ಕ್ರೀಡೆ

One World One Family Cup: ಚಿಕ್ಕಬಳ್ಳಾಪುರದಲ್ಲಿಂದು ದಿಗ್ಗಜ ಸಚಿನ್‌-ಯುವಿ ಮುಖಾಮುಖಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಸತ್ಯಸಾಯಿ ಗ್ರಾಮದಲ್ಲಿಂದು ಕ್ರಿಕಟ್‌ ದಿಗ್ಗಜರಾದ ಲಿಟ್ಲಲ್‌ ಮಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಮತ್ತು ಸಿಕ್ಸರ್‌ ಕಿಂಗ್‌ ಯುವರಾಜ್‌ ಸಿಂಗ್‌ ನಡುವಿನ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಇಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕ್ರೀಡಾಂಗಣ ಉದ್ಘಾಟನಾ ಪ್ರಯುಕ್ತ ಒನ್‌ ವರ್ಲ್ಡ್‌ ಒನ್‌ ಫ್ಯಾಮಿಲಿ ಕಪ್‌ ಹೆಸರಿನಲ್ಲಿ ಟಿ20 ಕ್ರಿಕೆಟ್‌ ಪಂದ್ಯವನ್ನು ಆಯೋಜಿಸಲಾಗಿದೆ.

ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಲಾಗಿದ್ದು, ಈ ವಿಶೇಷ ಪಂದ್ಯಕ್ಕೆ ಸತ್ಯಸಾಯಿ ಗ್ರಾಮದಲ್ಲಿರುವ ಸಾಯಿಕೃಷ್ಣನ್ ಕ್ರಿಕೆಟ್ ಸ್ಟೇಡಿಯಂ ಸಾಕ್ಷಿಯಾಗಲಿದೆ.

ಪಂದ್ಯವು ಬೆಳಗ್ಗೆ 10 ಗಂಟೆಗೆ ಶುರುವಾಗಲಿದೆ. ಈ ಪಂದ್ಯವನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಲೈವ್ ವೀಕ್ಷಿಸಬಹುದು. ಅಂತೆಯೆ ಲೈವ್ ಸ್ಟ್ರೀಮಿಂಗ್ ಶ್ರೀ ಮಧುಸೂದನ್ ಸಾಯಿ ಗ್ಲೋಬಲ್ ಹ್ಯುಮಾನಿಟೇರಿಯನ್ ಮಿಷನ್‌ನ ಯುಟ್ಯೂಬ್ ಚಾನೆಲ್‌ಗಳಲ್ಲಿಯೂ ಲೈವ್‌ ವೀಕ್ಷಣೆ ಮಾಡಬಹುದಾಗಿದೆ.

ಈ ಪಂದ್ಯಕ್ಕೆ ಸುನಿಲ್ ಗವಾಸ್ಕರ್ ಮುಂದಾಳತ್ವ ವಹಿಸಲಿದ್ದಾರೆ. ದಿಗ್ಗಜ ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್, ಡ್ಯಾನಿ ಮೋರಿಸನ್, ಮುತ್ತಯ್ಯ ಮುರಳೀಧರನ್, ಇರ್ಫಾನ್ ಪಠಾನ್, ಮಾಂಟೇ ಪನೇಸರ್, ವೆಂಕಟೇಶ್ ಪ್ರಸಾದ್, ಯೂಸಫ್ ಪಠಾನ್ ಸೇರಿದಂತೆ ಅನೇಕ ವಿಶ್ವ ಕ್ರಿಕೆಟ್‌ನ ಹಿರಿಯ ಆಟಗಾರರು ಈ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ಒನ್ ವರ್ಲ್ಡ್ ತಂಡ: ಸಚಿನ್ ತೆಂಡೂಲ್ಕರ್ (ನಾಯಕ), ನಮನ್ ಓಜಾ, ಉಪುಲ್ ತರಂಗ, ಅಲ್ವಿರೋ ಪೀಟರ್ಸನ್, ಸುಬ್ರಮಣ್ಯಂ ಬದ್ರಿನಾಥ್, ಇರ್ಫಾನ್ ಪಠಾಣ್, ಅಶೋಕ್ ದಿಂಡಾ, ಅಜಂತಾ ಮೆಂಡಿಸ್, ಹರ್ಭಜನ್ ಸಿಂಗ್, ಮಾಂಟಿ ಪನೇಸರ್, ಆರ್‌ಪಿ ಸಿಂಗ್, ಡ್ಯಾನಿ ಮಾರಿಸನ್.

ಒನ್ ಫ್ಯಾಮಿಲಿ ತಂಡ: ಯುವರಾಜ್ ಸಿಂಗ್ (ನಾಯಕ), ಪಾರ್ಥಿವ್ ಪಟೇಲ್, ಮೊಹಮ್ಮದ್ ಕೈಫ್, ಡ್ಯಾರೆನ್ ಮ್ಯಾಡಿ, ಅಲೋಕ್ ಕಪಾಲಿ, ರೋಮೇಶ್ ಕಲುವಿತಾರಣ, ಯೂಸುಫ್ ಪಠಾಣ್, ಜೇಸನ್ ಕ್ರೆಜ್ಜಾ, ಮುತ್ತಯ್ಯ ಮುರಳೀಧರನ್, ಮಖಾಯಾ ಎನ್ಟಿನಿ, ಚಾಮಿಂದಾ ವಾಸ್, ವೆಂಕಟೇಶ್ ಪ್ರಸಾದ್.

andolanait

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

2 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

4 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

5 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

5 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

5 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

9 hours ago