್ತು ವಿಕೆಟ್‌ಗಳ ಗೊಂಚಲನ್ನು ಪಡೆದು ಮಾಡಿದ್ದ ದಾಖಲೆಯನ್ನು ಕನ್ನಡಿಗ ಅನಿಲ್ ಕುಂಬ್ಳೆ ಸರಿಗಟ್ಟಿದರು.

ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ 212 ರನ್‌ಗಳ ಅಂತರದಲ್ಲಿ ಜಯಭೇರಿ ಬಾರಿಸಿತ್ತು. ಭಾರತ ನೀಡಿದ್ದ 420 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಗಿದ್ದ ಪಾಕಿಸ್ತಾನ ಅನಿಲ್‌ ಕುಂಬ್ಳೆ ಬೌಲಿಂಗ್‌ ದಾಳಿಗೆ ಉತ್ತರವಿಲ್ಲದಾಗಿ ಕೇವಲ 207 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು.

ಇನ್ನು ತಮ್ಮ ಈ 10 ವಿಕೆಟ್‌ಗಳ ಅವಿಸ್ಮರಣೀಯ ಸಾಧನೆಗೆ 25 ವರ್ಷಗಳು ಕಳೆದಿರುವುದರ ಕುರಿತು ಅನಿಲ್‌ ಕುಂಬ್ಳೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿಶೇಷ ವಿಡಿಯೊವೊಂದನ್ನು ಹಂಚಿಕೊಂಡಿದ್ದು, “ಈ ಮ್ಯಾಜಿಕಲ್‌ ಡೇಗೆ 25 ವರ್ಷಗಳು. ಸಮಯ ನಿಜವಾಗಿಯೂ ಹಾರುತ್ತದೆ. ಆದರೆ ನೆನಪುಗಳು ಮಾತ್ರ ಯಾವಾಗಲೂ ಎದ್ದು ಕಾಣುತ್ತವೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಚಿರಋಣಿ” ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ ಈ ವಿಡಿಯೊದಲ್ಲಿ “ಪಾಕಿಸ್ತಾನ ಯಾವುದೇ ವಿಕೆಟ್‌ ನಷ್ಟವಿಲ್ಲದೇ ನೂರು ರನ್‌ ಗಡಿ ದಾಟಿ ಅತ್ಯುತ್ತಮ ಹಂತದಲ್ಲಿತ್ತು. ವಿಕೆಟ್‌ ಪಡೆಯಲೇಬೇಕಾದ ಕೆಲಸ ಬೌಲರ್‌ಗಳದ್ದಾಗಿತ್ತು” ಎಂದು ಹೇಳಿಕೊಂಡಿದ್ದಾರೆ.

 

andolana

Recent Posts

ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

1 hour ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

1 hour ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

3 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

3 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

3 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

3 hours ago