ಕ್ರೀಡೆ

One World One Family Cup: ಚಿಕ್ಕಬಳ್ಳಾಪುರದಲ್ಲಿಂದು ದಿಗ್ಗಜ ಸಚಿನ್‌-ಯುವಿ ಮುಖಾಮುಖಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಸತ್ಯಸಾಯಿ ಗ್ರಾಮದಲ್ಲಿಂದು ಕ್ರಿಕಟ್‌ ದಿಗ್ಗಜರಾದ ಲಿಟ್ಲಲ್‌ ಮಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಮತ್ತು ಸಿಕ್ಸರ್‌ ಕಿಂಗ್‌ ಯುವರಾಜ್‌ ಸಿಂಗ್‌ ನಡುವಿನ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಇಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕ್ರೀಡಾಂಗಣ ಉದ್ಘಾಟನಾ ಪ್ರಯುಕ್ತ ಒನ್‌ ವರ್ಲ್ಡ್‌ ಒನ್‌ ಫ್ಯಾಮಿಲಿ ಕಪ್‌ ಹೆಸರಿನಲ್ಲಿ ಟಿ20 ಕ್ರಿಕೆಟ್‌ ಪಂದ್ಯವನ್ನು ಆಯೋಜಿಸಲಾಗಿದೆ.

ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಲಾಗಿದ್ದು, ಈ ವಿಶೇಷ ಪಂದ್ಯಕ್ಕೆ ಸತ್ಯಸಾಯಿ ಗ್ರಾಮದಲ್ಲಿರುವ ಸಾಯಿಕೃಷ್ಣನ್ ಕ್ರಿಕೆಟ್ ಸ್ಟೇಡಿಯಂ ಸಾಕ್ಷಿಯಾಗಲಿದೆ.

ಪಂದ್ಯವು ಬೆಳಗ್ಗೆ 10 ಗಂಟೆಗೆ ಶುರುವಾಗಲಿದೆ. ಈ ಪಂದ್ಯವನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಲೈವ್ ವೀಕ್ಷಿಸಬಹುದು. ಅಂತೆಯೆ ಲೈವ್ ಸ್ಟ್ರೀಮಿಂಗ್ ಶ್ರೀ ಮಧುಸೂದನ್ ಸಾಯಿ ಗ್ಲೋಬಲ್ ಹ್ಯುಮಾನಿಟೇರಿಯನ್ ಮಿಷನ್‌ನ ಯುಟ್ಯೂಬ್ ಚಾನೆಲ್‌ಗಳಲ್ಲಿಯೂ ಲೈವ್‌ ವೀಕ್ಷಣೆ ಮಾಡಬಹುದಾಗಿದೆ.

ಈ ಪಂದ್ಯಕ್ಕೆ ಸುನಿಲ್ ಗವಾಸ್ಕರ್ ಮುಂದಾಳತ್ವ ವಹಿಸಲಿದ್ದಾರೆ. ದಿಗ್ಗಜ ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್, ಡ್ಯಾನಿ ಮೋರಿಸನ್, ಮುತ್ತಯ್ಯ ಮುರಳೀಧರನ್, ಇರ್ಫಾನ್ ಪಠಾನ್, ಮಾಂಟೇ ಪನೇಸರ್, ವೆಂಕಟೇಶ್ ಪ್ರಸಾದ್, ಯೂಸಫ್ ಪಠಾನ್ ಸೇರಿದಂತೆ ಅನೇಕ ವಿಶ್ವ ಕ್ರಿಕೆಟ್‌ನ ಹಿರಿಯ ಆಟಗಾರರು ಈ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ಒನ್ ವರ್ಲ್ಡ್ ತಂಡ: ಸಚಿನ್ ತೆಂಡೂಲ್ಕರ್ (ನಾಯಕ), ನಮನ್ ಓಜಾ, ಉಪುಲ್ ತರಂಗ, ಅಲ್ವಿರೋ ಪೀಟರ್ಸನ್, ಸುಬ್ರಮಣ್ಯಂ ಬದ್ರಿನಾಥ್, ಇರ್ಫಾನ್ ಪಠಾಣ್, ಅಶೋಕ್ ದಿಂಡಾ, ಅಜಂತಾ ಮೆಂಡಿಸ್, ಹರ್ಭಜನ್ ಸಿಂಗ್, ಮಾಂಟಿ ಪನೇಸರ್, ಆರ್‌ಪಿ ಸಿಂಗ್, ಡ್ಯಾನಿ ಮಾರಿಸನ್.

ಒನ್ ಫ್ಯಾಮಿಲಿ ತಂಡ: ಯುವರಾಜ್ ಸಿಂಗ್ (ನಾಯಕ), ಪಾರ್ಥಿವ್ ಪಟೇಲ್, ಮೊಹಮ್ಮದ್ ಕೈಫ್, ಡ್ಯಾರೆನ್ ಮ್ಯಾಡಿ, ಅಲೋಕ್ ಕಪಾಲಿ, ರೋಮೇಶ್ ಕಲುವಿತಾರಣ, ಯೂಸುಫ್ ಪಠಾಣ್, ಜೇಸನ್ ಕ್ರೆಜ್ಜಾ, ಮುತ್ತಯ್ಯ ಮುರಳೀಧರನ್, ಮಖಾಯಾ ಎನ್ಟಿನಿ, ಚಾಮಿಂದಾ ವಾಸ್, ವೆಂಕಟೇಶ್ ಪ್ರಸಾದ್.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

25 mins ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

3 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

3 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

3 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

4 hours ago