ಕ್ರೀಡೆ

On This Day: ಅನಿಲ್‌ ಕುಂಬ್ಳೆ 10 ವಿಕೆಟ್‌ ಸಾಧನೆಗೆ 25 ವರ್ಷ

ಕ್ರಿಕೆಟ್‌ ಜಗತ್ತು ಕಂಡ ಲೆಜೆಂಡರಿ ಸ್ಪಿನ್‌ ಬೌಲರ್ ಅನಿಲ್‌ ಕುಂಬ್ಳೆ ಟೆಸ್ಟ್‌ ಕ್ರಿಕೆಟ್‌ನ ಇನ್ನಿಂಗ್ಸ್‌ವೊಂದರಲ್ಲಿ ಹತ್ತು ವಿಕೆಟ್‌ಗಳ ಗೊಂಚಲನ್ನು ಪಡೆದ ಸಾಧನೆಗೆ ಇಂದು ( ಫೆಬ್ರವರಿ 7 ) 25 ವರ್ಷಗಳು ಕಳೆದಿವೆ.

ದೆಹಲಿಯ ಫಿರೋಜ್‌ ಷಾ ಕೋಟ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅನಿಲ್‌ ಕುಂಬ್ಳೆ ಎರಡನೇ ಇನ್ನಿಂಗ್ಸ್‌ನಲ್ಲಿ ಹತ್ತು ವಿಕೆಟ್‌ ಕಬಳಿಸಿದ್ದರು. ಈ ಮೂಲಕ 1956ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ ಬೌಲರ್‌ ಜೇಮ್‌ ಲೇಕರ್‌ ಹತ್ತು ವಿಕೆಟ್‌ಗಳ ಗೊಂಚಲನ್ನು ಪಡೆದು ಮಾಡಿದ್ದ ದಾಖಲೆಯನ್ನು ಕನ್ನಡಿಗ ಅನಿಲ್ ಕುಂಬ್ಳೆ ಸರಿಗಟ್ಟಿದರು.

ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ 212 ರನ್‌ಗಳ ಅಂತರದಲ್ಲಿ ಜಯಭೇರಿ ಬಾರಿಸಿತ್ತು. ಭಾರತ ನೀಡಿದ್ದ 420 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಗಿದ್ದ ಪಾಕಿಸ್ತಾನ ಅನಿಲ್‌ ಕುಂಬ್ಳೆ ಬೌಲಿಂಗ್‌ ದಾಳಿಗೆ ಉತ್ತರವಿಲ್ಲದಾಗಿ ಕೇವಲ 207 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು.

ಇನ್ನು ತಮ್ಮ ಈ 10 ವಿಕೆಟ್‌ಗಳ ಅವಿಸ್ಮರಣೀಯ ಸಾಧನೆಗೆ 25 ವರ್ಷಗಳು ಕಳೆದಿರುವುದರ ಕುರಿತು ಅನಿಲ್‌ ಕುಂಬ್ಳೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿಶೇಷ ವಿಡಿಯೊವೊಂದನ್ನು ಹಂಚಿಕೊಂಡಿದ್ದು, “ಈ ಮ್ಯಾಜಿಕಲ್‌ ಡೇಗೆ 25 ವರ್ಷಗಳು. ಸಮಯ ನಿಜವಾಗಿಯೂ ಹಾರುತ್ತದೆ. ಆದರೆ ನೆನಪುಗಳು ಮಾತ್ರ ಯಾವಾಗಲೂ ಎದ್ದು ಕಾಣುತ್ತವೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಚಿರಋಣಿ” ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ ಈ ವಿಡಿಯೊದಲ್ಲಿ “ಪಾಕಿಸ್ತಾನ ಯಾವುದೇ ವಿಕೆಟ್‌ ನಷ್ಟವಿಲ್ಲದೇ ನೂರು ರನ್‌ ಗಡಿ ದಾಟಿ ಅತ್ಯುತ್ತಮ ಹಂತದಲ್ಲಿತ್ತು. ವಿಕೆಟ್‌ ಪಡೆಯಲೇಬೇಕಾದ ಕೆಲಸ ಬೌಲರ್‌ಗಳದ್ದಾಗಿತ್ತು” ಎಂದು ಹೇಳಿಕೊಂಡಿದ್ದಾರೆ.

 

andolana

Recent Posts

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

22 mins ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

1 hour ago

ನಾಪೋಕ್ಲು |ಕಾಡಾನೆಗಳ ದಾಳಿ ; ವಾಹನಗಳು ಜಖಂ

ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…

2 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

2 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

2 hours ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

2 hours ago