ಹರಿಯಾಣ: ಭಾರತದ ಪ್ರಸಿದ್ಧ ಕುಸ್ತಿಪಟು ವಿನೇಶ್ ಪೊಗಟು ಶನಿವಾರ ರಾತ್ರಿ ತಮ್ಮ ತವರೂರು ಹರ್ಯಾಣದ ಬಲಾಲಿ ಗ್ರಾಮಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಅತ್ಯಂತ ಅದ್ದೂರಿಯಾಗಿ ಮೆರೆವಣಿಗೆ ಮೂಲಕ ಅವರನ್ನು ಸ್ವಾಗತಿಸಿದರು.
ಒಲಿಂಪಿಕ್ಸ್ನಿಂದ ನಿರಾಸೆಯಿಂದ ಹೊರಬಂದ ಫೋಗಟ್ ಅವರಿಗೆ ತಮ್ಮ ಗ್ರಾಮಸ್ಥರ ಬೆಂಬಲ ಮತ್ತು ಪ್ರೀತಿ ಅವರಿಗೆ ದೊಡ್ಡ ಬಹುಮಾನ ಸಿಕ್ಕಂತಾಗಿದೆ. ಇನ್ನು ಸ್ವಾಗತ ಸಮಾರಂಭದಲ್ಲಿ, 750 ಕೆ.ಜಿ. ಲಡ್ಡು ಹಂಚಿದ್ದು ಸ್ಥಳೀಯರು ವಿನೇಶ್ ಫೋಗಟ್ಗೆ 100, 500 ಮತ್ತು 2000 ರೂಪಾಯಿಯ ನಗದು ಬಹುಮಾನ ನೀಡಿದರು. ನಂತರ ನೋಟಿನ ಮಾಲೆ ಹಾಕಿ ಸನ್ಮಾನಿಸಲಾಯಿತು.
ಈ ವೇಳೆ ಭಾವುಕರಾಗಿ ಮಾತನಾಡಿದ ವಿನೇಶ್ ಫೋಗಟ್, ನಾನು ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕದ ಘಟ್ಟ ತಲುಪಿಲ್ಲ. ಆದರೆ ನನ್ನ ಗ್ರಾಮಸ್ಥರು ನನಗೆ ನೀಡಿರುವ ಪ್ರೀತಿ ಮತ್ತು ಗೌರವ 1000 ಚಿನ್ನದ ಪದಕಕ್ಕಿಂತಲೂ ಮಿಗಿಲು ಎಂದಿದ್ದಾರೆ.
ಮುಂದುವರೆದು ಮಾತನಾಡಿದ ಅವರು ನಮ್ಮ ಹೋರಾಟ ಮುಗಿದಿಲ್ಲ. ಅದು ಮುಂದುವರಿಯಲಿದೆ. ಸತ್ಯ ಜಯಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.
ಈ ರೀತಿಯ ಆತ್ಮೀಯ ಸ್ವಾಗತ ಮತ್ತು ಬೆಂಬಲದಿಂದ, ತಮ್ಮ ಸಾಧನೆಗೆ ಇನ್ನಷ್ಟು ಪ್ರೇರಣೆ ಪಡೆಯುತ್ತಿದ್ದೇನೆ ಎಂದರು.
ಈ ವೇಳೆ ಒಲಿಂಪಿಯನ್ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮತ್ತಿತತರರು ಹಾಜರಿದ್ದರು.
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…