ಕ್ರೀಡೆ

ನಮ್ಮ ಹೋರಾಟ ಇಲ್ಲಿಗೆ ಮುಗಿದಿಲ್ಲ, ಮುಂದುವರಿಸುತ್ತೇವೆ: ವಿನೇಶ್‌ ಫೋಗಟ್‌ ಅಬ್ಬರ

ಹರಿಯಾಣ: ನಮ್ಮ ಹೋರಾಟ ಇಲ್ಲಿಗೆ ಮುಗಿದಿಲ್ಲ, ಅದು ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಸತ್ಯ ಜಯಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಒಲಿಂಪಿಯನ್‌ ಕುಸ್ತಿಪಟು ವಿನೇಶ್‌ ಫೋಗಟ್‌ ಹೇಳಿದ್ದಾರೆ.

ಪ್ಯಾರಿಸ್‌ನಿಂದ ನಿನ್ನೆ ದೆಹಲಿಗೆ ಮರಳಿದ ವಿನೇಶ್‌ ಫೋಗಟ್‌ ಅವರನ್ನು ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಹರಿಯಾಣದ ಅವರ ತವರೂರು ಬಲಾಲಿಗೆ ಮೆರವಣಿಗೆಯಲ್ಲಿ ಕರೆದುಕೊಂಡು ಬರಲಾಯಿತು.

ಬಳಿಕ ತಮ್ಮ ತವರು ಬಲಾಲಿಯಲ್ಲಿ ನೂರಾರು ಗ್ರಾಮಸ್ಥರು ಸೇರಿದ್ದ ಅದ್ಧೂರಿ ಸಮಾರಂಭದಲ್ಲಿ ವಿನೇಶ್‌ ಫೋಗಟ್‌ರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ವಿನೇಶ್‌ ಫೋಗಟ್‌ ಅವರು, ನನ್ನ ದೇಶವಾಸಿಗಳು, ಗ್ರಾಮಸ್ಥರು ಹಾಗೂ ಕುಟುಂಬ ಸದಸ್ಯರಿಂದ ಸಿಗುತ್ತಿರುವ ಪ್ರೀತಿ ಮತ್ತು ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಾಗಿದೆ. ಈಗ ಆಗಿರುವ ಗಾಯ ಬೇಗನೇ ವಾಸಿಯಾಗುವ ಭರವಸೆ ಮೂಡಿದೆ. ಇದರಿಂದ ನಾನು ಕುಸ್ತಿಗೆ ಮರಳಲೂ ಬಹುದು ಎಂದರು.

ಈ ರೀತಿ ಪದಕ ಕೈತಪ್ಪಿರುವುದು ನನ್ನ ಜೀವನದ ಬಹಳ ದೊಡ್ಡ ಗಾಯವಾಗಿದೆ. ಆದರೆ ಇಂದು ಮೂಡಿರುವ ಧೈರ್ಯವನ್ನು ಸರಿಯಾದ ದಿಕ್ಕಿನಲ್ಲಿ ವಿನಿಯೋಗಿಸುತ್ತೇನೆ. ನನ್ನ ಹೋರಾಟ ಇಲ್ಲಿಗೆ ನಿಲ್ಲಲ್ಲ. ಅದು ಮುಂದುವರಿಯಲಿದೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

25 mins ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

28 mins ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

30 mins ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

33 mins ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

10 hours ago