ಕ್ರೀಡೆ

PAK vs BAN 1st test: ಪಾಕ್‌ ಸೋಲಿಸಿ ಐತಿಹಾಸಿಕ ದಾಖಲೆ ಬರೆದ ಬಾಂಗ್ಲಾದೇಶ

ರಾವಲ್ಪಿಂಡಿ: ಇಲ್ಲಿನ ರಾವಲ್ಪಿಂಡಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌ ಕ್ರಿಕೆಟ್‌ನಲ್ಲಿ ಪಾಕ್‌ ವಿರುದ್ಧ 10 ವಿಕೆಟ್‌ಗಳ ಅಂತರದಿಂದ ಬಾಂಗ್ಲಾದೇಶ ಗೆಲುವು ದಾಖಲಿಸಿತು.

ಆ ಮೂಲಕ ಪಾಕ್‌ ನೆಲದಲ್ಲಿ ಮೊದಲ ಟೆಸ್ಟ್‌ ಗೆಲುವು ದಾಖಲಿಸಿದ ಹೆಗ್ಗಳಿಕೆಗೆ ಬಾಂಗ್ಲಾ ಪಾತ್ರವಾಯಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ ಕಳೆದುಕೊಂಡು 448 ರನ್‌ಗಳಿಸಿ ಡಿಕ್ಲೇರ್‌ ಘೋಷಿಸಿತು. ದ್ವಿಶತಕ ಅಂಚಿನಲ್ಲಿದ್ದ ಮೊಹಮ್ಮದ್‌ ರಿಜ್ವಾನ್‌ 171(239) ರನ್‌ ಗಳಿಸಿ ಸ್ಕ್ರೀಜ್‌ನಲ್ಲಿದ್ದರು. ಈ ವೇಳೆ ಡಿಕ್ಲೇರ್‌ ಘೋಷಿಸಿದ ನಾಯಕನ ವಿರುದ್ಧ ಸಿಡಿಮಿಡಿಗೊಂಡು ಬ್ಯಾಟ್‌ ಬೀಸಿ ಹೊರನಡೆದರು. ಸೌದ್‌ ಶಕೀಲ್‌ 141(261) ರನ್‌ ಬಾರಿಸಿ ತಂಡಕ್ಕೆ ನೆರವಾದರು. ಬಾಂಗ್ಲಾ ಪರವಾಗಿ ಇಸ್ಲಾಂ ಹಾಗೂ ಮಹ್ಮೂದ್‌ ತಲಾ ಎರಡು ವಿಕೆಟ್‌ ಕಬಳಿಸಿ ಮಿಂಚಿದರು.

ಬೃಹತ್‌ ಮೊತ್ತ ದಾಖಲಿಸಿ ಗೆಲುವಿನ ನಿರೀಕ್ಷೆಯಲ್ಲಿದ್ದ ಪಾಕಿಸ್ತಾನ ಆಟಗಾರರ ಎಲ್ಲಾ ಲೆಕ್ಕಾಚಾರಗಳನ್ನು ಬಾಂಗ್ಲಾ ಆಟಗಾರರು ತಲೆ ಕೆಳಗೆ ಮಾಡಿದರು. ಮುಷ್ಪಿಕರ್‌ ರಹೀಮ್‌ ಅವರು 191(341) ರನ್‌ಗಳಿಸಿ ದ್ವಿಶತಕ ವಂಚಿತರಾದರು. ಬಾಂಗ್ಲಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 167.3 ಓವರ್‌ಗಳಿಗೆ ಆಲ್‌ಔಟ್‌ ಆಗಿ 565 ರನ್‌ ಗಳಿಸಿ ಮುನ್ನಡೆ ಸಾಧಿಸಿತು. ಪಾಕ್‌ ಪರ ನಸೀಮ್‌ ಮೂರು, ಮೊಹಮ್ಮದ್‌ ಅಲಿ, ಶಾಹಿನ್‌ ಶಾ ಅಫ್ರಿದಿ ಹಾಗೂ ಶಹಜಾದ್‌ ತಲಾ ಎರಡು ವಿಕೆಟ್‌ ಕಬಳಿಸಿದರು.

ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಪಾಕ್‌ಗೆ ಬಾಂಗ್ಲಾ ಬೌಲರ್‌ಗಳು ಕಾಡಿದರು. ಮೆಹದಿ ಹಸನ್‌ ಪ್ರಮುಖ ನಾಲ್ಕು ವಿಕೆಟ್‌ ಕಬಳಿಸಿದರೇ, ಹಸನ್‌ ಮಹ್ಮೂದ್‌ ಮೂರು ವಿಕೆಟ್‌ ಪಡೆದರು. ರಜ್ವಾನ್‌ 51(80) ರನ್‌ ಗಳಿಸಿದ್ದೇ ಪಾಕ್‌ ಪರ ಹೆಚ್ಚಿನ ರನ್‌ ಆಗಿತ್ತು.

ಅಂತಿಮವಾಗಿ ಪಾಕ್‌ ಕೇವಲ 30ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಬಾಂಗ್ಲಾ ಯಾವುದೇ ವಿಕೆಟ್‌ ನಷ್ಟವಿಲ್ಲದೇ ಗುರಿ ಮುಟ್ಟಿ ಐತಿಹಾಸಿಕ ಗೆಲುವಿಗೆ ಸಾಕ್ಷಿಯಾದರು.

ಪಂದ್ಯಶ್ರೇಷ್ಠ: ಮುಷ್ಪಿಕರ್‌ ರಹೀಮ್‌

ಸಂಕ್ಷಿಪ್ತ ಸ್ಕೋರ್‌:

ಪಾಕಿಸ್ತಾನ್‌ ಮೊದಲ ಇನ್ನಿಂಗ್ಸ್‌: 448ಕ್ಕೆ 6 (113 ಓವರ್‌)
ಬಾಂಗ್ಲಾ ಮೊದಲ ಇನ್ನಿಂಗ್ಸ್‌: 565ಕ್ಕೆ 10 (167.3 ಓವರ್‌)
ಪಾಕಿಸ್ತಾನ್‌ ಎರಡನೇ ಇನ್ನಿಂಗ್ಸ್‌: 146ಕ್ಕೆ 10 (55.5 ಓವರ್‌)
ಬಾಂಗ್ಲಾ ಎರಡನೇ ಇನ್ನಿಂಗ್ಸ್‌: 30ಕ್ಕೆ 0 (6.3 ಓವರ್‌)

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಲೋಕಸಭೆಯಲ್ಲಿ ಮಹತ್ವದ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡಿಸಿದ ಅಮಿತ್‌ ಶಾ

ನವದೆಹಲಿ: ಕೇಂದ್ರ ಸಚಿವ ಅಮಿತ್‌ ಶಾ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ ಪ್ರಸ್ತಾವನೆಯು…

22 mins ago

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ತೀವ್ರ ವಿರೋಧ: ತಮಿಳುನಾಡು ಸಿಎಂ ಸ್ಟಾಲಿನ್‌ ಪ್ರತಿಭಟನೆ

ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…

43 mins ago

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

1 hour ago

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

2 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

2 hours ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

2 hours ago