ಕ್ರೀಡೆ

ಏಕದಿನ ಪಂದ್ಯ : ಭಾರತ ಕ್ರಿಕೆಟ್‌ ತಂಡಕ್ಕೆ ಎಂಟ್ರಿ ಕೊಟ್ಟ ಆರ್‌ಸಿಬಿಯ ಶಹಬಾಜ್ ಅಹ್ಮದ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುನಿನ 2ನೇ ಏಕದಿನ ಪಂದ್ಯ ರಾಂಚಿಯಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ತಂಡದಲ್ಲಿ ಮೂವರು ಸ್ಪಿನ್ನರ್​ಗಳಿಗೆ ಅವಕಾಶ ನೀಡಲಾಗಿದೆ. ಅವರಲ್ಲಿ ಒಬ್ಬರು ಆರ್​ಸಿಬಿಯ ಸ್ಪಿನ್ ಆಲ್​ರೌಂಡರ್ ಶಹಬಾಜ್ ಅಹ್ಮದ್. ಈ ಹಿಂದೆ ಶಹಬಾಜ್ ಅಹ್ಮದ್, ಟೀಮ್ ಇಂಡಿಯಾದಲ್ಲಿ ಆಯ್ಕೆಯಾಗಿದ್ದರೂ, ಅವರಿಗೆ ಆಡುವ XI ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ದೇಶೀಯ ಕ್ರಿಕೆಟ್‌ನಲ್ಲಿ ಬಂಗಾಳವನ್ನು ಮುನ್ನಡೆಸಿರುವ ಶಹಬಾಜ್ ಅದ್ಭುತ ಆಲ್‌ರೌಂಡರ್ ಆಗಿದ್ದು, ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡುವುದರ ಜೊತೆಗೆ ಅದ್ಭುತ ಫೀಲ್ಡರ್ ಕೂಡ ಆಗಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೂ ಮುನ್ನ ಜಿಂಬಾಬ್ವೆ ಪ್ರವಾಸಕ್ಕೆ ಟೀಂ ಇಂಡಿಯಾದಲ್ಲಿ ಶಹಬಾಜ್ ಅಹ್ಮದ್ ಆಯ್ಕೆಯಾಗಿದ್ದರು. ಸರಣಿ ಆರಂಭಕ್ಕೂ ಮುನ್ನ ಇಂಜುರಿಗೊಂಡಿದ್ದ ವಾಷಿಂಗ್ಟನ್ ಸುಂದರ್‌ ಬದಲಿಯಾಗಿ, ಶಹಬಾಜ್ ಅಹ್ಮದ್​ಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಆ ಪ್ರವಾಸದಲ್ಲಿ ಅವರಿಗೆ ಆಡುವ ಇಲೆವೆನ್​ನಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಆದರೆ ಶಹಬಾಜ್ ಅಹ್ಮದ್, ಇಂದು ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಆಡುವ ಅವಕಾಶ ಸಿಕ್ಕಿದೆ.

ಬಂಗಾಳದ ಪರ ಕ್ರಿಕೆಟ್ ಆಡುವ ಶಹಬಾಜ್ ಮೂಲತಃ ಹರಿಯಾಣದ ಮೇವಾತ್ ಜಿಲ್ಲೆಯವರು. ಆದರೆ, ಅವರು ಹರಿಯಾಣದಿಂದ ಬಂಗಾಳಕ್ಕೆ ಹೋಗುವುದರ ಹಿಂದೆ ಒಂದು ಕಥೆಯಿದೆ. ವಾಸ್ತವವಾಗಿ ಶಹಬಾಜ್‌ ಅವರ ತಂದೆಗೆ ಶಹಬಾಜ್ ಅಹ್ಮದ್ ಇಂಜಿನಿಯರ್ ಆಗಬೇಕೆಂಬ ಕನಸಿತ್ತು. ಹೀಗಾಗಿ ತಂದೆಯ ಕನಸಿನಂತೆ ಇಂಜಿನಿಯರಿಂಗ್ ಮಾಡಲು ಕಾಲೇಜ್ ಸೇರಿಕೊಂಡ ಶಹಬಾಜ್​ಗೆ 3 ವರ್ಷಗಳ ಬಳಿಕ ಕ್ರಿಕೆಟ್ ಮೇಲಿನ ಒಲವು ಹೆಚ್ಚಾಯಿತು. ಇದನ್ನು ಕಂಡ ಅವರ ತಂದೆ ಶಹಬಾಜ್​ಗೆ ಕ್ರಿಕೆಟ್ ಅಥವಾ ಓದು ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಹೇಳಿದರು. ಇದನ್ನು ಕೇಳಿದ ಶಹಬಾಜ್ ಕ್ರಿಕೆಟ್ ಆಡಲು ನಿರ್ಧರಿಸಿದರು.

7 ಪಂದ್ಯಗಳಲ್ಲಿ 6 ಶತಕ

ಮೊದಲು ಗುರ್ಗಾಂವ್‌ನ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸುತ್ತಿದ್ದ ಶಹಬಾಜ್, ಗೆಳೆಯ ಪ್ರಮೋದ್ ಚಾಂಡಿಲನ ಇಚ್ಛೆಯಂತೆ ಬಂಗಾಳಕ್ಕೆ ಹೋಗಿ ತಪನ್ ಮೆಮೋರಿಯಲ್ ಕ್ಲಬ್ ಸೇರಿಕೊಂಡರು. ಈ ಕ್ಲಬ್‌ಗಾಗಿ ಮೊದಲ 7 ಪಂದ್ಯಗಳಲ್ಲಿ 6 ಶತಕಗಳನ್ನು ಬಾರಿಸಿದ ಶಹಬಾಜ್ ಬೌಲಿಂಗ್​ನಲ್ಲೂ ಉತ್ತಮ ಪ್ರದರ್ಶನ ತೋರಿದರು. ಈ ಪ್ರದರ್ಶನ ನೋಡಿದ ಬಂಗಾಳ ಕ್ರಿಕೆಟ್‌ ಸಂಸ್ಥೆ ಅವರನ್ನು ಪ್ರಥಮ ದರ್ಜೆಯ ಕ್ರಿಕೆಟ್​ಗೆ ಆಯ್ಕೆ ಮಾಡಿತು.

andolana

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

4 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

5 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

6 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

6 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

7 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

8 hours ago