ಹರಿಯಾಣ: ನಮ್ಮ ಹೋರಾಟ ಇಲ್ಲಿಗೆ ಮುಗಿದಿಲ್ಲ, ಅದು ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಸತ್ಯ ಜಯಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ.
ಪ್ಯಾರಿಸ್ನಿಂದ ನಿನ್ನೆ ದೆಹಲಿಗೆ ಮರಳಿದ ವಿನೇಶ್ ಫೋಗಟ್ ಅವರನ್ನು ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಹರಿಯಾಣದ ಅವರ ತವರೂರು ಬಲಾಲಿಗೆ ಮೆರವಣಿಗೆಯಲ್ಲಿ ಕರೆದುಕೊಂಡು ಬರಲಾಯಿತು.
ಬಳಿಕ ತಮ್ಮ ತವರು ಬಲಾಲಿಯಲ್ಲಿ ನೂರಾರು ಗ್ರಾಮಸ್ಥರು ಸೇರಿದ್ದ ಅದ್ಧೂರಿ ಸಮಾರಂಭದಲ್ಲಿ ವಿನೇಶ್ ಫೋಗಟ್ರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ವಿನೇಶ್ ಫೋಗಟ್ ಅವರು, ನನ್ನ ದೇಶವಾಸಿಗಳು, ಗ್ರಾಮಸ್ಥರು ಹಾಗೂ ಕುಟುಂಬ ಸದಸ್ಯರಿಂದ ಸಿಗುತ್ತಿರುವ ಪ್ರೀತಿ ಮತ್ತು ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಾಗಿದೆ. ಈಗ ಆಗಿರುವ ಗಾಯ ಬೇಗನೇ ವಾಸಿಯಾಗುವ ಭರವಸೆ ಮೂಡಿದೆ. ಇದರಿಂದ ನಾನು ಕುಸ್ತಿಗೆ ಮರಳಲೂ ಬಹುದು ಎಂದರು.
ಈ ರೀತಿ ಪದಕ ಕೈತಪ್ಪಿರುವುದು ನನ್ನ ಜೀವನದ ಬಹಳ ದೊಡ್ಡ ಗಾಯವಾಗಿದೆ. ಆದರೆ ಇಂದು ಮೂಡಿರುವ ಧೈರ್ಯವನ್ನು ಸರಿಯಾದ ದಿಕ್ಕಿನಲ್ಲಿ ವಿನಿಯೋಗಿಸುತ್ತೇನೆ. ನನ್ನ ಹೋರಾಟ ಇಲ್ಲಿಗೆ ನಿಲ್ಲಲ್ಲ. ಅದು ಮುಂದುವರಿಯಲಿದೆ ಎಂದು ಹೇಳಿದರು.
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…