ಕ್ರೀಡೆ

PAK vs BAN 1st test: ಪಾಕ್‌ ಸೋಲಿಸಿ ಐತಿಹಾಸಿಕ ದಾಖಲೆ ಬರೆದ ಬಾಂಗ್ಲಾದೇಶ

ರಾವಲ್ಪಿಂಡಿ: ಇಲ್ಲಿನ ರಾವಲ್ಪಿಂಡಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌ ಕ್ರಿಕೆಟ್‌ನಲ್ಲಿ ಪಾಕ್‌ ವಿರುದ್ಧ 10 ವಿಕೆಟ್‌ಗಳ ಅಂತರದಿಂದ ಬಾಂಗ್ಲಾದೇಶ ಗೆಲುವು ದಾಖಲಿಸಿತು.

ಆ ಮೂಲಕ ಪಾಕ್‌ ನೆಲದಲ್ಲಿ ಮೊದಲ ಟೆಸ್ಟ್‌ ಗೆಲುವು ದಾಖಲಿಸಿದ ಹೆಗ್ಗಳಿಕೆಗೆ ಬಾಂಗ್ಲಾ ಪಾತ್ರವಾಯಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ ಕಳೆದುಕೊಂಡು 448 ರನ್‌ಗಳಿಸಿ ಡಿಕ್ಲೇರ್‌ ಘೋಷಿಸಿತು. ದ್ವಿಶತಕ ಅಂಚಿನಲ್ಲಿದ್ದ ಮೊಹಮ್ಮದ್‌ ರಿಜ್ವಾನ್‌ 171(239) ರನ್‌ ಗಳಿಸಿ ಸ್ಕ್ರೀಜ್‌ನಲ್ಲಿದ್ದರು. ಈ ವೇಳೆ ಡಿಕ್ಲೇರ್‌ ಘೋಷಿಸಿದ ನಾಯಕನ ವಿರುದ್ಧ ಸಿಡಿಮಿಡಿಗೊಂಡು ಬ್ಯಾಟ್‌ ಬೀಸಿ ಹೊರನಡೆದರು. ಸೌದ್‌ ಶಕೀಲ್‌ 141(261) ರನ್‌ ಬಾರಿಸಿ ತಂಡಕ್ಕೆ ನೆರವಾದರು. ಬಾಂಗ್ಲಾ ಪರವಾಗಿ ಇಸ್ಲಾಂ ಹಾಗೂ ಮಹ್ಮೂದ್‌ ತಲಾ ಎರಡು ವಿಕೆಟ್‌ ಕಬಳಿಸಿ ಮಿಂಚಿದರು.

ಬೃಹತ್‌ ಮೊತ್ತ ದಾಖಲಿಸಿ ಗೆಲುವಿನ ನಿರೀಕ್ಷೆಯಲ್ಲಿದ್ದ ಪಾಕಿಸ್ತಾನ ಆಟಗಾರರ ಎಲ್ಲಾ ಲೆಕ್ಕಾಚಾರಗಳನ್ನು ಬಾಂಗ್ಲಾ ಆಟಗಾರರು ತಲೆ ಕೆಳಗೆ ಮಾಡಿದರು. ಮುಷ್ಪಿಕರ್‌ ರಹೀಮ್‌ ಅವರು 191(341) ರನ್‌ಗಳಿಸಿ ದ್ವಿಶತಕ ವಂಚಿತರಾದರು. ಬಾಂಗ್ಲಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 167.3 ಓವರ್‌ಗಳಿಗೆ ಆಲ್‌ಔಟ್‌ ಆಗಿ 565 ರನ್‌ ಗಳಿಸಿ ಮುನ್ನಡೆ ಸಾಧಿಸಿತು. ಪಾಕ್‌ ಪರ ನಸೀಮ್‌ ಮೂರು, ಮೊಹಮ್ಮದ್‌ ಅಲಿ, ಶಾಹಿನ್‌ ಶಾ ಅಫ್ರಿದಿ ಹಾಗೂ ಶಹಜಾದ್‌ ತಲಾ ಎರಡು ವಿಕೆಟ್‌ ಕಬಳಿಸಿದರು.

ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಪಾಕ್‌ಗೆ ಬಾಂಗ್ಲಾ ಬೌಲರ್‌ಗಳು ಕಾಡಿದರು. ಮೆಹದಿ ಹಸನ್‌ ಪ್ರಮುಖ ನಾಲ್ಕು ವಿಕೆಟ್‌ ಕಬಳಿಸಿದರೇ, ಹಸನ್‌ ಮಹ್ಮೂದ್‌ ಮೂರು ವಿಕೆಟ್‌ ಪಡೆದರು. ರಜ್ವಾನ್‌ 51(80) ರನ್‌ ಗಳಿಸಿದ್ದೇ ಪಾಕ್‌ ಪರ ಹೆಚ್ಚಿನ ರನ್‌ ಆಗಿತ್ತು.

ಅಂತಿಮವಾಗಿ ಪಾಕ್‌ ಕೇವಲ 30ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಬಾಂಗ್ಲಾ ಯಾವುದೇ ವಿಕೆಟ್‌ ನಷ್ಟವಿಲ್ಲದೇ ಗುರಿ ಮುಟ್ಟಿ ಐತಿಹಾಸಿಕ ಗೆಲುವಿಗೆ ಸಾಕ್ಷಿಯಾದರು.

ಪಂದ್ಯಶ್ರೇಷ್ಠ: ಮುಷ್ಪಿಕರ್‌ ರಹೀಮ್‌

ಸಂಕ್ಷಿಪ್ತ ಸ್ಕೋರ್‌:

ಪಾಕಿಸ್ತಾನ್‌ ಮೊದಲ ಇನ್ನಿಂಗ್ಸ್‌: 448ಕ್ಕೆ 6 (113 ಓವರ್‌)
ಬಾಂಗ್ಲಾ ಮೊದಲ ಇನ್ನಿಂಗ್ಸ್‌: 565ಕ್ಕೆ 10 (167.3 ಓವರ್‌)
ಪಾಕಿಸ್ತಾನ್‌ ಎರಡನೇ ಇನ್ನಿಂಗ್ಸ್‌: 146ಕ್ಕೆ 10 (55.5 ಓವರ್‌)
ಬಾಂಗ್ಲಾ ಎರಡನೇ ಇನ್ನಿಂಗ್ಸ್‌: 30ಕ್ಕೆ 0 (6.3 ಓವರ್‌)

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

37 mins ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

2 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

3 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

4 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

4 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

4 hours ago