ಕ್ರೀಡೆ

On This Day: ಅನಿಲ್‌ ಕುಂಬ್ಳೆ 10 ವಿಕೆಟ್‌ ಸಾಧನೆಗೆ 25 ವರ್ಷ

ಕ್ರಿಕೆಟ್‌ ಜಗತ್ತು ಕಂಡ ಲೆಜೆಂಡರಿ ಸ್ಪಿನ್‌ ಬೌಲರ್ ಅನಿಲ್‌ ಕುಂಬ್ಳೆ ಟೆಸ್ಟ್‌ ಕ್ರಿಕೆಟ್‌ನ ಇನ್ನಿಂಗ್ಸ್‌ವೊಂದರಲ್ಲಿ ಹತ್ತು ವಿಕೆಟ್‌ಗಳ ಗೊಂಚಲನ್ನು ಪಡೆದ ಸಾಧನೆಗೆ ಇಂದು ( ಫೆಬ್ರವರಿ 7 ) 25 ವರ್ಷಗಳು ಕಳೆದಿವೆ.

ದೆಹಲಿಯ ಫಿರೋಜ್‌ ಷಾ ಕೋಟ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅನಿಲ್‌ ಕುಂಬ್ಳೆ ಎರಡನೇ ಇನ್ನಿಂಗ್ಸ್‌ನಲ್ಲಿ ಹತ್ತು ವಿಕೆಟ್‌ ಕಬಳಿಸಿದ್ದರು. ಈ ಮೂಲಕ 1956ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ ಬೌಲರ್‌ ಜೇಮ್‌ ಲೇಕರ್‌ ಹತ್ತು ವಿಕೆಟ್‌ಗಳ ಗೊಂಚಲನ್ನು ಪಡೆದು ಮಾಡಿದ್ದ ದಾಖಲೆಯನ್ನು ಕನ್ನಡಿಗ ಅನಿಲ್ ಕುಂಬ್ಳೆ ಸರಿಗಟ್ಟಿದರು.

ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ 212 ರನ್‌ಗಳ ಅಂತರದಲ್ಲಿ ಜಯಭೇರಿ ಬಾರಿಸಿತ್ತು. ಭಾರತ ನೀಡಿದ್ದ 420 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಗಿದ್ದ ಪಾಕಿಸ್ತಾನ ಅನಿಲ್‌ ಕುಂಬ್ಳೆ ಬೌಲಿಂಗ್‌ ದಾಳಿಗೆ ಉತ್ತರವಿಲ್ಲದಾಗಿ ಕೇವಲ 207 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು.

ಇನ್ನು ತಮ್ಮ ಈ 10 ವಿಕೆಟ್‌ಗಳ ಅವಿಸ್ಮರಣೀಯ ಸಾಧನೆಗೆ 25 ವರ್ಷಗಳು ಕಳೆದಿರುವುದರ ಕುರಿತು ಅನಿಲ್‌ ಕುಂಬ್ಳೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿಶೇಷ ವಿಡಿಯೊವೊಂದನ್ನು ಹಂಚಿಕೊಂಡಿದ್ದು, “ಈ ಮ್ಯಾಜಿಕಲ್‌ ಡೇಗೆ 25 ವರ್ಷಗಳು. ಸಮಯ ನಿಜವಾಗಿಯೂ ಹಾರುತ್ತದೆ. ಆದರೆ ನೆನಪುಗಳು ಮಾತ್ರ ಯಾವಾಗಲೂ ಎದ್ದು ಕಾಣುತ್ತವೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಚಿರಋಣಿ” ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ ಈ ವಿಡಿಯೊದಲ್ಲಿ “ಪಾಕಿಸ್ತಾನ ಯಾವುದೇ ವಿಕೆಟ್‌ ನಷ್ಟವಿಲ್ಲದೇ ನೂರು ರನ್‌ ಗಡಿ ದಾಟಿ ಅತ್ಯುತ್ತಮ ಹಂತದಲ್ಲಿತ್ತು. ವಿಕೆಟ್‌ ಪಡೆಯಲೇಬೇಕಾದ ಕೆಲಸ ಬೌಲರ್‌ಗಳದ್ದಾಗಿತ್ತು” ಎಂದು ಹೇಳಿಕೊಂಡಿದ್ದಾರೆ.

 

andolana

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago