ಹರಿಯಾಣ: ನಮ್ಮ ಹೋರಾಟ ಇಲ್ಲಿಗೆ ಮುಗಿದಿಲ್ಲ, ಅದು ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಸತ್ಯ ಜಯಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ.
ಪ್ಯಾರಿಸ್ನಿಂದ ನಿನ್ನೆ ದೆಹಲಿಗೆ ಮರಳಿದ ವಿನೇಶ್ ಫೋಗಟ್ ಅವರನ್ನು ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಹರಿಯಾಣದ ಅವರ ತವರೂರು ಬಲಾಲಿಗೆ ಮೆರವಣಿಗೆಯಲ್ಲಿ ಕರೆದುಕೊಂಡು ಬರಲಾಯಿತು.
ಬಳಿಕ ತಮ್ಮ ತವರು ಬಲಾಲಿಯಲ್ಲಿ ನೂರಾರು ಗ್ರಾಮಸ್ಥರು ಸೇರಿದ್ದ ಅದ್ಧೂರಿ ಸಮಾರಂಭದಲ್ಲಿ ವಿನೇಶ್ ಫೋಗಟ್ರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ವಿನೇಶ್ ಫೋಗಟ್ ಅವರು, ನನ್ನ ದೇಶವಾಸಿಗಳು, ಗ್ರಾಮಸ್ಥರು ಹಾಗೂ ಕುಟುಂಬ ಸದಸ್ಯರಿಂದ ಸಿಗುತ್ತಿರುವ ಪ್ರೀತಿ ಮತ್ತು ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಾಗಿದೆ. ಈಗ ಆಗಿರುವ ಗಾಯ ಬೇಗನೇ ವಾಸಿಯಾಗುವ ಭರವಸೆ ಮೂಡಿದೆ. ಇದರಿಂದ ನಾನು ಕುಸ್ತಿಗೆ ಮರಳಲೂ ಬಹುದು ಎಂದರು.
ಈ ರೀತಿ ಪದಕ ಕೈತಪ್ಪಿರುವುದು ನನ್ನ ಜೀವನದ ಬಹಳ ದೊಡ್ಡ ಗಾಯವಾಗಿದೆ. ಆದರೆ ಇಂದು ಮೂಡಿರುವ ಧೈರ್ಯವನ್ನು ಸರಿಯಾದ ದಿಕ್ಕಿನಲ್ಲಿ ವಿನಿಯೋಗಿಸುತ್ತೇನೆ. ನನ್ನ ಹೋರಾಟ ಇಲ್ಲಿಗೆ ನಿಲ್ಲಲ್ಲ. ಅದು ಮುಂದುವರಿಯಲಿದೆ ಎಂದು ಹೇಳಿದರು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…