ನವದೆಹಲಿ: ಸಲಿಂಗ ವಿವಾಹದ ಬಗ್ಗೆ ಭಾರತದ ಅತ್ಯಂತ ವೇಗದ ಮಹಿಳೆ ಎಂದೇ ಖ್ಯಾತರಾಗಿರುವ ಕ್ರೀಡಾಪಟು ದ್ಯುತಿ ಚಂದ್ ಆಶಾಭಾವ ವ್ಯಕ್ತಪಡಿಸಿದ್ದು, ಇದು ಮುಂದೊಂದು ದಿನ ವಾಸ್ತವದ ಸ್ಥಿತಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಲಿಂಗ ವಿವಾಹಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬಂದ ಹಿನ್ನೆಲೆಯಲ್ಲಿ ದ್ಯುತಿ ಚಂದ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ವಿಶೇಷ ವಿವಾಹ ಕಾಯಿದೆ (Special Marriage Act)ಗೆ ಸಂಬಂಧಪಟ್ಟಂತೆ ಕಾನೂನು ರೂಪಿಸಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ. ಅದನ್ನು ನಾವು ವ್ಯಾಖ್ಯಾನಿಸಬಹುದು, ಆದರೆ ಅದನ್ನು ಬದಲಾಯಿಸುವುದು ಸಂಸತ್ತು ಅಂದರೆ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.
ಸಲಿಂಗಿಗಳು ಒಟ್ಟಿಗೆ ಇರುವುದನ್ನು ಸುಪ್ರೀಂ ಕೋರ್ಟ್ ತಡೆದಿಲ್ಲ. ಸಲಿಂಗಿಗಳ ವಿವಾಹಕ್ಕೆ ಸಂಬಂಧಿಸಿದಂತೆ ಕಾನೂನು ಇಲ್ಲದೇ ಇರುವುದರಿಂದ ಅದರಲ್ಲಿ ಮಧ್ಯಪ್ರವೇಶಿಸುವುದಕ್ಕೆ ಸಾಧ್ಯವಿಲ್ಲ ಎಂದಷ್ಟೇ ಹೇಳಿದೆ ಎಂದು ದ್ಯುತಿ ಚಂದ್ ಹೇಳಿದ್ದಾರೆ.
“ಕೇಂದ್ರ ಸರ್ಕಾರ ಮತ್ತು ಸಂಸತ್ತು ಖಂಡಿತವಾಗಿಯೂ ಪ್ರಕರಣವನ್ನು ಪರಿಗಣಿಸುತ್ತದೆ ಮತ್ತು ಭವಿಷ್ಯದಲ್ಲಿ ಸಲಿಂಗ ವ್ಯಕ್ತಿಗಳ ನಡುವಿನ ವಿವಾಹಕ್ಕೆ ಸರಿಯಾದ ಕಾನೂನು ಮಾಡುತ್ತದೆ ಎಂದು ನಾವು ಆಶಾವಾದಿಗಳಾಗಿದ್ದೇವೆ” ಎಂದು ಚಂದ್ ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…