ಕ್ರೀಡೆ

One World One Family Cup: ಚಿಕ್ಕಬಳ್ಳಾಪುರದಲ್ಲಿಂದು ದಿಗ್ಗಜ ಸಚಿನ್‌-ಯುವಿ ಮುಖಾಮುಖಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಸತ್ಯಸಾಯಿ ಗ್ರಾಮದಲ್ಲಿಂದು ಕ್ರಿಕಟ್‌ ದಿಗ್ಗಜರಾದ ಲಿಟ್ಲಲ್‌ ಮಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಮತ್ತು ಸಿಕ್ಸರ್‌ ಕಿಂಗ್‌ ಯುವರಾಜ್‌ ಸಿಂಗ್‌ ನಡುವಿನ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಇಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕ್ರೀಡಾಂಗಣ ಉದ್ಘಾಟನಾ ಪ್ರಯುಕ್ತ ಒನ್‌ ವರ್ಲ್ಡ್‌ ಒನ್‌ ಫ್ಯಾಮಿಲಿ ಕಪ್‌ ಹೆಸರಿನಲ್ಲಿ ಟಿ20 ಕ್ರಿಕೆಟ್‌ ಪಂದ್ಯವನ್ನು ಆಯೋಜಿಸಲಾಗಿದೆ.

ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಲಾಗಿದ್ದು, ಈ ವಿಶೇಷ ಪಂದ್ಯಕ್ಕೆ ಸತ್ಯಸಾಯಿ ಗ್ರಾಮದಲ್ಲಿರುವ ಸಾಯಿಕೃಷ್ಣನ್ ಕ್ರಿಕೆಟ್ ಸ್ಟೇಡಿಯಂ ಸಾಕ್ಷಿಯಾಗಲಿದೆ.

ಪಂದ್ಯವು ಬೆಳಗ್ಗೆ 10 ಗಂಟೆಗೆ ಶುರುವಾಗಲಿದೆ. ಈ ಪಂದ್ಯವನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಲೈವ್ ವೀಕ್ಷಿಸಬಹುದು. ಅಂತೆಯೆ ಲೈವ್ ಸ್ಟ್ರೀಮಿಂಗ್ ಶ್ರೀ ಮಧುಸೂದನ್ ಸಾಯಿ ಗ್ಲೋಬಲ್ ಹ್ಯುಮಾನಿಟೇರಿಯನ್ ಮಿಷನ್‌ನ ಯುಟ್ಯೂಬ್ ಚಾನೆಲ್‌ಗಳಲ್ಲಿಯೂ ಲೈವ್‌ ವೀಕ್ಷಣೆ ಮಾಡಬಹುದಾಗಿದೆ.

ಈ ಪಂದ್ಯಕ್ಕೆ ಸುನಿಲ್ ಗವಾಸ್ಕರ್ ಮುಂದಾಳತ್ವ ವಹಿಸಲಿದ್ದಾರೆ. ದಿಗ್ಗಜ ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್, ಡ್ಯಾನಿ ಮೋರಿಸನ್, ಮುತ್ತಯ್ಯ ಮುರಳೀಧರನ್, ಇರ್ಫಾನ್ ಪಠಾನ್, ಮಾಂಟೇ ಪನೇಸರ್, ವೆಂಕಟೇಶ್ ಪ್ರಸಾದ್, ಯೂಸಫ್ ಪಠಾನ್ ಸೇರಿದಂತೆ ಅನೇಕ ವಿಶ್ವ ಕ್ರಿಕೆಟ್‌ನ ಹಿರಿಯ ಆಟಗಾರರು ಈ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ಒನ್ ವರ್ಲ್ಡ್ ತಂಡ: ಸಚಿನ್ ತೆಂಡೂಲ್ಕರ್ (ನಾಯಕ), ನಮನ್ ಓಜಾ, ಉಪುಲ್ ತರಂಗ, ಅಲ್ವಿರೋ ಪೀಟರ್ಸನ್, ಸುಬ್ರಮಣ್ಯಂ ಬದ್ರಿನಾಥ್, ಇರ್ಫಾನ್ ಪಠಾಣ್, ಅಶೋಕ್ ದಿಂಡಾ, ಅಜಂತಾ ಮೆಂಡಿಸ್, ಹರ್ಭಜನ್ ಸಿಂಗ್, ಮಾಂಟಿ ಪನೇಸರ್, ಆರ್‌ಪಿ ಸಿಂಗ್, ಡ್ಯಾನಿ ಮಾರಿಸನ್.

ಒನ್ ಫ್ಯಾಮಿಲಿ ತಂಡ: ಯುವರಾಜ್ ಸಿಂಗ್ (ನಾಯಕ), ಪಾರ್ಥಿವ್ ಪಟೇಲ್, ಮೊಹಮ್ಮದ್ ಕೈಫ್, ಡ್ಯಾರೆನ್ ಮ್ಯಾಡಿ, ಅಲೋಕ್ ಕಪಾಲಿ, ರೋಮೇಶ್ ಕಲುವಿತಾರಣ, ಯೂಸುಫ್ ಪಠಾಣ್, ಜೇಸನ್ ಕ್ರೆಜ್ಜಾ, ಮುತ್ತಯ್ಯ ಮುರಳೀಧರನ್, ಮಖಾಯಾ ಎನ್ಟಿನಿ, ಚಾಮಿಂದಾ ವಾಸ್, ವೆಂಕಟೇಶ್ ಪ್ರಸಾದ್.

andolanait

Recent Posts

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

9 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

2 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

2 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

3 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

3 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

3 hours ago