ಕ್ರೀಡೆ

ಭಾರತ-ಪಾಕ್​ ಕ್ರಿಕೆಟ್‌ ವಿವಾದಕ್ಕೆ ತೆರೆ: 2 ದೇಶಗಳಲ್ಲಿ ನಡೆಯಲಿದೆ ಏಷ್ಯಾಕಪ್​

ವಿಶ್ವಕಪ್‌ಗಾಗಿ ಪಾಕಿಸ್ತಾನ ತಂಡ ಅಕ್ಟೋಬರ್‌ ನಲ್ಲಿ ಭಾರತಕ್ಕೆ ಪ್ರಯಾಣಿಸಲಿದೆ ಎಂದು ವರದಿ ಹೇಳಿದೆ. ನವೆಂಬರ್‌ನಲ್ಲಿ ನಡೆಯಲಿರುವ ಪಂದ್ಯಾವಳಿಗಾಗಿ ಭಾರತಕ್ಕೆ ಬರಲು ಸಿದ್ದರಾಗಿದ್ದಾರೆ. ಈ ವಿವಾದದ ಪರಿಹಾರದ ನಂತರ, ವಿಶ್ವಕಪ್‌ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಏಷ್ಯಾಕಪ್ 2023 ಟೂರ್ನಿಯ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿವೆ. ಇದಲ್ಲದೇ ಶ್ರೀಲಂಕಾದಲ್ಲಿಯೂ ಕೆಲವು ಪಂದ್ಯಗಳು ನಡೆಯಲಿವೆ. ಕಳೆದ ಹಲವು ತಿಂಗಳುಗಳಿಂದ ಟೂರ್ನಿಯ ಆತಿಥ್ಯಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಡುವೆ ನಡೆಯುತ್ತಿದ್ದ ಜಿದ್ದಾಜಿದ್ದಿ ಈಗ ದೂರವಾಗುವ ಲಕ್ಷಣ ಕಾಣುತ್ತಿದೆ.

ಮಾಧ್ಯಮ ವರದಿಗಳ ಪ್ರಕಾರ, ಟೂರ್ನಿಗಾಗಿ PCB ಹೈಬ್ರಿಡ್ ಮಾದರಿ ನಡೆಸಲು ಸಿದ್ಧವಾಗಿದ್ದು, ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಮುಂಬರುವ ಸಭೆಯಲ್ಲಿ ಅನುಮೋದಿಸಲು ನಿರ್ಧರಿಸಲಾಗಿದೆ.

ಇದು ವಿಶ್ವಕಪ್ ಮೇಲೂ ಪರಿಣಾಮ ಬೀರಲಿದ್ದು, ಇದೀಗ ಪಾಕಿಸ್ತಾನ ತಂಡ ವಿಶ್ವಕಪ್ ಗೆ ಭಾರತಕ್ಕೆ ಬರುವ ದಾರಿ ಬಹುತೇಕ ನಿಚ್ಚಳವಾಗಿದೆ. ಜೂನ್ 13 ರಂದು, ಟೂರ್ನಮೆಂಟ್‌ನ ಹೈಬ್ರಿಡ್ ಮಾದರಿಯ ಬಗ್ಗೆ ಕೌನ್ಸಿಲ್ ಅಧಿಕೃತ ಪ್ರಕಟಣೆಯನ್ನು ಮಾಡಲಿದೆ.

ಇದರಲ್ಲಿ ಪಾಕಿಸ್ತಾನದೊಂದಿಗೆ ಶ್ರೀಲಂಕಾ ಸಹ ಏಷ್ಯಾ ಕಪ್ ಅನ್ನು ಔಪಚಾರಿಕವಾಗಿ ಆಯೋಜಿಸಲಾಗುವುದು ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಹೇಳಿದೆ. ಸೆಪ್ಟೆಂಬರ್‌ನಲ್ಲಿ ಟೂರ್ನಿ ನಡೆಯುವ ಸಾಧ್ಯತೆ ಇದೆ.

ವರದಿಗಳ ಪ್ರಕಾರ, ಪಾಕಿಸ್ತಾನವು ಏಷ್ಯಾಕಪ್‌ನ 4 ಪಂದ್ಯಗಳನ್ನು ತಮ್ಮ ತವರಿನಲ್ಲಿ ನಡೆಸಲು ಪ್ರಸ್ತಾಪಿಸಿತ್ತು, ಅದು ಅನುಮೋದನೆ ಪಡೆಯುವುದು ಖಚಿತವಾಗಿದೆ. ಈ ಪಂದ್ಯಗಳು ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಾಕಿಸ್ತಾನ-ನೇಪಾಳ, ಅಫ್ಘಾನಿಸ್ತಾನ-ಶ್ರೀಲಂಕಾ, ಬಾಂಗ್ಲಾದೇಶ-ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ-ಬಾಂಗ್ಲಾದೇಶದ ಪಂದ್ಯಗಳು ನಡೆಯಲಿವೆ. ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಇದರಲ್ಲಿ ಟೀಂ ಇಂಡಿಯಾದ ಎಲ್ಲಾ ಪಂದ್ಯಗಳೂ ಸೇರಿವೆ. ಇದಲ್ಲದೇ ಫೈನಲ್ ಪಂದ್ಯವೂ ಶ್ರೀಲಂಕಾದಲ್ಲಿ ಮಾತ್ರ ನಡೆಯಲಿದೆ.

ಪಿಸಿಬಿ ಮತ್ತು ಬಿಸಿಸಿಐ ನಡುವಿನ ಜಗಳ ಅಂತ್ಯಗೊಳ್ಳುತ್ತಿದ್ದಂತೆ ಐಸಿಸಿ ಕೂಡ ನೆಮ್ಮದಿಯ ನಿಟ್ಟುಸಿರು ಬಿಡಲಿದೆ. ಏಷ್ಯಾಕಪ್‌ಗೆ ಪಾಕಿಸ್ತಾನ ನೀಡಿರುವ ಹೈಬ್ರಿಡ್ ಪ್ರಸ್ತಾವನೆಗೆ ಒಪ್ಪಿಗೆ ನೀಡಿದರೆ, ಏಕದಿನ ವಿಶ್ವಕಪ್‌ಗೆ ಸಂಬಂಧಿಸಿದಂತೆ ಯಾವುದೇ ಅಡೆತಡೆ ಆಗುವುದಿಲ್ಲ.

ವಿಶ್ವಕಪ್​ಗಾಗಿ ಪಾಕಿಸ್ತಾನ ತಂಡ ಅಕ್ಟೋಬರ್‌ನಲ್ಲಿ ಭಾರತಕ್ಕೆ ಪ್ರಯಾಣಿಸಲಿದೆ ಎಂದು ವರದಿ ಹೇಳಿದೆ. ನವೆಂಬರ್​ನಲ್ಲಿ ನಡೆಯಲಿರುವ ಪಂದ್ಯಾವಳಿಗಾಗಿ ಭಾರತಕ್ಕೆ ಬರಲು ಸಿದ್ಧರಾಗಿದ್ದಾರೆ. ಈ ವಿವಾದದ ಪರಿಹಾರದ ನಂತರ, ವಿಶ್ವಕಪ್‌ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

andolanait

Recent Posts

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

1 hour ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

2 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

2 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

2 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

2 hours ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

2 hours ago