ಕ್ರೀಡೆ

ನಮ್ಮ ಹೋರಾಟ ಮುಂದುವರಿಯಲಿದೆ, ಸತ್ಯ ಜಯಿಸಲಿದೆ: ವಿನೇಶ್‌ ಫೋಗಟ್‌

ಹರಿಯಾಣ: ಭಾರತದ ಪ್ರಸಿದ್ಧ ಕುಸ್ತಿಪಟು ವಿನೇಶ್ ಪೊಗಟು ಶನಿವಾರ ರಾತ್ರಿ ತಮ್ಮ ತವರೂರು ಹರ್ಯಾಣದ ಬಲಾಲಿ ಗ್ರಾಮಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಅತ್ಯಂತ ಅದ್ದೂರಿಯಾಗಿ ಮೆರೆವಣಿಗೆ ಮೂಲಕ ಅವರನ್ನು ಸ್ವಾಗತಿಸಿದರು.

ಒಲಿಂಪಿಕ್ಸ್‌ನಿಂದ ನಿರಾಸೆಯಿಂದ ಹೊರಬಂದ ಫೋಗಟ್‌ ಅವರಿಗೆ ತಮ್ಮ ಗ್ರಾಮಸ್ಥರ ಬೆಂಬಲ ಮತ್ತು ಪ್ರೀತಿ ಅವರಿಗೆ ದೊಡ್ಡ ಬಹುಮಾನ ಸಿಕ್ಕಂತಾಗಿದೆ. ಇನ್ನು ಸ್ವಾಗತ ಸಮಾರಂಭದಲ್ಲಿ, 750 ಕೆ.ಜಿ. ಲಡ್ಡು ಹಂಚಿದ್ದು ಸ್ಥಳೀಯರು ವಿನೇಶ್‌ ಫೋಗಟ್‌ಗೆ 100, 500 ಮತ್ತು 2000 ರೂಪಾಯಿಯ ನಗದು ಬಹುಮಾನ ನೀಡಿದರು. ನಂತರ ನೋಟಿನ ಮಾಲೆ ಹಾಕಿ ಸನ್ಮಾನಿಸಲಾಯಿತು.

ಈ ವೇಳೆ ಭಾವುಕರಾಗಿ ಮಾತನಾಡಿದ ವಿನೇಶ್ ಫೋಗಟ್‌, ನಾನು ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕದ ಘಟ್ಟ ತಲುಪಿಲ್ಲ. ಆದರೆ ನನ್ನ ಗ್ರಾಮಸ್ಥರು ನನಗೆ ನೀಡಿರುವ ಪ್ರೀತಿ ಮತ್ತು ಗೌರವ 1000 ಚಿನ್ನದ ಪದಕಕ್ಕಿಂತಲೂ ಮಿಗಿಲು ಎಂದಿದ್ದಾರೆ.

ಮುಂದುವರೆದು ಮಾತನಾಡಿದ ಅವರು ನಮ್ಮ ಹೋರಾಟ ಮುಗಿದಿಲ್ಲ. ಅದು ಮುಂದುವರಿಯಲಿದೆ. ಸತ್ಯ ಜಯಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.

ಈ ರೀತಿಯ ಆತ್ಮೀಯ ಸ್ವಾಗತ ಮತ್ತು ಬೆಂಬಲದಿಂದ, ತಮ್ಮ ಸಾಧನೆಗೆ ಇನ್ನಷ್ಟು ಪ್ರೇರಣೆ ಪಡೆಯುತ್ತಿದ್ದೇನೆ ಎಂದರು.

ಈ ವೇಳೆ ಒಲಿಂಪಿಯನ್‌ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್‌, ಬಜರಂಗ್‌ ಪೂನಿಯಾ ಮತ್ತಿತತರರು ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರೀಕಂಠನ ಸನ್ನಿಧಿಯಲ್ಲಿ ವ್ಯಾಪಾರೀಕರಣವಾದ ಶಿವರಾತ್ರಿ ಜಾಗರಣೆ

ಎಸ್.ಎಸ್.ಭಟ್ ಈ ಬಾರಿ ೫೦ ಲಕ್ಷ ರೂ. ಅಂದಾಜು ವೆಚ್ಚದ ಯೋಜನೆ ಸಿದ್ಧವಾಗಿರುವುದಕ್ಕೆ ಭಕ್ತರ ಆಕ್ರೋಶ ನಂಜನಗೂಡು: ಶಿವರಾತ್ರಿಯ ಮುನ್ನಾ…

4 mins ago

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

9 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

9 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

10 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

10 hours ago