ಹರಿಯಾಣ: ನಮ್ಮ ಹೋರಾಟ ಇಲ್ಲಿಗೆ ಮುಗಿದಿಲ್ಲ, ಅದು ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಸತ್ಯ ಜಯಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ.
ಪ್ಯಾರಿಸ್ನಿಂದ ನಿನ್ನೆ ದೆಹಲಿಗೆ ಮರಳಿದ ವಿನೇಶ್ ಫೋಗಟ್ ಅವರನ್ನು ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಹರಿಯಾಣದ ಅವರ ತವರೂರು ಬಲಾಲಿಗೆ ಮೆರವಣಿಗೆಯಲ್ಲಿ ಕರೆದುಕೊಂಡು ಬರಲಾಯಿತು.
ಬಳಿಕ ತಮ್ಮ ತವರು ಬಲಾಲಿಯಲ್ಲಿ ನೂರಾರು ಗ್ರಾಮಸ್ಥರು ಸೇರಿದ್ದ ಅದ್ಧೂರಿ ಸಮಾರಂಭದಲ್ಲಿ ವಿನೇಶ್ ಫೋಗಟ್ರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ವಿನೇಶ್ ಫೋಗಟ್ ಅವರು, ನನ್ನ ದೇಶವಾಸಿಗಳು, ಗ್ರಾಮಸ್ಥರು ಹಾಗೂ ಕುಟುಂಬ ಸದಸ್ಯರಿಂದ ಸಿಗುತ್ತಿರುವ ಪ್ರೀತಿ ಮತ್ತು ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಾಗಿದೆ. ಈಗ ಆಗಿರುವ ಗಾಯ ಬೇಗನೇ ವಾಸಿಯಾಗುವ ಭರವಸೆ ಮೂಡಿದೆ. ಇದರಿಂದ ನಾನು ಕುಸ್ತಿಗೆ ಮರಳಲೂ ಬಹುದು ಎಂದರು.
ಈ ರೀತಿ ಪದಕ ಕೈತಪ್ಪಿರುವುದು ನನ್ನ ಜೀವನದ ಬಹಳ ದೊಡ್ಡ ಗಾಯವಾಗಿದೆ. ಆದರೆ ಇಂದು ಮೂಡಿರುವ ಧೈರ್ಯವನ್ನು ಸರಿಯಾದ ದಿಕ್ಕಿನಲ್ಲಿ ವಿನಿಯೋಗಿಸುತ್ತೇನೆ. ನನ್ನ ಹೋರಾಟ ಇಲ್ಲಿಗೆ ನಿಲ್ಲಲ್ಲ. ಅದು ಮುಂದುವರಿಯಲಿದೆ ಎಂದು ಹೇಳಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…