ಹರಿಯಾಣ: ಭಾರತದ ಪ್ರಸಿದ್ಧ ಕುಸ್ತಿಪಟು ವಿನೇಶ್ ಪೊಗಟು ಶನಿವಾರ ರಾತ್ರಿ ತಮ್ಮ ತವರೂರು ಹರ್ಯಾಣದ ಬಲಾಲಿ ಗ್ರಾಮಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಅತ್ಯಂತ ಅದ್ದೂರಿಯಾಗಿ ಮೆರೆವಣಿಗೆ ಮೂಲಕ ಅವರನ್ನು ಸ್ವಾಗತಿಸಿದರು.
ಒಲಿಂಪಿಕ್ಸ್ನಿಂದ ನಿರಾಸೆಯಿಂದ ಹೊರಬಂದ ಫೋಗಟ್ ಅವರಿಗೆ ತಮ್ಮ ಗ್ರಾಮಸ್ಥರ ಬೆಂಬಲ ಮತ್ತು ಪ್ರೀತಿ ಅವರಿಗೆ ದೊಡ್ಡ ಬಹುಮಾನ ಸಿಕ್ಕಂತಾಗಿದೆ. ಇನ್ನು ಸ್ವಾಗತ ಸಮಾರಂಭದಲ್ಲಿ, 750 ಕೆ.ಜಿ. ಲಡ್ಡು ಹಂಚಿದ್ದು ಸ್ಥಳೀಯರು ವಿನೇಶ್ ಫೋಗಟ್ಗೆ 100, 500 ಮತ್ತು 2000 ರೂಪಾಯಿಯ ನಗದು ಬಹುಮಾನ ನೀಡಿದರು. ನಂತರ ನೋಟಿನ ಮಾಲೆ ಹಾಕಿ ಸನ್ಮಾನಿಸಲಾಯಿತು.
ಈ ವೇಳೆ ಭಾವುಕರಾಗಿ ಮಾತನಾಡಿದ ವಿನೇಶ್ ಫೋಗಟ್, ನಾನು ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕದ ಘಟ್ಟ ತಲುಪಿಲ್ಲ. ಆದರೆ ನನ್ನ ಗ್ರಾಮಸ್ಥರು ನನಗೆ ನೀಡಿರುವ ಪ್ರೀತಿ ಮತ್ತು ಗೌರವ 1000 ಚಿನ್ನದ ಪದಕಕ್ಕಿಂತಲೂ ಮಿಗಿಲು ಎಂದಿದ್ದಾರೆ.
ಮುಂದುವರೆದು ಮಾತನಾಡಿದ ಅವರು ನಮ್ಮ ಹೋರಾಟ ಮುಗಿದಿಲ್ಲ. ಅದು ಮುಂದುವರಿಯಲಿದೆ. ಸತ್ಯ ಜಯಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.
ಈ ರೀತಿಯ ಆತ್ಮೀಯ ಸ್ವಾಗತ ಮತ್ತು ಬೆಂಬಲದಿಂದ, ತಮ್ಮ ಸಾಧನೆಗೆ ಇನ್ನಷ್ಟು ಪ್ರೇರಣೆ ಪಡೆಯುತ್ತಿದ್ದೇನೆ ಎಂದರು.
ಈ ವೇಳೆ ಒಲಿಂಪಿಯನ್ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮತ್ತಿತತರರು ಹಾಜರಿದ್ದರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…