ಹರಿಯಾಣ: ನಮ್ಮ ಹೋರಾಟ ಇಲ್ಲಿಗೆ ಮುಗಿದಿಲ್ಲ, ಅದು ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಸತ್ಯ ಜಯಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ.
ಪ್ಯಾರಿಸ್ನಿಂದ ನಿನ್ನೆ ದೆಹಲಿಗೆ ಮರಳಿದ ವಿನೇಶ್ ಫೋಗಟ್ ಅವರನ್ನು ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಹರಿಯಾಣದ ಅವರ ತವರೂರು ಬಲಾಲಿಗೆ ಮೆರವಣಿಗೆಯಲ್ಲಿ ಕರೆದುಕೊಂಡು ಬರಲಾಯಿತು.
ಬಳಿಕ ತಮ್ಮ ತವರು ಬಲಾಲಿಯಲ್ಲಿ ನೂರಾರು ಗ್ರಾಮಸ್ಥರು ಸೇರಿದ್ದ ಅದ್ಧೂರಿ ಸಮಾರಂಭದಲ್ಲಿ ವಿನೇಶ್ ಫೋಗಟ್ರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ವಿನೇಶ್ ಫೋಗಟ್ ಅವರು, ನನ್ನ ದೇಶವಾಸಿಗಳು, ಗ್ರಾಮಸ್ಥರು ಹಾಗೂ ಕುಟುಂಬ ಸದಸ್ಯರಿಂದ ಸಿಗುತ್ತಿರುವ ಪ್ರೀತಿ ಮತ್ತು ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಾಗಿದೆ. ಈಗ ಆಗಿರುವ ಗಾಯ ಬೇಗನೇ ವಾಸಿಯಾಗುವ ಭರವಸೆ ಮೂಡಿದೆ. ಇದರಿಂದ ನಾನು ಕುಸ್ತಿಗೆ ಮರಳಲೂ ಬಹುದು ಎಂದರು.
ಈ ರೀತಿ ಪದಕ ಕೈತಪ್ಪಿರುವುದು ನನ್ನ ಜೀವನದ ಬಹಳ ದೊಡ್ಡ ಗಾಯವಾಗಿದೆ. ಆದರೆ ಇಂದು ಮೂಡಿರುವ ಧೈರ್ಯವನ್ನು ಸರಿಯಾದ ದಿಕ್ಕಿನಲ್ಲಿ ವಿನಿಯೋಗಿಸುತ್ತೇನೆ. ನನ್ನ ಹೋರಾಟ ಇಲ್ಲಿಗೆ ನಿಲ್ಲಲ್ಲ. ಅದು ಮುಂದುವರಿಯಲಿದೆ ಎಂದು ಹೇಳಿದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…