ಕ್ರೀಡೆ

ನಮ್ಮ ಹೋರಾಟ ಇಲ್ಲಿಗೆ ಮುಗಿದಿಲ್ಲ, ಮುಂದುವರಿಸುತ್ತೇವೆ: ವಿನೇಶ್‌ ಫೋಗಟ್‌ ಅಬ್ಬರ

ಹರಿಯಾಣ: ನಮ್ಮ ಹೋರಾಟ ಇಲ್ಲಿಗೆ ಮುಗಿದಿಲ್ಲ, ಅದು ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಸತ್ಯ ಜಯಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಒಲಿಂಪಿಯನ್‌ ಕುಸ್ತಿಪಟು ವಿನೇಶ್‌ ಫೋಗಟ್‌ ಹೇಳಿದ್ದಾರೆ.

ಪ್ಯಾರಿಸ್‌ನಿಂದ ನಿನ್ನೆ ದೆಹಲಿಗೆ ಮರಳಿದ ವಿನೇಶ್‌ ಫೋಗಟ್‌ ಅವರನ್ನು ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಹರಿಯಾಣದ ಅವರ ತವರೂರು ಬಲಾಲಿಗೆ ಮೆರವಣಿಗೆಯಲ್ಲಿ ಕರೆದುಕೊಂಡು ಬರಲಾಯಿತು.

ಬಳಿಕ ತಮ್ಮ ತವರು ಬಲಾಲಿಯಲ್ಲಿ ನೂರಾರು ಗ್ರಾಮಸ್ಥರು ಸೇರಿದ್ದ ಅದ್ಧೂರಿ ಸಮಾರಂಭದಲ್ಲಿ ವಿನೇಶ್‌ ಫೋಗಟ್‌ರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ವಿನೇಶ್‌ ಫೋಗಟ್‌ ಅವರು, ನನ್ನ ದೇಶವಾಸಿಗಳು, ಗ್ರಾಮಸ್ಥರು ಹಾಗೂ ಕುಟುಂಬ ಸದಸ್ಯರಿಂದ ಸಿಗುತ್ತಿರುವ ಪ್ರೀತಿ ಮತ್ತು ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಾಗಿದೆ. ಈಗ ಆಗಿರುವ ಗಾಯ ಬೇಗನೇ ವಾಸಿಯಾಗುವ ಭರವಸೆ ಮೂಡಿದೆ. ಇದರಿಂದ ನಾನು ಕುಸ್ತಿಗೆ ಮರಳಲೂ ಬಹುದು ಎಂದರು.

ಈ ರೀತಿ ಪದಕ ಕೈತಪ್ಪಿರುವುದು ನನ್ನ ಜೀವನದ ಬಹಳ ದೊಡ್ಡ ಗಾಯವಾಗಿದೆ. ಆದರೆ ಇಂದು ಮೂಡಿರುವ ಧೈರ್ಯವನ್ನು ಸರಿಯಾದ ದಿಕ್ಕಿನಲ್ಲಿ ವಿನಿಯೋಗಿಸುತ್ತೇನೆ. ನನ್ನ ಹೋರಾಟ ಇಲ್ಲಿಗೆ ನಿಲ್ಲಲ್ಲ. ಅದು ಮುಂದುವರಿಯಲಿದೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

5 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

5 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

5 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

6 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

6 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

7 hours ago