ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುನಿನ 2ನೇ ಏಕದಿನ ಪಂದ್ಯ ರಾಂಚಿಯಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ತಂಡದಲ್ಲಿ ಮೂವರು ಸ್ಪಿನ್ನರ್ಗಳಿಗೆ ಅವಕಾಶ ನೀಡಲಾಗಿದೆ. ಅವರಲ್ಲಿ ಒಬ್ಬರು ಆರ್ಸಿಬಿಯ ಸ್ಪಿನ್ ಆಲ್ರೌಂಡರ್ ಶಹಬಾಜ್ ಅಹ್ಮದ್. ಈ ಹಿಂದೆ ಶಹಬಾಜ್ ಅಹ್ಮದ್, ಟೀಮ್ ಇಂಡಿಯಾದಲ್ಲಿ ಆಯ್ಕೆಯಾಗಿದ್ದರೂ, ಅವರಿಗೆ ಆಡುವ XI ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ದೇಶೀಯ ಕ್ರಿಕೆಟ್ನಲ್ಲಿ ಬಂಗಾಳವನ್ನು ಮುನ್ನಡೆಸಿರುವ ಶಹಬಾಜ್ ಅದ್ಭುತ ಆಲ್ರೌಂಡರ್ ಆಗಿದ್ದು, ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡುವುದರ ಜೊತೆಗೆ ಅದ್ಭುತ ಫೀಲ್ಡರ್ ಕೂಡ ಆಗಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೂ ಮುನ್ನ ಜಿಂಬಾಬ್ವೆ ಪ್ರವಾಸಕ್ಕೆ ಟೀಂ ಇಂಡಿಯಾದಲ್ಲಿ ಶಹಬಾಜ್ ಅಹ್ಮದ್ ಆಯ್ಕೆಯಾಗಿದ್ದರು. ಸರಣಿ ಆರಂಭಕ್ಕೂ ಮುನ್ನ ಇಂಜುರಿಗೊಂಡಿದ್ದ ವಾಷಿಂಗ್ಟನ್ ಸುಂದರ್ ಬದಲಿಯಾಗಿ, ಶಹಬಾಜ್ ಅಹ್ಮದ್ಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಆ ಪ್ರವಾಸದಲ್ಲಿ ಅವರಿಗೆ ಆಡುವ ಇಲೆವೆನ್ನಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಆದರೆ ಶಹಬಾಜ್ ಅಹ್ಮದ್, ಇಂದು ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಆಡುವ ಅವಕಾಶ ಸಿಕ್ಕಿದೆ.
ಬಂಗಾಳದ ಪರ ಕ್ರಿಕೆಟ್ ಆಡುವ ಶಹಬಾಜ್ ಮೂಲತಃ ಹರಿಯಾಣದ ಮೇವಾತ್ ಜಿಲ್ಲೆಯವರು. ಆದರೆ, ಅವರು ಹರಿಯಾಣದಿಂದ ಬಂಗಾಳಕ್ಕೆ ಹೋಗುವುದರ ಹಿಂದೆ ಒಂದು ಕಥೆಯಿದೆ. ವಾಸ್ತವವಾಗಿ ಶಹಬಾಜ್ ಅವರ ತಂದೆಗೆ ಶಹಬಾಜ್ ಅಹ್ಮದ್ ಇಂಜಿನಿಯರ್ ಆಗಬೇಕೆಂಬ ಕನಸಿತ್ತು. ಹೀಗಾಗಿ ತಂದೆಯ ಕನಸಿನಂತೆ ಇಂಜಿನಿಯರಿಂಗ್ ಮಾಡಲು ಕಾಲೇಜ್ ಸೇರಿಕೊಂಡ ಶಹಬಾಜ್ಗೆ 3 ವರ್ಷಗಳ ಬಳಿಕ ಕ್ರಿಕೆಟ್ ಮೇಲಿನ ಒಲವು ಹೆಚ್ಚಾಯಿತು. ಇದನ್ನು ಕಂಡ ಅವರ ತಂದೆ ಶಹಬಾಜ್ಗೆ ಕ್ರಿಕೆಟ್ ಅಥವಾ ಓದು ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಹೇಳಿದರು. ಇದನ್ನು ಕೇಳಿದ ಶಹಬಾಜ್ ಕ್ರಿಕೆಟ್ ಆಡಲು ನಿರ್ಧರಿಸಿದರು.
7 ಪಂದ್ಯಗಳಲ್ಲಿ 6 ಶತಕ
ಮೊದಲು ಗುರ್ಗಾಂವ್ನ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸುತ್ತಿದ್ದ ಶಹಬಾಜ್, ಗೆಳೆಯ ಪ್ರಮೋದ್ ಚಾಂಡಿಲನ ಇಚ್ಛೆಯಂತೆ ಬಂಗಾಳಕ್ಕೆ ಹೋಗಿ ತಪನ್ ಮೆಮೋರಿಯಲ್ ಕ್ಲಬ್ ಸೇರಿಕೊಂಡರು. ಈ ಕ್ಲಬ್ಗಾಗಿ ಮೊದಲ 7 ಪಂದ್ಯಗಳಲ್ಲಿ 6 ಶತಕಗಳನ್ನು ಬಾರಿಸಿದ ಶಹಬಾಜ್ ಬೌಲಿಂಗ್ನಲ್ಲೂ ಉತ್ತಮ ಪ್ರದರ್ಶನ ತೋರಿದರು. ಈ ಪ್ರದರ್ಶನ ನೋಡಿದ ಬಂಗಾಳ ಕ್ರಿಕೆಟ್ ಸಂಸ್ಥೆ ಅವರನ್ನು ಪ್ರಥಮ ದರ್ಜೆಯ ಕ್ರಿಕೆಟ್ಗೆ ಆಯ್ಕೆ ಮಾಡಿತು.
ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್…
ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…
ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…
ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…
ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…