ಕ್ರೀಡೆ

On This Day: ಅನಿಲ್‌ ಕುಂಬ್ಳೆ 10 ವಿಕೆಟ್‌ ಸಾಧನೆಗೆ 25 ವರ್ಷ

ಕ್ರಿಕೆಟ್‌ ಜಗತ್ತು ಕಂಡ ಲೆಜೆಂಡರಿ ಸ್ಪಿನ್‌ ಬೌಲರ್ ಅನಿಲ್‌ ಕುಂಬ್ಳೆ ಟೆಸ್ಟ್‌ ಕ್ರಿಕೆಟ್‌ನ ಇನ್ನಿಂಗ್ಸ್‌ವೊಂದರಲ್ಲಿ ಹತ್ತು ವಿಕೆಟ್‌ಗಳ ಗೊಂಚಲನ್ನು ಪಡೆದ ಸಾಧನೆಗೆ ಇಂದು ( ಫೆಬ್ರವರಿ 7 ) 25 ವರ್ಷಗಳು ಕಳೆದಿವೆ.

ದೆಹಲಿಯ ಫಿರೋಜ್‌ ಷಾ ಕೋಟ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅನಿಲ್‌ ಕುಂಬ್ಳೆ ಎರಡನೇ ಇನ್ನಿಂಗ್ಸ್‌ನಲ್ಲಿ ಹತ್ತು ವಿಕೆಟ್‌ ಕಬಳಿಸಿದ್ದರು. ಈ ಮೂಲಕ 1956ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ ಬೌಲರ್‌ ಜೇಮ್‌ ಲೇಕರ್‌ ಹತ್ತು ವಿಕೆಟ್‌ಗಳ ಗೊಂಚಲನ್ನು ಪಡೆದು ಮಾಡಿದ್ದ ದಾಖಲೆಯನ್ನು ಕನ್ನಡಿಗ ಅನಿಲ್ ಕುಂಬ್ಳೆ ಸರಿಗಟ್ಟಿದರು.

ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ 212 ರನ್‌ಗಳ ಅಂತರದಲ್ಲಿ ಜಯಭೇರಿ ಬಾರಿಸಿತ್ತು. ಭಾರತ ನೀಡಿದ್ದ 420 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಗಿದ್ದ ಪಾಕಿಸ್ತಾನ ಅನಿಲ್‌ ಕುಂಬ್ಳೆ ಬೌಲಿಂಗ್‌ ದಾಳಿಗೆ ಉತ್ತರವಿಲ್ಲದಾಗಿ ಕೇವಲ 207 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು.

ಇನ್ನು ತಮ್ಮ ಈ 10 ವಿಕೆಟ್‌ಗಳ ಅವಿಸ್ಮರಣೀಯ ಸಾಧನೆಗೆ 25 ವರ್ಷಗಳು ಕಳೆದಿರುವುದರ ಕುರಿತು ಅನಿಲ್‌ ಕುಂಬ್ಳೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿಶೇಷ ವಿಡಿಯೊವೊಂದನ್ನು ಹಂಚಿಕೊಂಡಿದ್ದು, “ಈ ಮ್ಯಾಜಿಕಲ್‌ ಡೇಗೆ 25 ವರ್ಷಗಳು. ಸಮಯ ನಿಜವಾಗಿಯೂ ಹಾರುತ್ತದೆ. ಆದರೆ ನೆನಪುಗಳು ಮಾತ್ರ ಯಾವಾಗಲೂ ಎದ್ದು ಕಾಣುತ್ತವೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಚಿರಋಣಿ” ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ ಈ ವಿಡಿಯೊದಲ್ಲಿ “ಪಾಕಿಸ್ತಾನ ಯಾವುದೇ ವಿಕೆಟ್‌ ನಷ್ಟವಿಲ್ಲದೇ ನೂರು ರನ್‌ ಗಡಿ ದಾಟಿ ಅತ್ಯುತ್ತಮ ಹಂತದಲ್ಲಿತ್ತು. ವಿಕೆಟ್‌ ಪಡೆಯಲೇಬೇಕಾದ ಕೆಲಸ ಬೌಲರ್‌ಗಳದ್ದಾಗಿತ್ತು” ಎಂದು ಹೇಳಿಕೊಂಡಿದ್ದಾರೆ.

 

andolana

Recent Posts

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

54 mins ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

1 hour ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

1 hour ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

2 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

3 hours ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

4 hours ago