ಕ್ರೀಡೆ

On This Day: ಅನಿಲ್‌ ಕುಂಬ್ಳೆ 10 ವಿಕೆಟ್‌ ಸಾಧನೆಗೆ 25 ವರ್ಷ

ಕ್ರಿಕೆಟ್‌ ಜಗತ್ತು ಕಂಡ ಲೆಜೆಂಡರಿ ಸ್ಪಿನ್‌ ಬೌಲರ್ ಅನಿಲ್‌ ಕುಂಬ್ಳೆ ಟೆಸ್ಟ್‌ ಕ್ರಿಕೆಟ್‌ನ ಇನ್ನಿಂಗ್ಸ್‌ವೊಂದರಲ್ಲಿ ಹತ್ತು ವಿಕೆಟ್‌ಗಳ ಗೊಂಚಲನ್ನು ಪಡೆದ ಸಾಧನೆಗೆ ಇಂದು ( ಫೆಬ್ರವರಿ 7 ) 25 ವರ್ಷಗಳು ಕಳೆದಿವೆ.

ದೆಹಲಿಯ ಫಿರೋಜ್‌ ಷಾ ಕೋಟ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅನಿಲ್‌ ಕುಂಬ್ಳೆ ಎರಡನೇ ಇನ್ನಿಂಗ್ಸ್‌ನಲ್ಲಿ ಹತ್ತು ವಿಕೆಟ್‌ ಕಬಳಿಸಿದ್ದರು. ಈ ಮೂಲಕ 1956ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ ಬೌಲರ್‌ ಜೇಮ್‌ ಲೇಕರ್‌ ಹತ್ತು ವಿಕೆಟ್‌ಗಳ ಗೊಂಚಲನ್ನು ಪಡೆದು ಮಾಡಿದ್ದ ದಾಖಲೆಯನ್ನು ಕನ್ನಡಿಗ ಅನಿಲ್ ಕುಂಬ್ಳೆ ಸರಿಗಟ್ಟಿದರು.

ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ 212 ರನ್‌ಗಳ ಅಂತರದಲ್ಲಿ ಜಯಭೇರಿ ಬಾರಿಸಿತ್ತು. ಭಾರತ ನೀಡಿದ್ದ 420 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಗಿದ್ದ ಪಾಕಿಸ್ತಾನ ಅನಿಲ್‌ ಕುಂಬ್ಳೆ ಬೌಲಿಂಗ್‌ ದಾಳಿಗೆ ಉತ್ತರವಿಲ್ಲದಾಗಿ ಕೇವಲ 207 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು.

ಇನ್ನು ತಮ್ಮ ಈ 10 ವಿಕೆಟ್‌ಗಳ ಅವಿಸ್ಮರಣೀಯ ಸಾಧನೆಗೆ 25 ವರ್ಷಗಳು ಕಳೆದಿರುವುದರ ಕುರಿತು ಅನಿಲ್‌ ಕುಂಬ್ಳೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿಶೇಷ ವಿಡಿಯೊವೊಂದನ್ನು ಹಂಚಿಕೊಂಡಿದ್ದು, “ಈ ಮ್ಯಾಜಿಕಲ್‌ ಡೇಗೆ 25 ವರ್ಷಗಳು. ಸಮಯ ನಿಜವಾಗಿಯೂ ಹಾರುತ್ತದೆ. ಆದರೆ ನೆನಪುಗಳು ಮಾತ್ರ ಯಾವಾಗಲೂ ಎದ್ದು ಕಾಣುತ್ತವೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಚಿರಋಣಿ” ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ ಈ ವಿಡಿಯೊದಲ್ಲಿ “ಪಾಕಿಸ್ತಾನ ಯಾವುದೇ ವಿಕೆಟ್‌ ನಷ್ಟವಿಲ್ಲದೇ ನೂರು ರನ್‌ ಗಡಿ ದಾಟಿ ಅತ್ಯುತ್ತಮ ಹಂತದಲ್ಲಿತ್ತು. ವಿಕೆಟ್‌ ಪಡೆಯಲೇಬೇಕಾದ ಕೆಲಸ ಬೌಲರ್‌ಗಳದ್ದಾಗಿತ್ತು” ಎಂದು ಹೇಳಿಕೊಂಡಿದ್ದಾರೆ.

 

andolana

Recent Posts

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

20 mins ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

50 mins ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

9 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

10 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

10 hours ago